ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಪತ್ರಿಕೋದ್ಯಮದಲ್ಲಿ ಕೆಲವು ಕಾಲ ಸಕ್ರಿಯವಾಗಿದ್ದ ಇವರು, ನಿರಂತರ ಓದು, ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರು. ಇಡೀ ಕರ್ನಾಟಕವನ್ನು ಪಾದಯಾತ್ರೆಯ ಮೂಲಕ ಸಂಚರಿಸಿ ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ಸಾಧನೆ ಮಾಡಿದವರು.

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ

ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ.

ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ ಭಕ್ತಿಗೂ, ಮಾನವೀಯತೆಗೂ ಇದರಿಂದ ಒಂದು ಅರ್ಥ ಬರುತ್ತದೆಯಲ್ಲವೇ…..

ಯೋಚಿಸುವ ಸರದಿ ನಮ್ಮದು……

ಒಂದು ಸಾಂಸ್ಕೃತಿಕ ಹಬ್ಬವಾಗಿ ನಾಗರ ಪಂಚಮಿಗೆ ಯಾವುದೇ ವಿರೋಧವಿಲ್ಲ. ಹಬ್ಬಗಳು ನಮ್ಮ ಸಂಸ್ಕೃತಿಯ ಮತ್ತು ಬದುಕಿನ ಭಾಗಗಳು. ಅದನ್ನು ಆಚರಿಸುವುದು ಸಂಭ್ರಮಿಸುವುದು ಉತ್ತಮ ನಡವಳಿಕೆ. ಆದರೆ ಹಬ್ಬದ ಹೆಸರಿನಲ್ಲಿ ಮೌಢ್ಯ ಮತ್ತು ಆಹಾರ ವಸ್ತುಗಳ ವ್ಯರ್ಥವಾಗುವುದನ್ನು ತಡೆಯಬೇಕು ಮತ್ತು ಪರಿವರ್ತನೆ ಹೊಂದಬೇಕು. ಬದಲಾವಣೆ ಜಗದ ನಿಯಮ. ಅದೇ ಅರಿವು ಅದೇ ಶಿಕ್ಷಣ ಅದೇ ನಾಗರಿಕತೆ……..

ಭಾರತದಲ್ಲಿ ಸುಮಾರು 80 ಲಕ್ಷ ಜನ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ ಎಂಬ ವರದಿಯಿದೆ. ಅಂತಹವರಿಗೆ ಹಾಲು ಎಷ್ಟು ಮುಖ್ಯ ಎಂಬುದನ್ನು ಒಮ್ಮೆ ಯೋಚಿಸಿ.

ಹೊಸ ಬಟ್ಟೆ, ಆರೋಗ್ಯಯುತ ಒಳ್ಳೆಯ ಊಟ, ಕುಟುಂಬವರು ಮತ್ತು ಗೆಳೆಯರೊಂದಿಗೆ ಮಾತುಕತೆ, ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಒಂದಷ್ಟು ಒಳ್ಳೆಯ ಚಿಂತನೆ, ಸ್ವಲ್ಪ ವಿಶ್ರಾಂತಿ, ಮಕ್ಕಳಿಗೆ ಹಬ್ಬಗಳ ಹಿನ್ನೆಲೆ ಮತ್ತು ಪರಿಚಯ ಎಲ್ಲವೂ ಸಹನೀಯ ಮತ್ತು ಅನುಕರಣೀಯ.

ಆದರೆ ಅತ್ಯುಪಯುಕ್ತ ಆಹಾರ ಪದಾರ್ಥಗಳ ದುರುಪಯೋಗ ಅಕ್ಷಮ್ಯ. ಒಬ್ಬರನ್ನು ನೋಡಿ ಇನ್ನೊಬ್ಬರು, ಮಾಧ್ಯಮಗಳ ಮೂರ್ಖತನ ಮತ್ತು ಬೇಜವಾಬ್ದಾರಿ ಕಾರ್ಯಕ್ರಮಗಳಿಂದ ಮತ್ತೊಬ್ಬರು, ಯಾರೋ ಜ್ಯೋತಿಷಿಗಳಿಂದ ಮಗದೊಬ್ಬರು ಹೀಗೆ ಇದು ನಡೆಯುತ್ತಲೇ ಇರುತ್ತದೆ. ಪ್ರಜ್ಞಾವಂತ ನಾಗರಿಕರು ಇದಕ್ಕೆ ಒಂದು ಮಿತಿ ಹೇರಲೇಬೇಕಿದೆ.

ಸಿನಿಮಾ ನಟರ ಕಟೌಟುಗಳಿಗೆ ಹಾಲಿನ ಅಭಿಷೇಕ, ಇನ್ಯಾರಿಗೋ ಸೇಬಿನ ಹಾರ, ಸಿನಿಮಾ – ಧಾರವಾಹಿಗಳಲ್ಲಿ ಆಹಾರ ಪದಾರ್ಥಗಳನ್ನು ಚೆಲ್ಲುವ ಅಥವಾ ನಾಶಪಡಿಸುವ ದೃಶ್ಯಗಳು ಎಲ್ಲವನ್ನೂ ನಿಲ್ಲಿಸಬೇಕು. ಅದು ರಾಷ್ಟ್ರೀಯ ಸಂಪನ್ಮೂಲಗಳ ನೇರ ದುರುಪಯೋಗ ಎಂದು ಪರಿಗಣಿಸಬೇಕು.

ಹಾಲೇ ಇರಲಿ, ಹಣ್ಣು ತರಕಾರಿಗಳೇ ಇರಲಿ, ಬೇಳೆ ಕಾಳುಗಳೇ ಇರಲಿ ರೈತರು ಬಹಳ ಕಷ್ಟಪಟ್ಟು ಪ್ರಕೃತಿಯನ್ನು ಉಪಯೋಗಿಸಿಕೊಂಡು ಬೆಳೆಯುತ್ತಾರೆ. ಅದಕ್ಕೆ ಗೌರವ ಕೊಡಬೇಕಾದದ್ದು ಮತ್ತು ಸದುಪಯೋಗ ಪಡಿಸಿಕೊಳ್ಳಬೇಕಾದದ್ದು ನಮ್ಮ ಕರ್ತವ್ಯ.

ನಾಗರ ಪಂಚಮಿ ಒಂದು ಹಬ್ಬವಾಗಿ ಆಚರಿಸಿ. ಆದರೆ ಹಾವು ಅಥವಾ ಹುತ್ತಕ್ಕೆ ಹಾಲೆರೆಯದೇ ಅದೇ ಹಾಲು ಹಣ್ಣುಗಳನ್ನು ದಯವಿಟ್ಟು ಆಹಾರವಾಗಿ ಉಪಯೋಗಿಸಿಕೊಳ್ಳಿ ಅಥವಾ ಇತರರಿಗೆ ದಾನ ಮಾಡಿ. ಇದರಿಂದ ನಾಗರ ಪಂಚಮಿ ಒಂದು ಹಸಿವು ನಿವಾರಣೆಯ ಹಬ್ಬವಾಗಲಿ, ನಾಗರ ಪಂಚಮಿ ಬಸವ ಪಂಚಮಿಯಾಗಲಿ………..

ಇದನ್ನು ಧಾರ್ಮಿಕ ನಾಯಕರುಗಳು, ಮಾಧ್ಯಮಗಳವರು, ಶಿಕ್ಷಕರು, ವಿಜ್ಞಾನಿಗಳು, ರಾಜಕಾರಣಿಗಳು, ಪ್ರಗತಿಪರರು ಎಲ್ಲರೂ ಹೇಳಬೇಕು.

ಒಂದು ಸಮಾಜದ ನಿಜವಾದ ಆತ್ಮ ಅಡಗಿರುವುದು ಧರ್ಮದಿಂದಲ್ಲ, ವಿಜ್ಞಾನದಿಂದಲ್ಲ ಪ್ರಕೃತಿಯ ಸಹಜ ನಿಯಮದಿಂದ ಮಾತ್ರ. ಅದಕ್ಕಾಗಿ ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ