October 1, 2023 7:16 am

ಸ್ಮಶಾನದಲ್ಲಿ ನಾಮಕರಣ ಮಾಡಿದ ಸತೀಶ್ ಜಾರಕಿಹೊಳಿ

ನಿಪ್ಪಾಣಿ: ದೇಶದಲ್ಲಿಯೇ ಇದೊಂದು ವಿನೂತನ ಹಾಗೂ ಐತಿಹಾಸಿಕ ಕಾರ್ಯಕ್ರಮ. ನಂಬಿಕೆ ಬೇರೆ, ಮೂಢ ನಂಬಿಕೆ ಬೇರೆ, ನಂಬಿಕೆಗಳನ್ನೇ ಕೆಲವರು ವ್ಯಾಪಾರಕ್ಕಾಗಿ ಮೂಢನಂಬಿಕೆಯನ್ನಾಗಿ ಪರಿವರ್ತಿಸಿದ್ದಾರೆ. ಬಿಸಿಲಲ್ಲಿ ದುಡಿಯದೇ ಹೆದರಿಸಿ ಕೆಲವರು ದುಡ್ಡು ಮಾಡುತ್ತಿದ್ದಾರೆ. ಬುದ್ಧ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಕಾಲದಿಂದಲೂ ಇಂಥವರ ವಿರುದ್ಧ ಹೋರಾಟಗಳು ನಡೆಯುತ್ತಲೇ ಬಂದಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸ್ಮಶಾನ ಭೂಮಿಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ, ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿಯ ಶಾಸಕರೂ ಆದ ಸತೀಶ ಜಾರಕಿಹೊಳಿಯವರು ಇಂದು ಮತ್ತೊಂದು ಐತಿಹಾಸಿಕ ಕಾರ್ಯಕ್ರಮವನ್ನು ಸ್ಮಶಾನದಲ್ಲಿಯೇ ನಡೆಸಿದರು. ಇಂದು ಮಗುವಿಗೆ ನಾಮಕರಣ ಮಾಡುವ ಮೂಲಕ ಪರಿವರ್ತನೆಯ ಮತ್ತೊಂದು ಮಜಲನ್ನು ವಿಸ್ತರಿಸಿದರು. ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಬಾಳು ಬರಗಾಲೆಯವರ ಮೊಮ್ಮಗನಿಗೆ ಸ್ಮಶಾನದಲ್ಲಿ ತೊಟ್ಟಿಲು ತೂಗಿ, ‘ಭೀಮರಾವ್’ ಎಂದು ನಾಮಕರಣ ಮಾಡಿದರು. ಕೃಷ್ಣಾ ನದಿ ತೀರದಿಂದ ಮತ್ತೊಬ್ಬ ಭೀಮರಾವ್ ಹೋರಾಟ ಮಾಡಲಿ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಂತೆ ಬೆಳೆಯಲಿ, ದೇಶದ ಕೊಳೆ ತೊಳೆಯಲಿ ಎಂದು ಸತೀಶ್ ಜಾರಕಿಹೊಳಿ ಹರಸಿದರು.

ಬುದ್ಧ, ಬಸವ, ಅಂಬೇಡ್ಕರ್, ಶಾಹು ಮಹಾರಾಜ್, ಪೆರಿಯಾರ್, ನಾರಾಯಣ ಗುರು, ಫುಲೆ ದಂಪತಿಗಳ ತತ್ವ ಆದರ್ಶಗಳು ನಮಗೆ ಮಾದರಿಯಾಗಲಿ. ದೇವಸ್ಥಾನ, ಸ್ಮಶಾನ ಎಲ್ಲವೂ ಪವಿತ್ರ ಸ್ಥಳಗಳೇ. ಆದರೆ ಕೆಲವೇ ಕೆಲವರು ತಮ್ಮ ಹೊಟ್ಟೆಪಾಡಿಗಾಗಿ ಜನರನ್ನು ಹೆದರಿಸುತ್ತಿದ್ದಾರೆ. ಪ್ರತಿಯೊಬ್ಬರು ಸತ್ತ ನಂತರ ಹೋಗುವುದು ಸ್ಮಶಾನಕ್ಕೆ. ಹೀಗಾಗಿ ಸ್ಮಶಾನ ಕೆಟ್ಟ ಸ್ಥಳ ಎಂಬುದನ್ನು ನಾವು ಬಿಡಬೇಕು. ಹಂತ ಹಂತವಾಗಿ ಪರಿವರ್ತನೆಯಾಗಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮೌಢನಂಬಿಕೆ, ಕಂದಾಚಾರ ಕುರಿತು ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾನವ ಬಂಧುತ್ವ ವೇದಿಕೆಯ ಮೂಲಕ ಮಹತ್ವದ ಕೆಲಸಗಳನ್ನು ನಡೆಸುತ್ತಿದ್ದಾರೆ. ಇದರ ರಾಜ್ಯ ಸಂಚಾಲಕರಾಗಿ ರವೀಂದ್ರ ನಾಯ್ಕರ್ ರಾಜ್ಯಾದ್ಯಂತ ಸಂಘಟನೆಯನ್ನು ಸಕ್ರಿಯವಾಗಿಟ್ಟಿದ್ದಾರೆ.

ಈ ಸಂಘಟನೆ ಮೂಢನಂಬಿಕೆಗಳ ವಿರುದ್ಧದ ಹೋರಾಟವನ್ನು ಆಧರಿಸಿರುವ ಅನೇಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಆಯೋಜಿಸುವ ಮೂಲಕ ಪ್ರಸಿದ್ಧಿಯಾಗಿದೆ. ಡಿಸೆಂಬರ್ 6ರಂದು ಬೆಳಗಾವಿ, ಗೋಕಾಕ್ ಸೇರಿದಂತೆ ಅನೇಕ ಕಡೆ ಸ್ಮಶಾನದಲ್ಲಿ ಪರಿವರ್ತನಾ ದಿನದ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಢನಂಬಿಕೆಗಳ ವಿರುದ್ಧ ಹೋರಾಟವನ್ನು ನಡೆಸಲಾಗುತ್ತಿದೆ.

ಇತ್ತೀಚಿಗೆ ಸತೀಶ ಜಾರಕಿಹೊಳಿಯವರು ತಮ್ಮ ಹೊಸ ಕಾರನ್ನು ಸ್ಮಶಾನದಿಂದಲೇ ಚಾಲನೆ ಮಾಡಿಸಿದ್ದರು. ಈ ಮೂಲಕ ಮೂಢನಂಬಿಕೆಯನ್ನು ತೊಡೆದುಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಪಂ ಉಪಾಧ್ಯಕ್ಷ ಅರುಣ್ ಕಟಾಂಬಳೆ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು