October 1, 2023 7:38 am

ಮಾನವ ಬಂಧುತ್ವ ವೇದಿಕೆ ವತಿಯಿಂದ ವಿದ್ಯುತ್ ಖಾಸಗೀಕರಣ ವಿರುದ್ಧ ರಾಜ್ಯಮಟ್ಟದ ಜನ ಸಮಾವೇಶ

ಚಾಮರಾಜನಗರ: ದಿನಾಂಕ 26.02.2022 ಶನಿವಾರದಂದು ವಿದ್ಯುತ್ ಖಾಸಗೀಕರಣದ ವಿರುದ್ಧ ರಾಜ್ಯ ಮಟ್ಟದ ಜನ ಸಮಾವೇಶವನ್ನು ಮಾನವ ಬಂಧುತ್ವ ವೇದಿಕೆ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದೆ. 

ಇದೊಂದು ಮಹತ್ವದ ಸಮಾವೇಶವಾಗಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಐತಿಹಾಸಿಕ ದಿನವಾಗಲಿದೆ. ಈ ಸಮಾವೇಶದಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಲಿವೆ. ಮಾನವ ಬಂಧುತ್ವ ವೇದಿಕೆಯ ಆಶಯಗಳಂತೆ ಇದು ಸಾಧ್ಯವಾಗಿದೆ.

ಬೃಹತ್ ಮೆರವಣಿಗೆಯಲ್ಲಿ ಮೊದಲಿಗೆ, ದೊಡ್ಡ ರಾಷ್ಟ್ರ ಧ್ವಜ ಹಿಡಿದ ಒಬ್ಬರು, ಸಂವಿಧಾನ ಪೀಠಿಕೆ ಟ್ಟ್ಯಾಬ್ಲೋ, ನಂತರ MBV ಟೀ ಷರ್ಟ್ ಧರಿಸಿದ 100 ಸ್ವಯಂಸೇವಕರು, 200 ಮಹಿಳೆಯರು, ಅಂಬೇಡ್ಕರ್ ಫೋಟೋ ಹಿಡಿದ 100 ಮುಸ್ಲಿಂ ಸ್ವಯಂಸೇವಕರು, ಎತ್ತಿನಗಾಡಿಯಲ್ಲಿ ರೈತರು, ತೆರೆದ ವಾಹನದಲ್ಲಿ ಅತಿಥಿಗಳು, ತಮ್ಮ ವೇಷಭೂಷಣಗಳೊಂದಿಗೆ ತಮ್ಮ ಕಲಾ ಪ್ರದರ್ಶನ ನೀಡುತ್ತಾ ನಡೆಯುವ 100 ಜಾನಪದ ಕಲಾವಿದರು ಹಾಗೂ ಅತಿಥಿಗಳು ಹೆಜ್ಜೆ ಹಾಕಲಿದ್ದಾರೆ. ಇವರು ಮೆರವಣಿಗೆಯ ನಂತರ ಮಧ್ಯಾಹ್ನ  ಜಿಲ್ಲಾ MBV ಮತ್ತು ಮಹಿಳಾ ಬಂಧುತ್ವ ಸಮಾವೇಶ ನಡೆಯಲಿವೆ. 

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕರಾದ ಸತೀಶ್ ಜಾರಕಿಹೊಳಿಯವರು ನೆರವೇರಿಸಲಿದ್ದು, ಉರಿಲಿಂಗಪೆದ್ದಿ ಮಠದ ಪೀಠಾಧೀಶರಾದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಂಸದ ಆರ್.ಧ್ರುವ ನಾರಾಯಣ್ ವಹಿಸಲಿದ್ದು, ಹಿರಿಯ ಪತ್ರಕರ್ತ ವೈ.ಗುರುಶಾಂತ್ ವಿಷಯ ಮಂಡಿಸಲಿದ್ದಾರೆ. ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ವಿದ್ಯುತ್ ಖಾಸಗೀಕರಣ – ರೈತರ ಮರಣ ಶಾಸನ ಕೃತಿಯನ್ನು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಟಿಸಿಎಲ್ ನೌಕರರ ಸಂಘದ ಮುಖಂಡರಾದ ಡಾ.ಎ.ಆರ್.ಗೋವಿಂದಸ್ವಾಮಿ ಮತ್ತು ಮಾನವ ಬಂಧುತ್ವ ವೇದಿಕೆಯ ಮೈಸೂರು ವಿಭಾಗೀಯ ಸಂಚಾಲಕರಾದ ಡಾ.ಲೀಲಾ ಸಂಪಿಗೆ ಮತ್ತು ಮಾನವ ಬಂಧುತ್ವ ವೇದಿಕೆಯ ಚಾಮರಾಜನಗರ ವಿಭಾಗೀಯ ಸಂಚಾಲಕರಾದ ಸುಭಾಷ್ ಮಾಡ್ರಳ್ಳಿ ಭಾಗವಹಿಸಲಿದ್ದಾರೆ.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು