March 25, 2023 3:43 pm

ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಗಾವಿ: ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಸೇವಾದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಲರಾಂ ಸಿಂಗ್ ಬದೋರಿಯಾ ಪೇರಳೆ ಗಿಡವನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿದರು.

ಕೊರೊನಾ ಪ್ರಯುಕ್ತ ಸರಳವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತಾಡಿದ ಬಲರಾಂ ಸಿಂಗ್ ಬದೋರಿಯಾ, ಜಗತ್ತಿನ ರಕ್ಷಣೆಯಲ್ಲಿ ಪರಿಸರದ ಪಾತ್ರ ಮಹತ್ವದ್ದು, ನಾವೆಲ್ಲರೂ ಪರಿಸರವನ್ನು ಉಳಿಸಬೇಕು, ಬೆಳೆಸಬೇಕು ಎಂದರು.

ಭವಿಷ್ಯದ ಜನಾಂಗದ ಆರೋಗ್ಯಕ್ಕಾಗಿ ನಾವು ಪರಿಸರವನ್ನು ಉಳಿಸಬೇಕು. ಬನ್ನಿ ನಾವೆಲ್ಲ ಒಂದಾಗಿ ವೃಕ್ಷಗಳನ್ನು ನೆಡೋಣ. ಲಕ್ಷಾಂತರ ಪ್ರಾಣಿಗಳಿಗೆ ಆಮ್ಲಜನಕವನ್ನು ನೀಡೋಣ ಎಂದು ಕರೆನೀಡಿದರು. ಜೊತೆಗೆ, ಒಂದು ವೃಕ್ಷ ಲಕ್ಷಾಂತರ ಪ್ರಾಣಿಗಳನ್ನು ಉಳಿಸುತ್ತದೆ. ಭವಿಷ್ಯಕ್ಕಾಗಿ ನಾವೆಲ್ಲ ಪರಿಸರ ರಕ್ಷಣೆಯನ್ನು ಮಾಡಬೇಕು. ನಮ್ಮ ನಂತರದ ಜನಾಂಗಕ್ಕೂ ಪರಿಸರ ರಕ್ಷಣೆಯ ಮಹತ್ವವನ್ನು ಹೇಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ವಿಭಾಗೀಯ ಸಂಚಾಲಕ ಮಹಾಲಿಂಗಪ್ಪ ಆಲಬಾಳ, ಡಾ. ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದ ಉಪನ್ಯಾಸಕ ಡಾ. ಪ್ರದೀಪ್ ಮಾಲ್ಗುಡಿ, ಮಾನವ ಬಂಧುತ್ವ ವೇದಿಕೆಯ ಉಷಾ ನಾಯಕ್, ಮನೀಶಾ ನಾಯಕ್, ರಮೇಶ್ ಗುಮ್ಮಗೋಳ್, ಮೋಸಿನ್ ಹುದಲಿ, ಲಿಂಗರಾಜ್ ಕಿಲ್ಲಿಲ್ಲಿ, ಉದಯ್, ಕೃಷ್ಣ ಗೋಕಾಕ್, ಪರಶುರಾಮ್, ಮಂಜು, ನಿಂಗಪ್ಪ, ಕೃಷ್ಣ ಮೊದಲಾದವರು ಹಾಜರಿದ್ದರು.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ