March 25, 2023 3:58 pm

ಸ್ಮಶಾನದಲ್ಲಿ ನಾಮಕರಣ ಮಾಡಿದ ಸತೀಶ್ ಜಾರಕಿಹೊಳಿ

ನಿಪ್ಪಾಣಿ: ದೇಶದಲ್ಲಿಯೇ ಇದೊಂದು ವಿನೂತನ ಹಾಗೂ ಐತಿಹಾಸಿಕ ಕಾರ್ಯಕ್ರಮ. ನಂಬಿಕೆ ಬೇರೆ, ಮೂಢ ನಂಬಿಕೆ ಬೇರೆ, ನಂಬಿಕೆಗಳನ್ನೇ ಕೆಲವರು ವ್ಯಾಪಾರಕ್ಕಾಗಿ ಮೂಢನಂಬಿಕೆಯನ್ನಾಗಿ ಪರಿವರ್ತಿಸಿದ್ದಾರೆ. ಬಿಸಿಲಲ್ಲಿ ದುಡಿಯದೇ ಹೆದರಿಸಿ ಕೆಲವರು ದುಡ್ಡು ಮಾಡುತ್ತಿದ್ದಾರೆ. ಬುದ್ಧ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಕಾಲದಿಂದಲೂ ಇಂಥವರ ವಿರುದ್ಧ ಹೋರಾಟಗಳು ನಡೆಯುತ್ತಲೇ ಬಂದಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸ್ಮಶಾನ ಭೂಮಿಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ, ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿಯ ಶಾಸಕರೂ ಆದ ಸತೀಶ ಜಾರಕಿಹೊಳಿಯವರು ಇಂದು ಮತ್ತೊಂದು ಐತಿಹಾಸಿಕ ಕಾರ್ಯಕ್ರಮವನ್ನು ಸ್ಮಶಾನದಲ್ಲಿಯೇ ನಡೆಸಿದರು. ಇಂದು ಮಗುವಿಗೆ ನಾಮಕರಣ ಮಾಡುವ ಮೂಲಕ ಪರಿವರ್ತನೆಯ ಮತ್ತೊಂದು ಮಜಲನ್ನು ವಿಸ್ತರಿಸಿದರು. ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಬಾಳು ಬರಗಾಲೆಯವರ ಮೊಮ್ಮಗನಿಗೆ ಸ್ಮಶಾನದಲ್ಲಿ ತೊಟ್ಟಿಲು ತೂಗಿ, ‘ಭೀಮರಾವ್’ ಎಂದು ನಾಮಕರಣ ಮಾಡಿದರು. ಕೃಷ್ಣಾ ನದಿ ತೀರದಿಂದ ಮತ್ತೊಬ್ಬ ಭೀಮರಾವ್ ಹೋರಾಟ ಮಾಡಲಿ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಂತೆ ಬೆಳೆಯಲಿ, ದೇಶದ ಕೊಳೆ ತೊಳೆಯಲಿ ಎಂದು ಸತೀಶ್ ಜಾರಕಿಹೊಳಿ ಹರಸಿದರು.

ಬುದ್ಧ, ಬಸವ, ಅಂಬೇಡ್ಕರ್, ಶಾಹು ಮಹಾರಾಜ್, ಪೆರಿಯಾರ್, ನಾರಾಯಣ ಗುರು, ಫುಲೆ ದಂಪತಿಗಳ ತತ್ವ ಆದರ್ಶಗಳು ನಮಗೆ ಮಾದರಿಯಾಗಲಿ. ದೇವಸ್ಥಾನ, ಸ್ಮಶಾನ ಎಲ್ಲವೂ ಪವಿತ್ರ ಸ್ಥಳಗಳೇ. ಆದರೆ ಕೆಲವೇ ಕೆಲವರು ತಮ್ಮ ಹೊಟ್ಟೆಪಾಡಿಗಾಗಿ ಜನರನ್ನು ಹೆದರಿಸುತ್ತಿದ್ದಾರೆ. ಪ್ರತಿಯೊಬ್ಬರು ಸತ್ತ ನಂತರ ಹೋಗುವುದು ಸ್ಮಶಾನಕ್ಕೆ. ಹೀಗಾಗಿ ಸ್ಮಶಾನ ಕೆಟ್ಟ ಸ್ಥಳ ಎಂಬುದನ್ನು ನಾವು ಬಿಡಬೇಕು. ಹಂತ ಹಂತವಾಗಿ ಪರಿವರ್ತನೆಯಾಗಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮೌಢನಂಬಿಕೆ, ಕಂದಾಚಾರ ಕುರಿತು ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾನವ ಬಂಧುತ್ವ ವೇದಿಕೆಯ ಮೂಲಕ ಮಹತ್ವದ ಕೆಲಸಗಳನ್ನು ನಡೆಸುತ್ತಿದ್ದಾರೆ. ಇದರ ರಾಜ್ಯ ಸಂಚಾಲಕರಾಗಿ ರವೀಂದ್ರ ನಾಯ್ಕರ್ ರಾಜ್ಯಾದ್ಯಂತ ಸಂಘಟನೆಯನ್ನು ಸಕ್ರಿಯವಾಗಿಟ್ಟಿದ್ದಾರೆ.

ಈ ಸಂಘಟನೆ ಮೂಢನಂಬಿಕೆಗಳ ವಿರುದ್ಧದ ಹೋರಾಟವನ್ನು ಆಧರಿಸಿರುವ ಅನೇಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಆಯೋಜಿಸುವ ಮೂಲಕ ಪ್ರಸಿದ್ಧಿಯಾಗಿದೆ. ಡಿಸೆಂಬರ್ 6ರಂದು ಬೆಳಗಾವಿ, ಗೋಕಾಕ್ ಸೇರಿದಂತೆ ಅನೇಕ ಕಡೆ ಸ್ಮಶಾನದಲ್ಲಿ ಪರಿವರ್ತನಾ ದಿನದ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಢನಂಬಿಕೆಗಳ ವಿರುದ್ಧ ಹೋರಾಟವನ್ನು ನಡೆಸಲಾಗುತ್ತಿದೆ.

ಇತ್ತೀಚಿಗೆ ಸತೀಶ ಜಾರಕಿಹೊಳಿಯವರು ತಮ್ಮ ಹೊಸ ಕಾರನ್ನು ಸ್ಮಶಾನದಿಂದಲೇ ಚಾಲನೆ ಮಾಡಿಸಿದ್ದರು. ಈ ಮೂಲಕ ಮೂಢನಂಬಿಕೆಯನ್ನು ತೊಡೆದುಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಪಂ ಉಪಾಧ್ಯಕ್ಷ ಅರುಣ್ ಕಟಾಂಬಳೆ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ