ಸ್ಮಶಾನದಲ್ಲಿ ನಾಮಕರಣ ಮಾಡಿದ ಸತೀಶ್ ಜಾರಕಿಹೊಳಿ

ನಿಪ್ಪಾಣಿ: ದೇಶದಲ್ಲಿಯೇ ಇದೊಂದು ವಿನೂತನ ಹಾಗೂ ಐತಿಹಾಸಿಕ ಕಾರ್ಯಕ್ರಮ. ನಂಬಿಕೆ ಬೇರೆ, ಮೂಢ ನಂಬಿಕೆ ಬೇರೆ, ನಂಬಿಕೆಗಳನ್ನೇ ಕೆಲವರು ವ್ಯಾಪಾರಕ್ಕಾಗಿ ಮೂಢನಂಬಿಕೆಯನ್ನಾಗಿ ಪರಿವರ್ತಿಸಿದ್ದಾರೆ. ಬಿಸಿಲಲ್ಲಿ ದುಡಿಯದೇ ಹೆದರಿಸಿ ಕೆಲವರು ದುಡ್ಡು ಮಾಡುತ್ತಿದ್ದಾರೆ. ಬುದ್ಧ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಕಾಲದಿಂದಲೂ ಇಂಥವರ ವಿರುದ್ಧ ಹೋರಾಟಗಳು ನಡೆಯುತ್ತಲೇ ಬಂದಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸ್ಮಶಾನ ಭೂಮಿಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ, ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿಯ ಶಾಸಕರೂ ಆದ ಸತೀಶ ಜಾರಕಿಹೊಳಿಯವರು ಇಂದು ಮತ್ತೊಂದು ಐತಿಹಾಸಿಕ ಕಾರ್ಯಕ್ರಮವನ್ನು ಸ್ಮಶಾನದಲ್ಲಿಯೇ ನಡೆಸಿದರು. ಇಂದು ಮಗುವಿಗೆ ನಾಮಕರಣ ಮಾಡುವ ಮೂಲಕ ಪರಿವರ್ತನೆಯ ಮತ್ತೊಂದು ಮಜಲನ್ನು ವಿಸ್ತರಿಸಿದರು. ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಬಾಳು ಬರಗಾಲೆಯವರ ಮೊಮ್ಮಗನಿಗೆ ಸ್ಮಶಾನದಲ್ಲಿ ತೊಟ್ಟಿಲು ತೂಗಿ, ‘ಭೀಮರಾವ್’ ಎಂದು ನಾಮಕರಣ ಮಾಡಿದರು. ಕೃಷ್ಣಾ ನದಿ ತೀರದಿಂದ ಮತ್ತೊಬ್ಬ ಭೀಮರಾವ್ ಹೋರಾಟ ಮಾಡಲಿ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಂತೆ ಬೆಳೆಯಲಿ, ದೇಶದ ಕೊಳೆ ತೊಳೆಯಲಿ ಎಂದು ಸತೀಶ್ ಜಾರಕಿಹೊಳಿ ಹರಸಿದರು.

ಬುದ್ಧ, ಬಸವ, ಅಂಬೇಡ್ಕರ್, ಶಾಹು ಮಹಾರಾಜ್, ಪೆರಿಯಾರ್, ನಾರಾಯಣ ಗುರು, ಫುಲೆ ದಂಪತಿಗಳ ತತ್ವ ಆದರ್ಶಗಳು ನಮಗೆ ಮಾದರಿಯಾಗಲಿ. ದೇವಸ್ಥಾನ, ಸ್ಮಶಾನ ಎಲ್ಲವೂ ಪವಿತ್ರ ಸ್ಥಳಗಳೇ. ಆದರೆ ಕೆಲವೇ ಕೆಲವರು ತಮ್ಮ ಹೊಟ್ಟೆಪಾಡಿಗಾಗಿ ಜನರನ್ನು ಹೆದರಿಸುತ್ತಿದ್ದಾರೆ. ಪ್ರತಿಯೊಬ್ಬರು ಸತ್ತ ನಂತರ ಹೋಗುವುದು ಸ್ಮಶಾನಕ್ಕೆ. ಹೀಗಾಗಿ ಸ್ಮಶಾನ ಕೆಟ್ಟ ಸ್ಥಳ ಎಂಬುದನ್ನು ನಾವು ಬಿಡಬೇಕು. ಹಂತ ಹಂತವಾಗಿ ಪರಿವರ್ತನೆಯಾಗಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮೌಢನಂಬಿಕೆ, ಕಂದಾಚಾರ ಕುರಿತು ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾನವ ಬಂಧುತ್ವ ವೇದಿಕೆಯ ಮೂಲಕ ಮಹತ್ವದ ಕೆಲಸಗಳನ್ನು ನಡೆಸುತ್ತಿದ್ದಾರೆ. ಇದರ ರಾಜ್ಯ ಸಂಚಾಲಕರಾಗಿ ರವೀಂದ್ರ ನಾಯ್ಕರ್ ರಾಜ್ಯಾದ್ಯಂತ ಸಂಘಟನೆಯನ್ನು ಸಕ್ರಿಯವಾಗಿಟ್ಟಿದ್ದಾರೆ.

ಈ ಸಂಘಟನೆ ಮೂಢನಂಬಿಕೆಗಳ ವಿರುದ್ಧದ ಹೋರಾಟವನ್ನು ಆಧರಿಸಿರುವ ಅನೇಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಆಯೋಜಿಸುವ ಮೂಲಕ ಪ್ರಸಿದ್ಧಿಯಾಗಿದೆ. ಡಿಸೆಂಬರ್ 6ರಂದು ಬೆಳಗಾವಿ, ಗೋಕಾಕ್ ಸೇರಿದಂತೆ ಅನೇಕ ಕಡೆ ಸ್ಮಶಾನದಲ್ಲಿ ಪರಿವರ್ತನಾ ದಿನದ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಢನಂಬಿಕೆಗಳ ವಿರುದ್ಧ ಹೋರಾಟವನ್ನು ನಡೆಸಲಾಗುತ್ತಿದೆ.

ಇತ್ತೀಚಿಗೆ ಸತೀಶ ಜಾರಕಿಹೊಳಿಯವರು ತಮ್ಮ ಹೊಸ ಕಾರನ್ನು ಸ್ಮಶಾನದಿಂದಲೇ ಚಾಲನೆ ಮಾಡಿಸಿದ್ದರು. ಈ ಮೂಲಕ ಮೂಢನಂಬಿಕೆಯನ್ನು ತೊಡೆದುಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಜಿಪಂ ಉಪಾಧ್ಯಕ್ಷ ಅರುಣ್ ಕಟಾಂಬಳೆ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]