March 25, 2023 4:39 pm

ಗರಣಿ ಗಿರೀಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಒಡನಾಡಿಗಳು

ಮಾನವ ಬಂಧುತ್ವ ವೇದಿಕೆಯ ತುಮಕೂರು ಜಿಲ್ಲಾ ಸಂಚಾಲಕ ಗರಣಿ ಗಿರೀಶ್ ಅವರಿಗೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಜೂಮ್ ಮೀಟಿಂಗ್ ಮೂಲಕ ನಡೆಸಲಾಯಿತು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್, ವಿಭಾಗೀಯ ಸಂಚಾಲಕರಾದ ಜಯಕುಮಾರ್, ಲೀಲಾ ಸಂಪಿಗೆ, ಪ್ರಕಾಶ್ ಹಾದಿಮನಿ, ಮಹಾಲಿಂಗಪ್ಪ ಆಲಬಾಳ, ಅನಂತ ನಾಯ್ಕ್, ಕಲಬುರ್ಗಿ ವಿಭಾಗೀಯ ಸಂಚಾಲಕ ನಾಗೇಂದ್ರ ಜವಳಿ, ಮಾನವ ಬಂಧುತ್ವ ವೇದಿಕೆಯ ರಾಮಕೃಷ್ಣ ಪಾನಬುಡೆ, ಗರಣಿ ಗಿರೀಶ್ ಅವರ ತಂದೆ ಮತ್ತು ಇನ್ನಿತರ ಒಡನಾಡಿಗಳು ಶ್ರದ್ಧಾಂಜಲಿಯನ್ನು ಸಲ್ಲಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ರವೀಂದ್ರ ನಾಯ್ಕರ್, ಸತೀಶ್ ಜಾರಕಿಹೊಳಿಯವರಿಗೆ ಅತ್ಯಂತ ಆಪ್ತರಾಗಿದ್ದ ಗರಣಿ ಗಿರೀಶ್ ನನಗೆ ಸಹೋದರನಂತೆ ಇದ್ದರು. ಅವರು ನನ್ನೊಂದಿಗೆ ಕಳೆದ ಕ್ಷಣಗಳು ಮತ್ತು ನಮ್ಮ ಕುಟುಂಬದವರೊಂದಿಗೆ ಬೆಸೆದ ನಂಟು ತೀರಾ ಅಪರೂಪದ್ದು ಎಂದರು.

ಗರಣಿ ಗಿರೀಶ್ ಸತೀಶ್ ಜಾರಕಿಹೊಳಿಯವರನ್ನು ತಮ್ಮ ಮನೆಗೆ ಕರೆಸಿಕೊಳ್ಳಬೇಕು, ಅಲ್ಲಿಯೇ ಗೌರವ ಸಲ್ಲಿಸಬೇಕು ಎಂದು ಆಸೆ ಪಟ್ಟಿದ್ದರು. ಕಳೆದ ಬಾರಿಯ ಪಾವಗಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಆಸೆಯನ್ನು ಈಡೇರಿಸಿಕೊಂಡರು ಎಂದರು.

ಅಲ್ಲದೇ, ವಾರಕ್ಕೊಮ್ಮೆಯಾದರೂ ಸತೀಶ್ ಜಾರಕಿಹೊಳಿಯವರನ್ನು ನೋಡಬೇಕು, ಮಾತಾಡಿಸಬೇಕು ಎಂದು ಗಿರೀಶ್ ಇಚ್ಛಿಸುತ್ತಿದ್ದರು. ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಬೆಂಗಳೂರಿಗೆ ಹೋಗಿ ಸತೀಶ್ ಜಾರಕಿಹೊಳಿಯವರನ್ನು ನೋಡಿ ಸುಮ್ಮನೆ ವಾಪಸ್ ಆಗುತ್ತಿದ್ದರು. ಆಗ ಸತೀಶ್ ಜಾರಕಿಹೊಳಿಯವರು ಗರಣಿ ಗಿರೀಶ್ ಬಂದು ಹೋದ. ಯಾಕೆ? ಎಂದು ನನ್ನನ್ನು ವಿಚಾರಿಸುತ್ತಿದ್ದರು. ನಾನು ಯಾಕೆ ಹೋಗಿದ್ದಿರಿ ಎಂದು ಕೇಳಿದರೆ, ಏನೂ ಇಲ್ಲ, ಸುಮ್ಮನೇ ಹೋಗಿದ್ದೆ ಎನ್ನುತ್ತಿದ್ದರು.ಇಷ್ಟು ಆಪ್ತವಾಗಿ ಸತೀಶ್ ಜಾರಕಿಹೊಳಿಯವರನ್ನು ಹಚ್ಚಿಕೊಂಡಿದ್ದರು ಎಂದರು.

ಇದೇ ವೇಳೆ ಮಾತಾಡಿದ ಮಹಾಲಿಂಗಪ್ಪ ಆಲಬಾಳ, ಬೆಳಗಾವಿ ಲೋಕಸಭೆ ಉಪಚುನಾವಣೆ ವೇಳೆ ಬೆಳಗಾವಿಗೆ ಬಂದಿದ್ದ ಸಮಯದಲ್ಲಿ ಅವರು ನಮ್ಮೊಂದಿಗಿದ್ದರು. ದಿನ ಬೆಳಿಗ್ಗೆ ಎದ್ದು ಸುತ್ತಮುತ್ತಲ ಊರಿಗೆ ಪ್ರಚಾರಕ್ಕೆ ತೆರಳುತ್ತಿದ್ದರು. ಚುನಾವಣೆ ಮುಗಿದ ನಂತರ ಅವರು ತುಮಕೂರಿಗೆ ತೆರಳಿದ್ದರು. ಬೆಂಗಳೂರಿಗೆ ಹೋಗುವ ಸಮಯದಲ್ಲಿ ನಿಮ್ಮನ್ನು ಭೇಟಿಯಾಗುತ್ತೇನೆ ಎಂದಿದ್ದೆ. ಆದರೆ, ಅವರನ್ನು ಭೇಟಿಯಾಗುವ ಅವಕಾಶವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಊಹಿಸಿರಲಿಲ್ಲ ಎಂದರು.

ಜೊತೆಗೆ, ಅವರ ಸಮಸಮಾಜ ನಿರ್ಮಿಸುವ ಕನಸನ್ನು ಈಡೇರಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊರಬೇಕು. ಅವರ ಕುಟುಂಬದವರಿಗೆ ಸಾಂತ್ವನ ಹೇಳುವುದು ಹೇಗೆ ಎಂದು ನನಗೆ ಗೊತ್ತಾಗುತ್ತಿಲ್ಲ. ಆದರೆ, ಅವರ ಆಶಯಗಳನ್ನು ನಾವೆಲ್ಲ ಈಡೇರಿಸುವ ಶಪಥವನ್ನು ಮಾಡೋಣ ಎಂದರು.

ಕಾರ್ಯಕ್ರಮವನ್ನು ವಕೀಲ ಅನಂತ ನಾಯಕ್ ನಿವರ್ಹಿಸಿದರು.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ