March 25, 2023 4:46 pm

3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿ

ಬೆಂಗಳೂರು: ಕೋವಿಡ್ 1, 2 ಅಲೆಬಂದು ಹೋಗಿದೆ. 3ನೇ ಅಲೆ ಬರಲಿದೆ. ಮೊದಲೆರಡು ಅಲೆಗಳಲ್ಲಿ ಬೇರೆಬೇರೆ ಸಮಸ್ಯೆಗಳು ಇದ್ದವು. ಈಗ ಬೇರೆ ಸಮಸ್ಯೆಗಳು ಎದುರಾಗಬಹುದು. ಸರ್ಕಾರ ಇವುಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಮತ್ತು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ್ ಜಾರಕಿಹೊಳಿ ಹೇಳಿದರು.

ಮಾನವ ಬಂಧುತ್ವ ವೇದಿಕೆಯಿಂದ 20/062021ರಿಂದ ನಡೆದ 10 ದಿನಗಳ ಆರೋಗ್ಯ ಬಂಧುತ್ವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿಕೊಂಡು ಮಾತಾಡಿದ ಅವರು, 140 ಕೋಟಿ ಜನರಲ್ಲಿ ಏಕಕಾಲಕ್ಕೆ ಕೊರೊನಾ ತಗುಲಿದ್ದು ಕೇವಲ 5 ಲಕ್ಷ ಜನಕ್ಕೆ. ಅವರಿಗೆ ಬೆಡ್, ಚಿಕಿತ್ಸೆ ಕೊಡಲು ಸಾಧ್ಯವಾಗಲಿಲ್ಲ. ಮೂಲಭೂತ ಸೌಕರ್ಯವಿದ್ದರೂ 5 ಲಕ್ಷ ಜನರಿಗೆ ಕೇರ್ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಬಹಳಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದರು.

ಕೊರೊನಾ ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆ ಪಡೆದರೆ 500 ರೂ.ಗೆ ಗುಣವಾಗಿದ್ದಾರೆ. ಒಬ್ಬರು 40 ಲಕ್ಷ ರೂ. ಕರ್ಚು ಮಾಡಿದರೂ ಬದುಕಲಿಲ್ಲ. ಮುಂಜಾಗ್ರತೆ ಕೈಗೊಂಡರೆ ಮನೆಯಲ್ಲೇ ನೀವು ಗುಣವಾಗಬಹುದು. ಕೋವಿಡ್ ಯಾವ ರೀತಿಯಲ್ಲಿ ಬದುಕಬೇಕು ಎಂಬುದನ್ನು ಕಲಿಸಿದೆ. ಲಾಕ್ ಡೌನ್ ಅನ್ನು 8 ಗಂಟೆಗೆ ಘೋಷಣೆ ಮಾಡಿದರು. 12 ಗಂಟೆಯಿಂದ ಜಾರಿಗೊಳಿಸಿದರು. ಮುಂದಿನ ದಿನಗಳಲ್ಲಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುವಾಗ ಮುಂದಾಲೋಚನೆ ಮಾಡಬೇಕು. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆರೀತಿ ಆಗಬಾರದು ಎಂದರು.

ಹೊಸದಾಗಿ 50 ತಾಲೂಕುಗಳಲ್ಲಿ 100 ಆಸ್ಪತ್ರೆಗಳನ್ನು ನಿರ್ಮಿಸಿ, ಕೋವಿಡ್ ಇಲಾಖೆಗಳಲ್ಲಿ ಆಸ್ಪತ್ರೆ ಸಿಬ್ಬಂದಿಯನ್ನು ನೇಮಿಸಬೇಕು, ಇಡೀ ರಾಜ್ಯದಲ್ಲಿ ತಕ್ಷಣ ಆರೋಗ್ಯ ಸಿಬ್ಬಂದಿಯನ್ನು ನೇಮಿಸಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದೇನೆ ಎಂದರು.

ಜೊತೆಗೆ, ಪ್ರವಾಸಿಗರನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಕೊರೊನಾ 10 ವರ್ಷದವರೆಗೂ ಇರಬಹುದು. ರಾಜ್ಯದಲ್ಲಿ 30,000 ಪರೀಕ್ಷೆಗಳನ್ನು ಪ್ರತಿದಿನ ನಡೆಸಲಾಗುತ್ತಿದೆ. ಹೆಚ್ಚು ಪರೀಕ್ಷೆಗಳನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಸಿಎಂಗೆ ಪತ್ರವನ್ನೂ ಬರೆದಿದ್ದೇನೆ ಎಂದರು.

ನ್ಯಾಯಾಲಯ ಮಧ್ಯಪ್ರವೇಶದಿಂದಾಗಿ ರಾಜ್ಯಕ್ಕೆ 900 ಟನ್ ಆಕ್ಸಿಜನ್ ಸಿಕ್ಕಿದೆ. ಜಿಂದಾಲ್ ನಲ್ಲಿ ಉತ್ಪಾದನೆಯಾದ ಆಕ್ಸಿಜನ್ ಅನ್ನು ಕೂಡ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಕೋರ್ಟ್ ಮಧ್ಯಪ್ರವೇಶದಿಂದ ಸಿಕ್ಕಿದೆ. ಕೋರ್ಟ್ ಉತ್ತಮ ಕೆಲಸ ಮಾಡಿದೆ. ಮುಂದೆ ಕೂಡ ಇಂತಹ ಸಮಯದಲ್ಲಿ ಮಾಡಲಿದೆ ಎಂದರು.

ತಜ್ಞರು, ವೈದ್ಯರು, ಸ್ವಾಮೀಜಿಗಳು ಆರೋಗ್ಯ ಬಂಧುತ್ವ ವೆಬಿನಾರ್ ನಲ್ಲಿ ಭಾಗವಹಿಸಿರುವುದು ಒಳ್ಳೆಯ ಬೆಳವಣಿಗೆ. ಕಾರ್ಯಕ್ರಮದಲ್ಲಿ ತಿಳಿವಳಿಕೆ ನೀಡಿದ ಎಲ್ಲರಿಗೂ ಧನ್ಯವಾದಗಳು. ಮಾನವ ಬಂಧುತ್ವ ವೇದಿಕೆ ಬಹಳ ಜನಕ್ಕೆ ವಿಶಿಷ್ಟ ಕಾರ್ಯಕ್ರಮ ಎನಿಸಬಹುದು ಎಂದರು.

ಮಾನವ ಬಂಧುತ್ವ ವೇದಿಕೆಯೆಂದರೆ ಮೂಢನಂಬಿಕೆ ವಿರೋಧಿ, ಧರ್ಮ ವಿರೋಧಿ ಎಂಬ ತಪ್ಪು ತಿಳಿವಳಿಕೆ ಇದೆ. ಮೂಢನಂಬಿಕೆ ವಿರುದ್ಧ ಹೋರಾಡುವುದು ನಮ್ಮ ಕಾರ್ಯಕ್ರಮದ ಒಂದು ಭಾಗ. ನಾವು ಕೆ.ಎ.ಎಸ್., ತರಬೇತಿ, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ತರಬೇತಿ, ಉದ್ಯಮಗಳ ಸ್ಥಾಪನೆಗೆ ಅಗತ್ಯ ತರಬೇತಿಯಂತಹ ಕೆಲಸಗಳನ್ನು ಕೂಡ ಮಾಡುತ್ತಿದ್ದೇವೆ ಎಂದರು.

ಮಾನವ ಬಂಧುತ್ವ ವೇದಿಕೆ ಮುಂದಿನ ದಿನಗಳಲ್ಲಿ ಕೃಷಿ ಮೊದಲಾದ ಇನ್ನಿತರ ವಿಷಯದ ಕುರಿತು ಕೆಲಸ ಮಾಡಲಿ. ಪ್ರವಾಹ, ಕೋವಿಡ್ ಮೊದಲಾದ ವಿಷಯಗಳಲ್ಲಿ ಕೂಡ ಮಾನವ ಬಂಧುತ್ವ ವೇದಿಕೆ ಕೆಲಸ ಮಾಡುತ್ತಿದೆ ಎಂದರು.

ಬೇರೆ ರಾಜ್ಯದ ವಲಸಿಗರನ್ನು 14 ದಿನ ವಸತಿ ಉಳಿಸಿದ್ದೇವೆ. ತರಕಾರಿಗಳನ್ನು ಕೊಂಡು ಜನರಿಗೆ ವಿತರಿಸಿದ್ದೇವೆ, ಆಕ್ಸಿಜನ್ ಸರಬರಾಜು ಕೆಲಸವನ್ನು ಕೂಡ ಮಾಡಿದ್ದೇವೆ ಎಂದರು.

ಜನ ಜಾಗೃತಿಯಿಂದ, ಜವಾಬ್ದಾರಿಯಿಂದ ಇರಬೇಕು. ಸರ್ಕಾರ ಕೂಡ ಕೆಲಸ ಮಾಡಬೇಕು. ಮಾನವ ಬಂಧುತ್ವ ವೇದಿಕೆ ಇಂತಹ ಒಳ್ಳೆಯ ಕೆಲಸ ಮಾಡಿದೆ. ಮುಂದಿನ ದಿನಗಳಲ್ಲಿ ಅಗತ್ಯವಾದ ಕೆಲಸಗಳನ್ನು ಮುಂದುವರೆಸೋಣ. ಜನರಿಗೆ ಅನುಕೂಲವಾಗುವಂತೆ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಮುಂದೆ ಕೂಡ ಜನಪರ ಕೆಲಸ ಮುಂದುವರೆಸುತ್ತೇನೆ ಎಂದರು.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ