August 17, 2026 1:10 pm

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ನಮ್ಮ ದೇಶದ ಪ.ಜಾ, ಪ.ಪಂಗಡ ಮತ್ತು ಹಿಂದುಳಿದ ವರ್ಗದ ಜನರು ಮೀಸಲಾತಿಯ ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ರಾಜಕೀಯ, ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ್ದರ ಪರಿಣಾಮವಾಗಿ ಈ ವರ್ಗಗಳಲ್ಲಿ ಸಾಮಾಜಿಕ ಚಲನಶೀಲತೆಯನ್ನು ಕಾಣಬಹುದು. ಈ ಮುಖಾಂತರ ಈ ವರ್ಗಗಳು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಸ್ವಲ್ಪ ಮಟ್ಟಿಗೆ ಸಬಲೀಕರಣಗೊಂಡಿವೆ.

ಆದರೆ ಈ ವರ್ಗದ ಮಹಿಳೆಯರು, ಆದಿವಾಸಿಗಳು, ಅಲೆಮಾರಿಗಳು, ಅರೆ ಅಲೆಮಾರಿಗಳು, ದೇವದಾಸಿಯರು, ಸಫಾಯಿ ಕರ್ಮಚಾರಿಗಳು, ಕೊಳಚೆ ಪ್ರದೇಶದ ನಿವಾಸಿಗಳು ಇತ್ಯಾದಿ ಸಣ್ಣ ಮತ್ತು ಅತಿಸಣ್ಣ ಜಾತಿಗಳ ಪರಿಸ್ಥಿತಿ ಗಂಭೀರವಾಗಿದೆ ಮತ್ತು ಇವರ ಜೀವನ ಇನ್ನೂ ಹೀನಾಯವಾಗಿದೆ. ಇವರ ಮತ್ತು ಇವರ ಮಕ್ಕಳ ಶೈಕ್ಷಣಿಕ ಮಟ್ಟ ಬಹಳ ಕಡಿಮೆ ಇದೆ. ತತ್ಪರಿಣಾಮವಾಗಿ ಉನ್ನತ ಶಿಕ್ಷಣವಿಲ್ಲ ಮತ್ತು ಸರ್ಕಾರಿ ಉದ್ಯೋಗವಿಲ್ಲ. ಅಪ್ಪಿತಪ್ಪಿ ಕೆಲವರು ಉನ್ನತ ಶಿಕ್ಷಣ ಪಡೆದಿದ್ದರೂ ಸಹ ಈ ವರ್ಗದ ಬಲಿಷ್ಠರ ಜೊತೆ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ವರ್ಗದ ಅನೇಕ ಸಣ್ಣ ಜಾತಿಗಳು ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಚುನಾವಣೆಗಳಲ್ಲಿ ಗೆಲ್ಲಲಿಲ್ಲ. ಕಳೆದ 15 ವರ್ಷಗಳಿಂದ ಮೀಸಲಾತಿ ಜಾರಿಯಲ್ಲಿ ಇದ್ದರೂ ಸಹ ಈ ಸವಲತ್ತು ಈ ವರ್ಗಗಳಿಗೆ ತಲುಪಲೇ ಇಲ್ಲ.

ದೇಶದ ಒಟ್ಟು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟು ಮಹಿಳೆಯರು. ಮಹಿಳೆಯರಿಗೆ ಉನ್ನತ ಶಿಕ್ಷಣದಲ್ಲಿ ಮತ್ತು ಸರ್ಕಾರಿ ಉದ್ಯೋಗದಲ್ಲಿ ಸಮತಲ ಮೀಸಲಾತಿಯನ್ನು ನೀಡಲಾಗಿದೆ. ಆದರೆ ಮಹಿಳೆಯರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಆದರೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ನೀಡಿಲ್ಲ. ಈ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ತೀರಾ ಕಡಿಮೆ. ಈ ಕಾರಣಗಳಿಂದ ಮಹಿಳೆಯರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಪ್ರತ್ಯೇಕ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಸೇರಿಸಿ ಎಂಬ ಧ್ವನಿ ಕೇಳಿಬರುತ್ತಿದೆ.

ಅಲ್ಪಸಂಖ್ಯಾತರಲ್ಲಿ ಅನೇಕ ಜಾತಿಗಳಿವೆ. ಇಲ್ಲಿಯೂ ಕೂಡ ಜಾತಿ ಅಸಮಾನತೆ ಇದೆ. ನ್ಯಾಯಮೂರ್ತಿ ಸಾಚಾರ್ ಆಯೋಗ 2006ರ ತನ್ನ ವರದಿಯಲ್ಲಿ ಭಾರತದ ಅಲ್ಪಸಂಖ್ಯಾತ ಮುಸ್ಲಿಂರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಜನರಿದ್ದಾರೆ ಎಂದು ಹೇಳಿದೆ. ಮುಂದುವರಿದು ಇಲ್ಲಿನ ಕೆಳಜಾತಿಗಳ ಬದುಕು ದಲಿತರಿಗಿಂತ ಹೀನಾಯವಾಗಿದೆಯೆಂದು ತಿಳಿಯಪಡಿಸಿದೆ. ಇಲ್ಲಿನ ಕೆಳಜಾತಿಯ ಜನರ ಶೈಕ್ಷಣಿಕ ಮಟ್ಟ ಬಹಳ ಕಡಿಮೆ. ತತ್ಪರಿಣಾಮವಾಗಿ ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗವಿಲ್ಲ. ಈ ಜನರಿಗೆ ಮೀಸಲಾತಿ ತಲುಪಲೇ ಇಲ್ಲ.

ಕೇವಲ ಮೀಸಲಾತಿ ವಂಚಿತ ಸಮುದಾಯಗಳಿಗೆ ಮಾತ್ರ ಮೀಸಲಾತಿ ಕೊಡಿ ಎಂಬ ಹೋರಾಟ ಮಾಡಲು ನೈತಿಕ ಹಕ್ಕಿದೆ. ಇವರ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ. ಇದರ ಬಗ್ಗೆ ಪ್ರಜ್ಞಾವಂತ ಸಮಾಜ ಗಂಭೀರವಾಗಿ ಚಿಂತಿಸಬೇಕಾಗಿದೆ. ಮೀಸಲಾತಿಗೆ ಸಂಬಂಧಿಸಿದ ಚರ್ಚೆಯಲ್ಲಿ ಈ ವಂಚಿತರಿಗೆ ಮೀಸಲಾತಿಯನ್ನು ತಲುಪಿಸುವುದರ ಬಗ್ಗೆ ಮೊದಲನೇ ಆದ್ಯತೆ ಸಿಗಬೇಕಾಗಿದೆ. ಸರ್ಕಾರಗಳು, ರಾಜಕೀಯ ಇಚ್ಛಾಶಕ್ತಿಯನ್ನು ತೋರಿ ಈ ದೌರ್ಭಾಗ್ಯರಿಗೆ ಮೀಸಲಾತಿ ಸವಲತ್ತನ್ನು ತಲುಪಿಸುವ ಕಾನೂನುಗಳನ್ನು, ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ಜಾರಿಗೆ ತರಬೇಕಾಗಿದೆ. ಈ ಕೆಲಸ ತುರ್ತಾಗಿ ನಡೆಯಬೇಕಾಗಿದೆ.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]