October 1, 2023 7:23 am

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಕಳೆದ 75 ವರ್ಷಗಳಿಂದ ಮೀಸಲಾತಿ ಜಾರಿಯಲ್ಲಿದೆ. ಆದರೆ ಈ ವರ್ಗದ ಮಹಿಳೆಯರು, ಆದಿವಾಸಿಗಳು ಮತ್ತು ಅಲೆಮಾರಿಗಳ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಇದರ ಜೊತೆಗೆ ದೇವದಾಸಿಯರು, ಸಫಾಯಿ ಕರ್ಮಚಾರಿಗಳು ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಜೀವನ ಇನ್ನೂ ಹೀನಾಯವಾಗಿದೆ. ಇವರ ಮತ್ತು ಇವರ ಮಕ್ಕಳ ಶೈಕ್ಷಣಿಕ ಮಟ್ಟ ಬಹಳ ಕಡಿಮೆ ಇದೆ. ತತ್ಪಪರಿಣಾಮವಾಗಿ ಉನ್ನತ ಶಿಕ್ಷಣವಿಲ್ಲ ಮತ್ತು ಸರ್ಕಾರಿ ಉದ್ಯೋಗವಿಲ್ಲ. ಅಪ್ಪಿತಪ್ಪಿ ಕೆಲವರು ಉನ್ನತ ಶಿಕ್ಷಣ ಪಡೆದಿದ್ದರೂ ಸಹ ಈ ವರ್ಗದ ಬಲಿಷ್ಠರ ಜೊತೆ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಕಳೆದ 75 ವರ್ಷಗಳಿಂದ ಮೀಸಲಾತಿ ಜಾರಿಯಲ್ಲಿ ಇದ್ದರೂ ಸಹ ಈ ಸವಲತ್ತು ಈ ಜನವರ್ಗಗಳಿಗೆ ತಲುಪಲೇ ಇಲ್ಲ. ಆದ್ದರಿಂದ ಈ ವರ್ಗದ ತಳ ಸಮುದಾಯಗಳಿಂದ ನಮ್ಮ ಪಾಲನ್ನು ನಮಗೆ ನೀಡಿ ಎಂಬ ಕೂಗು ಕೇಳಿಬರುತ್ತಿದೆ.

ಚಾರಿತ್ರಿಕ ಹಿನ್ನೆಲೆ

ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ರಾಜ್ಯ ಸಂಸ್ಥಾನದಲ್ಲಿ ಬ್ರಾಹ್ಮಣೇತರರಿಗೆ ಶೇ. 75ರಷ್ಟು ಮೀಸಲಾತಿಯನ್ನು ನೀಡಲಾಗಿತ್ತು. ಆದರೆ ಯಾವ ಜಾತಿ/ಪಂಗಡಗಳಿಗೆ ಎಷ್ಟು ಎಂದು ವರ್ಗೀಕರಣ ಮಾಡಿರಲಿಲ್ಲ. ಸ್ವಾತಂತ್ರ್ಯಾ ನಂತರ 1950ರಲ್ಲಿ ಸಂವಿಧಾನವು ಜಾರಿಗೆ ಬಂದಾಗ ಪ.ಜಾ, ಮತ್ತು ಪ.ಪಂ.ಗಳನ್ನು ಒಟ್ಟಿಗೆ ಸೇರಿಸಿ ಶೇ.18ರಷ್ಟು ಮೀಸಲಾತಿಯನ್ನು ನೀಡಲಾಯಿತು. 1956ರಲ್ಲಿ ಭಾಷಾವಾರು ಪ್ರಾಂತ್ಯಗಳ ಮರು ಎಂಗಡಣೆಯ ನಂತರ ಪ.ಜಾ.ಗೆ ಶೇ.15ರಷ್ಟು ಮತ್ತು ಪ.ಪಂ.ಕ್ಕೆ ಶೇ.3ರಷ್ಟು ಮೀಸಲಾತಿಯನ್ನು ಪ್ರತ್ಯೇಕವಾಗಿ ನೀಡಲಾಯಿತು. ಮುಂದುವರೆದು ಹಿಂದುಳಿದ ವರ್ಗಗಳಿಗೆ 1958ರಿಂದ ರಾಜ್ಯದಲ್ಲಿ ಮೀಸಲಾತಿಯನ್ನು ನೀಡಲಾಯಿತು. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿ ಪ್ರವರ್ಗ-1ಕ್ಕೆ ಶೇ. 2, ಪ್ರವರ್ಗ-2ಎಗೆ ಶೇ. 16, ಪ್ರವರ್ಗ-2ಬಿಗೆ ಶೇ. 5, ಪ್ರವರ್ಗ-3ಎಗೆ ಶೇ. 4 ಮತ್ತು ಪ್ರವರ್ಗ-3ಬಿಗೆ ಶೇ. 5 ಎಂಬುದಾಗಿ ಮೀಸಲಾತಿ ನೀಡಲಾಗಿದೆ. ಹೀಗೆ ಕಾಲಕಾಲಕ್ಕೆ ರಾಜ್ಯದಲ್ಲಿ ಒಂದು ರೀತಿಯ ಒಳಮೀಸಲಾತಿಯನ್ನು ನೀಡುತ್ತಲೇ ಬರಲಾಗಿದೆ.

ಪಂಜಾಬ್‌, ಹರಿಯಾಣ, ಮಹಾರಾಷ್ಟ್ರ ತಮಿಳುನಾಡು ಇತ್ಯಾದಿ ರಾಜ್ಯಗಳು ಒಳಮೀಸಲಾತಿಯನ್ನು ಜಾರಿಗೆ ತಂದಿವೆ. ಕೇಂದ್ರ ಸರ್ಕಾರವು ನ್ಯಾ. ರೋಹಿಣಿ ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಒಳಮೀಸಲಾತಿಯನ್ನು ನೀಡುವ ಬಗ್ಗೆ ವರದಿಯನ್ನು ಕೇಳಿದೆ. ಈ ಆಯೋಗವು ಕಾರ್ಯನಿರತವಾಗಿದೆ. ಸರ್ವೋಚ್ಛ ನ್ಯಾಯಾಲಯವು ಒಳಮೀಸಲಾತಿ ನೀಡುವ ವಿಷಯವನ್ನು 7 ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಿದೆ. ಈಗ ವಿಚಾರಣಾ ಹಂತದಲ್ಲಿದೆ. ಈ ರೀತಿಯಾಗಿ ದೇಶದಲ್ಲಿ ಒಳಮೀಸಲಾತಿಯನ್ನು ಹಂತಹಂತವಾಗಿ ಜಾರಿಗೊಳಿಸಲಾಗುತ್ತಿದೆ ಮತ್ತು ಅದು ಅನಿವಾರ್ಯವೂ ಹೌದು.

ಒಂದು ಕ್ರಾಂತಿಕಾರಕ ಆಂದೋಲನದಲ್ಲಿ ಪ್ರಜ್ಞಾವಂತ ಮತ್ತು ಸಮರ್ಥರಾದವರು ತೊಂದರೆ, ಸಂಕಷ್ಟಗಳನ್ನು ಸಹಿಸಿಕೊಳ್ಳಲು ಮುಂದೆ ಬರಬೇಕು ಮತ್ತು ಕಷ್ಟಗಳನ್ನು ಸ್ವೀಕರಿಸಲು ಹಾಗೂ ತ್ಯಾಗಗಳನ್ನು ಮಾಡಲು ಅವರೇ ಮೊದಲಾಗಬೇಕು. ಇಂಥ ಸಂಕಷ್ಟಗಳು ಹಾಗೂ ಆಂದೋಲನಗಳಿಂದ ಸಿಕ್ಕಂಥ ಪ್ರತಿಫಲವನ್ನು ತಮ್ಮಲ್ಲಿ ಯಾರು ಅತ್ಯಂತ ದುರ್ಬಲರೋ ಅಂಥವರಿಗೆ ಮೊದಲು ಕೊಡಬೇಕು. ಹಸಿದವರಿಗೆ ಮೊದಲು ಉಣಲು ಕೊಡಬೇಕು. ಚೆನ್ನಾಗಿ ಉಂಡವರು ಇನ್ನಷ್ಟು ಕಾಲ ಕಾಯಬಹುದಾಗಿದೆ. ಭಾರತದ ಸ್ವಾತಂತ್ರ್ಯ ಆಂದೋಲನದ ಧ್ಯೇಯವು ಇದೇ ಆಗಿತ್ತು. ಈ ಸಮಸ್ಯೆಯ ಬಗ್ಗೆ ಸರ್ಕಾರವು ಕೂಲಂಕಶವಾಗಿ ಚಿಂತಿಸಿ ಮತ್ತು ಚರ್ಚಿಸಿ ಒಂದು ಆರೋಗ್ಯಕರ ತೀರ್ಮಾನವನ್ನು ತೆಗೆದುಕೊಳ್ಳುವ ಅಗತ್ಯವಿದೆ.

ಸರ್ಕಾರದ ಮೀಸಲಾತಿಯ ಸೌಲಭ್ಯವನ್ನು ಪ.ಜಾ./ಪ.ಪಂ. ಮತ್ತು ಹಿಂದುಳಿದ ವರ್ಗದ ಹೆಸರಿನಲ್ಲಿ ಕೆಲವೇ ಜಾತಿಗಳವರು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸಹಸ್ರಾರು ಜನರು ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗಿ ಭಿಕ್ಷೆಬೇಡಿ ಜೀವನ ನಡೆಸುತ್ತಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಈ ಮೀಸಲಾತಿ ನೀತಿಯಿಂದ ತಮಗೆ ನಿರಂತರವಾದ ಬಡತನವನ್ನು ಬಿಟ್ಟು ಬೇರೇನೂ ಸಿಕ್ಕುವುದಿಲ್ಲ ಎಂಬ ಆತಂಕ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಕ್ಕೆ ವಿರುದ್ಧವಾದದ್ದು. ಇದರಿಂದ ಈ ಜಾತಿಗಳಲ್ಲಿ ಆಂತರಿಕ ಘರ್ಷಣೆಗೆ ಕಾರಣವಾಗಬಹುದು. ಇವರಲ್ಲಿ ಹುಟ್ಟಿಕೊಂಡಿರುವ ಅಸಮಧಾನದತ್ತ ಗಮನಹರಿಸದಿದ್ದರೆ ಇವರ ಒಗ್ಗಟ್ಟಿಗೆ ಧಕ್ಕೆಯಾಗುವುದರಲ್ಲಿ ಸಂದೇಹವಿಲ್ಲ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಈ ವರ್ಗದ ಉತ್ತಮ ಸ್ಥಿತಿಯಲ್ಲಿ ಇರುವವರು, ತಮಗಿಂತ ಹೆಚ್ಚು ವಂಚಿತರಾದವರ ಬೇಡಿಕೆಯು ನ್ಯಾಯಯುತವಾದುದೆಂದು ಒಪ್ಪಿಕೊಂಡು ತಮ್ಮ ಸಮ್ಮತಿಯನ್ನು ನೀಡುವ ಮುಖಾಂತರ ಈ ಸಮುದಾಯಗಳ ಒಗ್ಗಟ್ಟನ್ನು ರಕ್ಷಿಸಬೇಕು.

2012ರಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಸರ್ಕಾರಕ್ಕೆ ವರದಿ ಮಂಡಿಸಿದೆ. 9 ವರ್ಷ ಕಳೆದ ನಂತರವೂ ಸರ್ಕಾರ ಇದನ್ನು ಪರಿಶೀಲನೆ ಮಾಡಿಲ್ಲ.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು