August 17, 2026 11:02 am

ಮೊದಲಿಗೆ ನಾವೆಲ್ಲರೂ ನಮ್ಮ ಸಂವಿಧಾನವನ್ನು ಓದಬೇಕು

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಸಂವಿಧಾನ ಭಾರತೀಯರ ಮಹಾಗ್ರಂಥ. ವಿವಿಧ ಧರ್ಮಗಳ, ಜಾತಿಯ, ಸಂಸ್ಕೃತಿಯ, ಭಾಷೆಯ, ನಂಬಿಕೆಗಳ, ಅಭಿಪ್ರಾಯಗಳ, ಆಚಾರ, ವಿಚಾರಗಳ, ಆಹಾರ ಪದ್ಧತಿಗಳ, ಉಡುಪುಗಳ ಜನರನ್ನು ಒಟ್ಟಿಗೆ ಮುನ್ನಡೆಸುತ್ತಿವುದು ಭಾರತದ ಸಂವಿಧಾನ.

ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯವೆಂಬ ಸಿದ್ಧಾಂತಗಳನ್ನು ಬಿತ್ತಿ, ಬೆಳೆಸುತ್ತಿರುವುದು ಭಾರತದ ಸಂವಿಧಾನ. ನಾವೆಲ್ಲರೂ ಅನುಭವಿಸುತ್ತಿರುವ ಮಾನವ ಹಕ್ಕುಗಳು, ಮೂಲಭೂತ ಹಕ್ಕುಗಳು ಮತ್ತು ಎದುರಿಸುವ ಸಮಸ್ಯೆಗಳಿಗೆ ಹಲವು ಸಾಂವಿಧಾನಿಕ ಪರಿಹಾರಗಳನ್ನು ನೀಡಿರುವುದು ಭಾರತದ ಸಂವಿಧಾನ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವೆಂಬ ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪಿಸಿ ಅವುಗಳಲ್ಲಿ ಈ ದೇಶದ ಜನರು ಭಾಗವಹಿಸುವಂತೆ ಮಾಡಿರುವುದು ಭಾರತದ ಸಂವಿಧಾನ. ಜನ ಸಾಮಾನ್ಯರ ಕನಿಷ್ಠ ಅವಶ್ಯಕತೆಗಳನ್ನು ಸ್ವಲ್ಪ ಮಟ್ಟಿಗಾದರೂ ಪೂರೈಸಿರುವುದು ಭಾರತ ಸಂವಿಧಾನದ ಆಶಯವಾದ ಕಲ್ಯಾಣ ರಾಜ್ಯದ ಮೌಲ್ಯ, ಧರ್ಮ, ಜನಾಂಗೀಯ, ಜಾತಿ, ಲಿಂಗ, ಭಾಷೆ ಅಥವಾ ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸಿ ಎಲ್ಲರಿಗೂ ಸಮಾನ ರಕ್ಷಣೆ ಮತ್ತು ಅವಕಾಶಗಳನ್ನು ನೀಡಿರುವುದು ಭಾರತದ ಸಂವಿಧಾನ. ಆದ್ದರಿಂದ, ನಾವು ಸುರಕ್ಷಿತವಾಗಿ ಬದುಕಲು. ನಮಗೋಸ್ಕರ, ನಮ್ಮ ಮುಂದಿನ ಪೀಳಿಗೆಗಾಗಿ ನಮ್ಮ ಸಂವಿಧಾನವನ್ನು ಅದರ ಆಶಯಗಳನ್ನು ರಕ್ಷಿಸಬೇಕು.

ನಮ್ಮ ಸಂವಿಧಾನವನ್ನು ನಾವು ಕಳೆದುಕೊಂಡರೆ ಅಂರ್ತಯುದ್ಧ ನಡೆದು ಭಾರತ ದೇಶ ಛಿದ್ರಛಿದ್ರವಾಗಿ ಹೋಳಾಗುತ್ತದೆ. ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯವೆಂಬ ಸಿದ್ಧಾಂತಗಳು ನಾಶವಾಗಿ ಅರಾಜಕತೆ, ಮತೀಯವಾದ, ಕೋಮುವಾದ, ಮೂಲಭೂತವಾದವೆಂಬ ಅಮಾನವೀಯ ಸಿದ್ಧಾಂತಗಳು ರಾರಾಜಿಸುತ್ತವೆ. ಜನಸಾಮಾನ್ಯರು ಗಳಿಸಿದ ಹಕ್ಕುಗಳನ್ನು ಕಳೆದುಕೊಂಡು ಬಾಯಿಗೆ ಬೀಗ ಹಾಕಿಕೊಂಡು ಗುಲಾಮರಂತೆ ಜೀವಿಸಬೇಕಾಗುತ್ತದೆ. ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಬಡವರು ಶೋಷಣೆ, ದಬ್ಬಾಳಿಕೆ, ಕ್ರೌರ್ಯ, ಹಿಂಸೆ, ಅಭದ್ರತೆಗಳಿಗೆ ಬಲಿಯಾಗಬೇಕಾಗುತ್ತದೆ. ರೂಲ್ ಆಫ್ ಲಾ ಹೋಗಿ ಜಂಗಲ್ ಲಾ ವ್ಯವಸ್ಥೆ ಬರುತ್ತದೆ. ಆದ್ದರಿಂದ, ನಮ್ಮ ಸಂವಿಧಾನವನ್ನು ನಾವು ಉಳಿಸಿಕೊಳ್ಳಬೇಕಾಗಿದೆ.

ಹಾಗಾದರೆ ಇಂತಹ ಗಂಭೀರ ಪರಿಸ್ಥಿತಿಯಲ್ಲಿ ನಮ್ಮ ಕರ್ತವ್ಯವೇನು?: ಮೊತ್ತ ಮೊದಲಿಗೆ ನಾವೆಲ್ಲರೂ ನಮ್ಮ ಸಂವಿಧಾನವನ್ನು ಓದಬೇಕು, ಅರ್ಥೈಸಬೇಕು. ಸಂವಿಧಾನದ ಮೂಲತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಬದುಕಿನ ವಿಧಾನವಾಗಿಸಿಕೊಳ್ಳಬೇಕು. ನಮ್ಮ ಕುಟುಂಬದ ಸದಸ್ಯರಿಗೆ ಸಂವಿಧಾನದ ಮಹತ್ವವನ್ನು ಮನವರಿಕೆ ಮಾಡಿಕೊಡಬೇಕು. ನಮ್ಮ ಸುತ್ತಮುತ್ತಲಿನ ಬಂಧು, ಬಳಗ, ಗೆಳೆಯರಲ್ಲಿ, ವಿದ್ಯಾರ್ಥಿ ಯುವಜನರ ಮಧ್ಯೆ ನಮ್ಮ ಸಂವಿಧಾನದ ತಿಳುವಳಿಕೆಯನ್ನು ಹಂಚಿಕೊಳ್ಳಬೇಕು. ಸಂವಿಧಾನದ ಪ್ರತಿಯೊಂದು ಆಶಯವನ್ನು ಅನುಷ್ಠಾನಗೊಳಿಸಲಿಕ್ಕೆ ಪ್ರಯತ್ನಿಸಬೇಕು. ಸಂವಿಧಾನ ಎದುರಿಸುತ್ತಿರುವ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು. ನಮ್ಮ ಸಂವಿಧಾನದ ಉಳಿವಿಗಾಗಿ, ದೇಶದ ಸಮಗ್ರತೆಗಾಗಿ ಮತ್ತು ಜನತೆಯ ಕಲ್ಯಾಣಕ್ಕಾಗಿ ನಾವೆಲ್ಲರೂ ಎಲ್ಲ ರೀತಿಯ ತ್ಯಾಗಕ್ಕೆ ಸಿದ್ಧರಾಗೋಣ.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]