October 1, 2023 7:57 am

ಗರಣಿ ಗಿರೀಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಒಡನಾಡಿಗಳು

ಮಾನವ ಬಂಧುತ್ವ ವೇದಿಕೆಯ ತುಮಕೂರು ಜಿಲ್ಲಾ ಸಂಚಾಲಕ ಗರಣಿ ಗಿರೀಶ್ ಅವರಿಗೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಜೂಮ್ ಮೀಟಿಂಗ್ ಮೂಲಕ ನಡೆಸಲಾಯಿತು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್, ವಿಭಾಗೀಯ ಸಂಚಾಲಕರಾದ ಜಯಕುಮಾರ್, ಲೀಲಾ ಸಂಪಿಗೆ, ಪ್ರಕಾಶ್ ಹಾದಿಮನಿ, ಮಹಾಲಿಂಗಪ್ಪ ಆಲಬಾಳ, ಅನಂತ ನಾಯ್ಕ್, ಕಲಬುರ್ಗಿ ವಿಭಾಗೀಯ ಸಂಚಾಲಕ ನಾಗೇಂದ್ರ ಜವಳಿ, ಮಾನವ ಬಂಧುತ್ವ ವೇದಿಕೆಯ ರಾಮಕೃಷ್ಣ ಪಾನಬುಡೆ, ಗರಣಿ ಗಿರೀಶ್ ಅವರ ತಂದೆ ಮತ್ತು ಇನ್ನಿತರ ಒಡನಾಡಿಗಳು ಶ್ರದ್ಧಾಂಜಲಿಯನ್ನು ಸಲ್ಲಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ರವೀಂದ್ರ ನಾಯ್ಕರ್, ಸತೀಶ್ ಜಾರಕಿಹೊಳಿಯವರಿಗೆ ಅತ್ಯಂತ ಆಪ್ತರಾಗಿದ್ದ ಗರಣಿ ಗಿರೀಶ್ ನನಗೆ ಸಹೋದರನಂತೆ ಇದ್ದರು. ಅವರು ನನ್ನೊಂದಿಗೆ ಕಳೆದ ಕ್ಷಣಗಳು ಮತ್ತು ನಮ್ಮ ಕುಟುಂಬದವರೊಂದಿಗೆ ಬೆಸೆದ ನಂಟು ತೀರಾ ಅಪರೂಪದ್ದು ಎಂದರು.

ಗರಣಿ ಗಿರೀಶ್ ಸತೀಶ್ ಜಾರಕಿಹೊಳಿಯವರನ್ನು ತಮ್ಮ ಮನೆಗೆ ಕರೆಸಿಕೊಳ್ಳಬೇಕು, ಅಲ್ಲಿಯೇ ಗೌರವ ಸಲ್ಲಿಸಬೇಕು ಎಂದು ಆಸೆ ಪಟ್ಟಿದ್ದರು. ಕಳೆದ ಬಾರಿಯ ಪಾವಗಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಆಸೆಯನ್ನು ಈಡೇರಿಸಿಕೊಂಡರು ಎಂದರು.

ಅಲ್ಲದೇ, ವಾರಕ್ಕೊಮ್ಮೆಯಾದರೂ ಸತೀಶ್ ಜಾರಕಿಹೊಳಿಯವರನ್ನು ನೋಡಬೇಕು, ಮಾತಾಡಿಸಬೇಕು ಎಂದು ಗಿರೀಶ್ ಇಚ್ಛಿಸುತ್ತಿದ್ದರು. ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಬೆಂಗಳೂರಿಗೆ ಹೋಗಿ ಸತೀಶ್ ಜಾರಕಿಹೊಳಿಯವರನ್ನು ನೋಡಿ ಸುಮ್ಮನೆ ವಾಪಸ್ ಆಗುತ್ತಿದ್ದರು. ಆಗ ಸತೀಶ್ ಜಾರಕಿಹೊಳಿಯವರು ಗರಣಿ ಗಿರೀಶ್ ಬಂದು ಹೋದ. ಯಾಕೆ? ಎಂದು ನನ್ನನ್ನು ವಿಚಾರಿಸುತ್ತಿದ್ದರು. ನಾನು ಯಾಕೆ ಹೋಗಿದ್ದಿರಿ ಎಂದು ಕೇಳಿದರೆ, ಏನೂ ಇಲ್ಲ, ಸುಮ್ಮನೇ ಹೋಗಿದ್ದೆ ಎನ್ನುತ್ತಿದ್ದರು.ಇಷ್ಟು ಆಪ್ತವಾಗಿ ಸತೀಶ್ ಜಾರಕಿಹೊಳಿಯವರನ್ನು ಹಚ್ಚಿಕೊಂಡಿದ್ದರು ಎಂದರು.

ಇದೇ ವೇಳೆ ಮಾತಾಡಿದ ಮಹಾಲಿಂಗಪ್ಪ ಆಲಬಾಳ, ಬೆಳಗಾವಿ ಲೋಕಸಭೆ ಉಪಚುನಾವಣೆ ವೇಳೆ ಬೆಳಗಾವಿಗೆ ಬಂದಿದ್ದ ಸಮಯದಲ್ಲಿ ಅವರು ನಮ್ಮೊಂದಿಗಿದ್ದರು. ದಿನ ಬೆಳಿಗ್ಗೆ ಎದ್ದು ಸುತ್ತಮುತ್ತಲ ಊರಿಗೆ ಪ್ರಚಾರಕ್ಕೆ ತೆರಳುತ್ತಿದ್ದರು. ಚುನಾವಣೆ ಮುಗಿದ ನಂತರ ಅವರು ತುಮಕೂರಿಗೆ ತೆರಳಿದ್ದರು. ಬೆಂಗಳೂರಿಗೆ ಹೋಗುವ ಸಮಯದಲ್ಲಿ ನಿಮ್ಮನ್ನು ಭೇಟಿಯಾಗುತ್ತೇನೆ ಎಂದಿದ್ದೆ. ಆದರೆ, ಅವರನ್ನು ಭೇಟಿಯಾಗುವ ಅವಕಾಶವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಜೊತೆಗೆ, ಅವರ ಸಮಸಮಾಜ ನಿರ್ಮಿಸುವ ಕನಸನ್ನು ಈಡೇರಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊರಬೇಕು. ಅವರ ಕುಟುಂಬದವರಿಗೆ ಸಾಂತ್ವನ ಹೇಳುವುದು ಹೇಗೆ ಎಂದು ನನಗೆ ಗೊತ್ತಾಗುತ್ತಿಲ್ಲ. ಆದರೆ, ಅವರ ಆಶಯಗಳನ್ನು ನಾವೆಲ್ಲ ಈಡೇರಿಸುವ ಶಪಥವನ್ನು ಮಾಡೋಣ ಎಂದರು.

ಕಾರ್ಯಕ್ರಮವನ್ನು ವಕೀಲ ಅನಂತ ನಾಯಕ್ ನಿವರ್ಹಿಸಿದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು