April 24, 2024 6:46 am

ಕುವೆಂಪು ಸಾಹಿತ್ಯ, ಚಿಂತನೆಗಳು ಮತ್ತು ಪ್ರಸ್ತುತ ಸಾಮಾಜಿಕ ಸವಾಲುಗಳು

ಮೈಸೂರು: ದಿನಾಂಕ 29.12.21ರಂದು ಮೈಸೂರಿನ ರೋಟರಿ ಸಭಾಂಗಣದಲ್ಲಿ ಮಾನವ ಬಂಧುತ್ವ ವೇದಿಕೆ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಕುವೆಂಪು ಸಾಹಿತ್ಯ, ಚಿಂತನೆಗಳು ಮತ್ತು ಪ್ರಸ್ತುತ ಸಾಮಾಜಿಕ ಸವಾಲುಗಳು ವಿಷಯದ ಕುರಿತು ವಿಚಾರಸಂಕಿರಣವನ್ನು ಆಯೋಜಿಸಲಾಗಿತ್ತು.

ವಿಚಾರ ಸಂಕಿರಣದಲ್ಲಿ ಸಾಹಿತಿ, ಚಿಂತಕ ಪ್ರೊ. ಕಾಳೇಗೌಡ ನಾಗವಾರ ಮಾತನಾಡಿ, ವಿವೇಕ ಇರುವವರು ಎಂದಿಗೂ ಮಾನವ ಬಂಧುತ್ವದೆಡೆಗೆ ಪ್ರತಿಕ್ರಿಯಿಸುತ್ತಾರೆ. ಆದ್ದರಿಂದ ಕಾಲಕಾಕ್ಕೆ ಏನೇನಾಗುತ್ತಿದೆ ಎಂಬ ಐತಿಹಾಸಿಕ ಸಂಗತಿಗಳನ್ನು ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಬ್ರಿಟಿಷರು ಧರ್ಮ ಪ್ರಚಾರಕ್ಕಾಗಿ ಕ್ರೈಸ್ತ ಪಾದ್ರಿಯನ್ನು ಕಳುಹಿಸಿದಾಗ, ಅದೇ ಪಾದ್ರಿಯೇ ಚಳುವಳಿಗೆ ಸೇರಿಕೊಂಡು ಇಲ್ಲಿನ ಸಂಸ್ಕೃತಿಗೆ ಮಾರುಹೋಗುತ್ತಾರೆ. ವಿಶ್ವವಿದ್ಯಾಲಯದಲ್ಲೂ ಕಲಿಯಲಾಗದ್ದನ್ನು ಇಲ್ಲಿ ಕಲಿತಿದ್ದೇನೆ ಎಂದು ತನ್ನ ಕೃತಿಯೊಂದರಲ್ಲಿ ಬರೆದುಕೊಳ್ಳುತ್ತಾರೆ. ಇಂತಹ ವೈವಿಧ್ಯತೆ ನಮ್ಮ ಸಂಸ್ಕೃತಿಯಲ್ಲಿದೆ ಎಂದರು.  

ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಮಾನವ ಬಂಧುತ್ವ ವೇದಿಕೆಯ ಮೈಸೂರು ವಿಭಾಗ ಸಂಚಾಲಕಿ ಡಾ. ಲೀಲಾ ಸಂಪಿಗೆ, ಬೆಂಗಳೂರು ವಿಭಾಗದ ಸಂಚಾಲಕ ಆರ್.ಜಯಕುಮಾರ್, KAS ಅಧಿಕಾರಿ ಮಹದೇವ ನಾಯಕ, AVSS ಅಧ್ಯಕ್ಷ ತುಂಬಲ ರಾಮಣ್ಣ, ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಮೊದಲಾದವರು ಉಪಸ್ಥಿತರಿದ್ದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನವ ಬಂಧುತ್ವ ವೇದಿಕೆಯ ಮೈಸೂರು ಜಿಲ್ಲಾ ಸಂಚಾಲಕ ದ್ಯಾವಪ್ಪ ನಾಯಕ ವಹಿಸಿದ್ದರು.

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ