April 23, 2024 5:14 pm

ಮಾನವ ಬಂಧುತ್ವ ವೇದಿಕೆ ವತಿಯಿಂದ ವಿದ್ಯುತ್ ಖಾಸಗೀಕರಣ ವಿರುದ್ಧ ರಾಜ್ಯಮಟ್ಟದ ಜನ ಸಮಾವೇಶ

ಚಾಮರಾಜನಗರ: ದಿನಾಂಕ 26.02.2022 ಶನಿವಾರದಂದು ವಿದ್ಯುತ್ ಖಾಸಗೀಕರಣದ ವಿರುದ್ಧ ರಾಜ್ಯ ಮಟ್ಟದ ಜನ ಸಮಾವೇಶವನ್ನು ಮಾನವ ಬಂಧುತ್ವ ವೇದಿಕೆ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದೆ. 

ಇದೊಂದು ಮಹತ್ವದ ಸಮಾವೇಶವಾಗಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಐತಿಹಾಸಿಕ ದಿನವಾಗಲಿದೆ. ಈ ಸಮಾವೇಶದಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಲಿವೆ. ಮಾನವ ಬಂಧುತ್ವ ವೇದಿಕೆಯ ಆಶಯಗಳಂತೆ ಇದು ಸಾಧ್ಯವಾಗಿದೆ.

ಬೃಹತ್ ಮೆರವಣಿಗೆಯಲ್ಲಿ ಮೊದಲಿಗೆ, ದೊಡ್ಡ ರಾಷ್ಟ್ರ ಧ್ವಜ ಹಿಡಿದ ಒಬ್ಬರು, ಸಂವಿಧಾನ ಪೀಠಿಕೆ ಟ್ಟ್ಯಾಬ್ಲೋ, ನಂತರ MBV ಟೀ ಷರ್ಟ್ ಧರಿಸಿದ 100 ಸ್ವಯಂಸೇವಕರು, 200 ಮಹಿಳೆಯರು, ಅಂಬೇಡ್ಕರ್ ಫೋಟೋ ಹಿಡಿದ 100 ಮುಸ್ಲಿಂ ಸ್ವಯಂಸೇವಕರು, ಎತ್ತಿನಗಾಡಿಯಲ್ಲಿ ರೈತರು, ತೆರೆದ ವಾಹನದಲ್ಲಿ ಅತಿಥಿಗಳು, ತಮ್ಮ ವೇಷಭೂಷಣಗಳೊಂದಿಗೆ ತಮ್ಮ ಕಲಾ ಪ್ರದರ್ಶನ ನೀಡುತ್ತಾ ನಡೆಯುವ 100 ಜಾನಪದ ಕಲಾವಿದರು ಹಾಗೂ ಅತಿಥಿಗಳು ಹೆಜ್ಜೆ ಹಾಕಲಿದ್ದಾರೆ. ಇವರು ಮೆರವಣಿಗೆಯ ನಂತರ ಮಧ್ಯಾಹ್ನ  ಜಿಲ್ಲಾ MBV ಮತ್ತು ಮಹಿಳಾ ಬಂಧುತ್ವ ಸಮಾವೇಶ ನಡೆಯಲಿವೆ. 

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕರಾದ ಸತೀಶ್ ಜಾರಕಿಹೊಳಿಯವರು ನೆರವೇರಿಸಲಿದ್ದು, ಉರಿಲಿಂಗಪೆದ್ದಿ ಮಠದ ಪೀಠಾಧೀಶರಾದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಂಸದ ಆರ್.ಧ್ರುವ ನಾರಾಯಣ್ ವಹಿಸಲಿದ್ದು, ಹಿರಿಯ ಪತ್ರಕರ್ತ ವೈ.ಗುರುಶಾಂತ್ ವಿಷಯ ಮಂಡಿಸಲಿದ್ದಾರೆ. ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ವಿದ್ಯುತ್ ಖಾಸಗೀಕರಣ – ರೈತರ ಮರಣ ಶಾಸನ ಕೃತಿಯನ್ನು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಟಿಸಿಎಲ್ ನೌಕರರ ಸಂಘದ ಮುಖಂಡರಾದ ಡಾ.ಎ.ಆರ್.ಗೋವಿಂದಸ್ವಾಮಿ ಮತ್ತು ಮಾನವ ಬಂಧುತ್ವ ವೇದಿಕೆಯ ಮೈಸೂರು ವಿಭಾಗೀಯ ಸಂಚಾಲಕರಾದ ಡಾ.ಲೀಲಾ ಸಂಪಿಗೆ ಮತ್ತು ಮಾನವ ಬಂಧುತ್ವ ವೇದಿಕೆಯ ಚಾಮರಾಜನಗರ ವಿಭಾಗೀಯ ಸಂಚಾಲಕರಾದ ಸುಭಾಷ್ ಮಾಡ್ರಳ್ಳಿ ಭಾಗವಹಿಸಲಿದ್ದಾರೆ.

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ