March 25, 2023 4:16 pm

ಮಾನವ ಬಂಧುತ್ವ ವೇದಿಕೆ ವತಿಯಿಂದ ವಿದ್ಯುತ್ ಖಾಸಗೀಕರಣ ವಿರುದ್ಧ ರಾಜ್ಯಮಟ್ಟದ ಜನ ಸಮಾವೇಶ

ಚಾಮರಾಜನಗರ: ದಿನಾಂಕ 26.02.2022 ಶನಿವಾರದಂದು ವಿದ್ಯುತ್ ಖಾಸಗೀಕರಣದ ವಿರುದ್ಧ ರಾಜ್ಯ ಮಟ್ಟದ ಜನ ಸಮಾವೇಶವನ್ನು ಮಾನವ ಬಂಧುತ್ವ ವೇದಿಕೆ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದೆ. 

ಇದೊಂದು ಮಹತ್ವದ ಸಮಾವೇಶವಾಗಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಐತಿಹಾಸಿಕ ದಿನವಾಗಲಿದೆ. ಈ ಸಮಾವೇಶದಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಲಿವೆ. ಮಾನವ ಬಂಧುತ್ವ ವೇದಿಕೆಯ ಆಶಯಗಳಂತೆ ಇದು ಸಾಧ್ಯವಾಗಿದೆ.

ಬೃಹತ್ ಮೆರವಣಿಗೆಯಲ್ಲಿ ಮೊದಲಿಗೆ, ದೊಡ್ಡ ರಾಷ್ಟ್ರ ಧ್ವಜ ಹಿಡಿದ ಒಬ್ಬರು, ಸಂವಿಧಾನ ಪೀಠಿಕೆ ಟ್ಟ್ಯಾಬ್ಲೋ, ನಂತರ MBV ಟೀ ಷರ್ಟ್ ಧರಿಸಿದ 100 ಸ್ವಯಂಸೇವಕರು, 200 ಮಹಿಳೆಯರು, ಅಂಬೇಡ್ಕರ್ ಫೋಟೋ ಹಿಡಿದ 100 ಮುಸ್ಲಿಂ ಸ್ವಯಂಸೇವಕರು, ಎತ್ತಿನಗಾಡಿಯಲ್ಲಿ ರೈತರು, ತೆರೆದ ವಾಹನದಲ್ಲಿ ಅತಿಥಿಗಳು, ತಮ್ಮ ವೇಷಭೂಷಣಗಳೊಂದಿಗೆ ತಮ್ಮ ಕಲಾ ಪ್ರದರ್ಶನ ನೀಡುತ್ತಾ ನಡೆಯುವ 100 ಜಾನಪದ ಕಲಾವಿದರು ಹಾಗೂ ಅತಿಥಿಗಳು ಹೆಜ್ಜೆ ಹಾಕಲಿದ್ದಾರೆ. ಇವರು ಮೆರವಣಿಗೆಯ ನಂತರ ಮಧ್ಯಾಹ್ನ  ಜಿಲ್ಲಾ MBV ಮತ್ತು ಮಹಿಳಾ ಬಂಧುತ್ವ ಸಮಾವೇಶ ನಡೆಯಲಿವೆ. 

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕರಾದ ಸತೀಶ್ ಜಾರಕಿಹೊಳಿಯವರು ನೆರವೇರಿಸಲಿದ್ದು, ಉರಿಲಿಂಗಪೆದ್ದಿ ಮಠದ ಪೀಠಾಧೀಶರಾದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಂಸದ ಆರ್.ಧ್ರುವ ನಾರಾಯಣ್ ವಹಿಸಲಿದ್ದು, ಹಿರಿಯ ಪತ್ರಕರ್ತ ವೈ.ಗುರುಶಾಂತ್ ವಿಷಯ ಮಂಡಿಸಲಿದ್ದಾರೆ. ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ವಿದ್ಯುತ್ ಖಾಸಗೀಕರಣ – ರೈತರ ಮರಣ ಶಾಸನ ಕೃತಿಯನ್ನು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಟಿಸಿಎಲ್ ನೌಕರರ ಸಂಘದ ಮುಖಂಡರಾದ ಡಾ.ಎ.ಆರ್.ಗೋವಿಂದಸ್ವಾಮಿ ಮತ್ತು ಮಾನವ ಬಂಧುತ್ವ ವೇದಿಕೆಯ ಮೈಸೂರು ವಿಭಾಗೀಯ ಸಂಚಾಲಕರಾದ ಡಾ.ಲೀಲಾ ಸಂಪಿಗೆ ಮತ್ತು ಮಾನವ ಬಂಧುತ್ವ ವೇದಿಕೆಯ ಚಾಮರಾಜನಗರ ವಿಭಾಗೀಯ ಸಂಚಾಲಕರಾದ ಸುಭಾಷ್ ಮಾಡ್ರಳ್ಳಿ ಭಾಗವಹಿಸಲಿದ್ದಾರೆ.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ