September 21, 2023 11:53 pm

ನಾಟಕ ಮತ್ತಿತರ ಕಲೆಗಳಿಗೆ ನಿರಂತರ ಪ್ರೋತ್ಸಾಹಕ್ಕೆ ಬದ್ಧ: ಸತೀಶ್ ಜಾರಕಿಹೊಳಿ

ಬೆಳಗಾವಿ: ನಾಟಕ, ಸಂಗೀತ ಮತ್ತು ಇತರ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲು ನೂತನ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತಾಡಿದ ಅವರು, ಪ್ರತಿಭೆ ನಿಮ್ಮದು ಪ್ರೋತ್ಸಾಹ ನಮ್ಮದು ಎಂಬ ಟ್ಯಾಗ್ ಲೈನ್ ಅಡಿಯಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಅನ್ನು ಈಗಾಗಲೇ ನೀಡಲಾಗುತ್ತಿದೆ. ಇದೀಗ ನಾಟಕ, ಸಂಗೀತ ಮೊದಲಾದ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಲೆಗಳ ಕಲರವ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಮತ್ತು ಬಡಕುಟುಂಬದ ಆಸಕ್ತರಿಗೆ ಲಾಭವಾದರೆ ನಮ್ಮ ಶ್ರಮ ಸಾರ್ಥಕವಾದಂತೆ ಎಂದರು.

ಗ್ರಾಮೀಣ, ಬಡ, ದಲಿತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈಗಾಗಲೇ ಸೇನೆ, ಪೊಲೀಸ್ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಐಎಎಸ್, ಕೆಎಎಸ್ ತರಬೇತಿಯನ್ನು ಕೂಡ ನೀಡಲು ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದರು.

13 ದಿನಗಳ ಕಾಲ ತರಬೇತಿ ಪಡೆದ ಶಿಬಿರಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಅವರ ಗಾಯನ ಮತ್ತು ಅಭಿನಯ ನೋಡಿದ ನಂತರ ತರಬೇತಿ ಯಶಸ್ವಿಯಾಗಿದೆ ಎನಿಸುತ್ತದೆ. ಇದೇ ಜುಲೈ 1ರಿಂದ ಹೊಸ ಶಿಬಿರಾರ್ಥಿಗಳಿಗೆ ಕಲೆಗಳ ಕಲರವ ತರಬೇತಿಯನ್ನು  ನೀಡಲಾಗುತ್ತದೆ. ಮುಂದೆ ಇನ್ನೆರಡು ತರಬೇತಿ ಮುಗಿದ ನಂತರ ಈಗ ತರಬೇತಿ ಪಡೆದವರನ್ನು ಮತ್ತೊಂದು ಅವಧಿಗೆ ತರಬೇತಿಗೆ ಆಹ್ವಾನಿಸಲಾಗುತ್ತದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ಕಿವಿಮಾತು ಹೇಳಿದರು.

ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ರಂಗಚಟುವಟಿಕೆಯ ತರಗತಿಗಳನ್ನು ನಡೆಸಿದ ನಟ, ನಿರ್ದೇಶಕ ಡಿಂಗ್ರಿ ನರೇಶ್ ಮಾತನಾಡಿ, ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಕಲೆಗಳ ಕಲರವ ಕಾರ್ಯಕ್ರಮ ರಂಗಭೂಮಿ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆಯಾಗಲಿದೆ. ಇಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿರುವ ಸತೀಶ್ ಜಾರಕಿಹೊಳಿಯವರು ಮತ್ತು ಸತೀಶ್ ಜಾರಕಿಹೊಳಿ ಫೌಂಡೇಷನ್ ಕ್ರಮ ಶ್ಲಾಘನೀಯ ಎಂದರು.

ಶಿಬಿರದ ಅವಧಿಯಲ್ಲಿ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಇನ್ನುಳಿದ ಸಿಬ್ಬಂದಿ ನಮ್ಮೆಲ್ಲರನ್ನೂ ಗೌರವದಿಂದ ನಡೆಸಿಕೊಂಡರು. ಕಿಚನ್ ಸಿಬ್ಬಂದಿ ತಾಯಿಗಿಂತ ಹೆಚ್ಚಿನ ಮಮತೆಯಿಂದ ನಮ್ಮನ್ನು ಕಂಡರು. ಇದಕ್ಕೆಲ್ಲ ಕಾರಣವಾದ ಸತೀಶ್ ಜಾರಕಿಹೊಳಿ ಫೌಂಡೇಷನ್ ಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.

ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು ಮಾತನಾಡಿ, ಸತೀಶ್ ಜಾರಕಿಹೊಳಿ ಫೌಂಡೇಷನ್ ಮತ್ತು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ನಟನೆ, ರಂಗಸಜ್ಜಿಕೆ, ಮೇಕಪ್, ಸಂಗೀತ, ಮೇಕಪ್ ಸೇರಿದಂತೆ ಎಲ್ಲ ತರಬೇತಿಯನ್ನು ಕೊಡಲಾಯಿತು. ಊಟ, ವಸತಿ, ವೈದ್ಯಕೀಯ ಸೇವೆ ಸೇರಿದಂತೆ ಎಲ್ಲವನ್ನೂ ಉಚಿತವಾಗಿ ಕೊಡಲಾಯಿತು. ನಮ್ಮನ್ನು ಇಲ್ಲಿ ಮನೆಯವರಿಗಿಂತ ಹೆಚ್ಚಿನದಾಗಿ ನಡೆಸಿಕೊಳ್ಳಲಾಯಿತು. ತರಬೇತಿ ಮುಗಿದ ನಂತರ ಮನೆಗೆ ತೆರಳಲು ಕೂಡ ಮನಸ್ಸಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್, ಸತೀಶ್ ಜಾರಕಿಹೊಳಿ ಫೌಂಡೇಷನ್ ನ ರಿಯಾಜ್ ಚೌಗಲಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ ಗಸ್ತಿ, ಸಂಗೀತ ಮಾಸ್ತರ್ ವಿಠ್ಠಲ್ ಮೊದಲಾದವರು ಭಾಗವಹಿಸಿದ್ದರು. 

ಸಮಾರೋಪ ಸಮಾರಂಭಕ್ಕೂ ಮುನ್ನ ಶಿಬಿರದಲ್ಲಿ ಸಂಗೀತ ಕಲಿತ ವಿದ್ಯಾರ್ಥಿಗಳು ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅನಂತರ ರಂಗನಾಥ್ ಶಿವಮೊಗ್ಗ ರಚನೆಯ, ಡಿಂಗ್ರಿ ನರೇಶ್ ನಿರ್ದೇಶನದ ಅಹಿಂಸೋ ಪರಮ ಧರ್ಮ ನಾಟಕವನ್ನು ಪ್ರಯೋಗಿಸಲಾಯಿತು. ಮೇಕಪ್, ರಂಗಸಜ್ಜಿಕೆ ಮತ್ತು ಬೆಳಕು ನಿರ್ವಹಣೆಯನ್ನು ಮಧುಸೂದನ್ ನಿರ್ವಹಿಸಿದರು. ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು ಧಾರ್ಮಿಕ ಸಾಮರಸ್ಯದ ಅಗತ್ಯವನ್ನು ಸಾರುವ ನಾಟಕವನ್ನು ಪ್ರಸ್ತುತಪಡಿಸಿದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು