October 1, 2023 7:19 am

ನಮ್ಮನ್ನು ಯುದ್ಧಕ್ಕೆ ಕೆಣಕಿ ಅವರು ಬಲಿಹಾಕಲು ಯತ್ನಿಸುತ್ತಿದ್ದಾರೆ: ಹಂಸಲೇಖ

“ನಾಡು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಉಪಾಯಗಳನ್ನು ಕಂಡುಹಿಡಿಯಲು ಇದೊಂದು ಅವಕಾಶ. ನೀವೆಲ್ಲ ಎಚ್ಚರವಾಗಿರಬೇಕು. ನಮ್ಮನ್ನು ಯುದ್ಧಕ್ಕೆ ಕೆಣಕಿ ಅವರು ಬಲಿಹಾಕಲು ಯತ್ನಿಸುತ್ತಿಸಿದ್ದಾರೆ”

-ಹಂಸಲೇಖ

ಚಿತ್ರದುರ್ಗ: ಮಾನವ ಬಂಧತ್ವ ವೇದಿಕೆ ಹೆಸರಿನಲ್ಲಿ ಇಷ್ಟೆಲ್ಲ ಜನ ಸೇರಿರುವುದನ್ನು ನೋಡಿದರೆ ನೀವೆಲ್ಲ ಸಮಾಜಕ್ಕೆ ಹಾಲು, ಮೊಸರು, ಮಜ್ಜಿಗೆ, ಬೆಣ್ಣೆ, ಭೂಮಿಗೆ ಗೊಬ್ಬರ ಕೊಡುವ ಕಾಮಧೇನುವಾಗಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಮಾತಾಡಿದ ಅವರು, ನೀವ್ಯಾರೂ ಅಶಿಕ್ಷಿತರಲ್ಲ. ಯುದ್ಧವೆಂದರೇನು ಎಂದು ನಿಮ್ಮ ವಂಶಪಾರಂಪರ್ಯವಾಗಿ ಗೊತ್ತಿದೆ. ಯುದ್ಧದಲ್ಲಿ ನಾವು ಯಾವತ್ತೂ ಸೋತಿಲ್ಲ. ನಿಮ್ಮೆಲ್ಲರ ಮುಂದೆ ಮಾತಾಡಲು ನನಗೆ ಸಂತೋಷವಾಗಿದೆ. ನಾನು ನಿಂತಿರುವುದು ತರಾಸು ರಂಗ ಮಂದಿರದಲ್ಲಿ. ರಂಗಭೂಮಿಯ ಮೇಲೆ ಕಲಾವಿದ ಸಾಯುತ್ತಾನೆಯೆ ಹೊರತು ಸುಳ್ಳು ಹೇಳಲ್ಲ  ಎಂದರು.

ನನ್ನ ಡಾರ್ಜಿಲಿಂಗ್ ಚಿತ್ರದುರ್ಗ. ನಾನು ಪ್ರೇಮಿಸುತ್ತಿದ್ದ ಸಮಯದಲ್ಲಿ ಬಸ್ ಚಾರ್ಜ್ ಇತ್ಯಾದಿಗೆ ಸೂಕ್ತವಾಗುತ್ತಿದ್ದು ಚಿತ್ರದುರ್ಗ ಮತ್ತು ಬೆಟ್ಟ. ಗೋಪಾಲ್ ಎನ್ನುವವರು ಪ್ರೋಗ್ರಾಮ್ ಎಂದರೆ ಪರಿಕರಗಳನ್ನು ಕೊಂಡೊಯ್ದು ಸಂಜೆ ವಾಪಸ್ ಬರುತ್ತಿದ್ದೆವು. ನಮ್ಮ ಪ್ರೇಮದ ಘಟನೆಗಳು ಇಲ್ಲಿಯೇ ನಡೆದಿವೆ ಎಂದರು.

ನಾನು ಕಂಡ ಮೇರುನಟ ರಾಜ್ ಕುಮಾರ್. ಅವರು ರಾಜಕೀಯಕ್ಕೆ ಬರದೆ ಕನ್ನಡ ನುಡಿಯನಾಡಿಯಾಗಿ ಬಂದರು. ಅವರು ಚಿತ್ರರಂಗಕ್ಕೆ ಪ್ರವೇಶಿಸಿದ್ದು ಚಿತ್ರದುರ್ಗದಿಂದ. ಹಂಸಲೇಖ ವಿವೇಕ ವೇದಿಕೆಯನ್ನು ಕಟ್ಟಿದ್ದು ಚಳ್ಳಕೆರೆಯಲ್ಲಿ, ಯಶಸ್ಸು ಗಳಿಸಿದ್ದು ಚಿತ್ರದುರ್ಗದಲ್ಲಿ ಎಂದರು.

ಇಂದು ಯಾವ ಭಾರತೀಯನೂ ಏಕಾಂಗಿಯಲ್ಲ; ಎಲ್ಲರೂ ಸಾಲಗಾರರು. ಶಸ್ತ್ರಾಸ್ತ್ರಗಳ ಸಾಲದ ಭಾರ ಭಾರತೀಯರ ಮೇಲಿದೆ. ಇಂತಹ ವಿಷಯಗಳನ್ನು ಗಣ್ಯರು ಹೇಳಿದ್ದಾರೆ. ನಾನು ಸಂಗೀತಗಾರ, ಸಾಹಿತಿಯಾಗಿ, ನಿಮ್ಮ ಕರುವಾಗಿ ಬಂದಿದ್ದೇನೆ ಎಂದರು.

ನಾಡು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಉಪಾಯಗಳನ್ನು ಕಂಡುಹಿಡಿಯಲು ಇದೊಂದು ಅವಕಾಶ. ನೀವೆಲ್ಲ ಎಚ್ಚರವಾಗಿರಬೇಕು. ನಮ್ಮನ್ನು ಯುದ್ಧಕ್ಕೆ ಕೆಣಕಿ ಅವರು ಬಲಿಹಾಕಲು ಯತ್ನಿಸುತ್ತಿಸಿದ್ದಾರೆ ಎಂದರು.

ಸದೃಢವಾಗಿರುವ ಎಂದೂ ಸೋಲದ ಯೋಧರಿಗೆ ವಿಷಭರಿತ ಸೇಬುಗಳನ್ನು ಹಂಚಲಾಗುತ್ತಿದೆ. ನೀವು ಬುದ್ಧ ಆಗಬೇಡಿ, ಶುದ್ಧರಾಗಿ ಸಾಕು. ಬಂಧುತ್ವ ಎಂತಹ ಅಧ್ಬುತ ಮಾತು. ಬಂಧುಗಳೂ ದಾಯಾದಿಗಳೂ ಮನುಷ್ಯರೇ. ಬಂಧುತ್ವದಲ್ಲಿ ಅದ್ಭುತವಾದ ಶಕ್ತಿ ಇದೆ. ನಾವು ಮಾಡುವ ಕೆಲಸದಲ್ಲಿ ಶುದ್ಧತೆ ಇರಬೇಕು ಎಂದರು.

ಸಂವಿಧಾನ ಬಂತು ಯುದ್ಧ ನಿಲ್ತು. ಬೇಡರು ಸೇರಿದಂತೆ 74% ಜನ ಅಕ್ಷರ ಕಲಿತರು. ಸಂವಿಧಾನ ಯುದ್ಧ ಮಾಡುವುದನ್ನು ನಿಲ್ಲಿಸಿದೆ. ಭಾರತದ ಎಲ್ಲ ನಿಘಂಟುಗಳಿಂದ ಶೂದ್ರ ಪದನ್ನು ತೆಗೆದುಹಾಕಬೇಕು. ಶೂದ್ರ ಹೋಗಿ ಶುದ್ಧವಾಗಬೇಕು. ಇವತ್ತಿನಿಂದ ನಾವು ಶುದ್ಧ ಆಗೋಣ ಸಾಕು. ದೇಶದಲ್ಲಿ ನಾವು ಶುದ್ಧರು. ನಾವು ಶುದ್ಧರೆ ಆಗಿದ್ದೇವೆ. ಇದನ್ನು ನಿಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಿ. ಪ್ರತಿ  ಕೇಂದ್ರದಲ್ಲೂ ಶುದ್ಧತ್ವ ಬೇಕು ಎಂದರು.

ಎಲ್ಲರೂ ಹೊಣೆಯರಿತ ಜ್ಞಾನಿಯಾಗಬೇಕು. ಸಿಂಹಾಸನದ ಮೇಲೆ ಕುಳಿತವನ ಕಾಲು ನೆಲದ ಮೇಲೆ ಇರಬೇಕು. ಪ್ರಜಾಪ್ರಭುತ್ವದಲ್ಲಿ ರಾಜಪ್ಪ ದಳವಾಯಿ ಒಂದು ಒಳ್ಳೆ ರೂಪಕ. ಒಬ್ಬರೇ ರಾಜ, ದಳವಾಯಿ ಆಗಬೇಕು. ನೀವು ಶುದ್ಧರಾಗಿ, ಸೇವೆಯಲ್ಲಿ ಶುದ್ಧತೆ ಇರಲಿ. ಶುದ್ಧತೆಯನ್ನು ಹೊಂದಿದವರನ್ನು ಅಧಿಕಾರಕ್ಕೆ ತನ್ನಿ ಎಂದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು