October 1, 2023 7:59 am

ಮನಸ್ಮೃತಿಯಲ್ಲಿ ಮಹಿಳೆಯರಿಗೆ ಗೌರವಾನ್ವಿತ ಸ್ಥಾನ ಹೇಳಿಕೆ: ಪ್ರಜಾಪ್ರಭುತ್ವದ ದುರಂತ

ಮನುಸ್ಮೃತಿಯು ಭಾರತೀಯ ಮಹಿಳೆಯರಿಗೆ ಗೌರವಾನ್ವಿತ ಸ್ಥಾನ ಮಾನ ನೀಡಿದೆ ಎಂದು ದೆಹಲಿಯ ಹೈಕೋರ್ಟ್ ನ್ಯಾಯಮೂರ್ತಿಗಳಾದ ಪ್ರತಿಭಾ ಸಿಂಗ್ ಅವರು ಹೇಳಿಕೆ ನೀಡಿರುವುದು ಪ್ರಜಾಪ್ರಭುತ್ವದ ದುರಂತ.

ಮಹಿಳೆಯರ ಸಮಾನ ಹಕ್ಕುಗಳು ಮತ್ತು ಘನತೆಗಾಗಿ ಹೋರಾಟ ನಡೆಸಿ ಹಿಂದೂ ಕೋಡ್ ಬಿಲ್ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಬಾಬಾ ಸಾಹೇಬರನ್ನು ಇವರು ನೆನೆಯದೇ ಇರುವುದು ನಿಜಕ್ಕೂ ಬೇಸರದ ಸಂಗತಿ

ವಾಸ್ತವವಾಗಿ ನೋಡುವುದಾದರೆ,

ತನ್ನ ಸ್ವಂತ ಮನೆಯಲ್ಲಿ ಕೂಡ ಮಹಿಳೆಯು, ಆಕೆ ಮಗು ಅಥವಾ ಯುವತಿ ಅಥವಾ ವೃದ್ಧೆಯಾಗಿರಲಿ, ಎಂದಿಗೂ ಯಾವುದೇ ಕಾರ್ಯವನ್ನು ಸ್ವತಂತ್ರವಾಗಿ ನಿರ್ವಹಿಸಬಾರದು. ಆಕೆ ಮಗುವಾಗಿ ತನ್ನ ತಂದೆಯ ನಿಯಂತ್ರಣದಲ್ಲಿ, ಪತ್ನಿಯಾಗಿ ತನ್ನ ಪತಿಯ ಅಧೀನದಲ್ಲಿ ಮತ್ತು ಪತಿಯ ನಿಧನಾನಂತರ ತನ್ನ ಮಕ್ಕಳ ಅಧೀನದಲ್ಲಿರಬೇಕು

ಎಂದು ಮನುಸ್ಮೃತಿಯ 5 ಮತ್ತು 10 ನೇ ಅಧ್ಯಾಯಗಳು ಉಲ್ಲೇಖಿಸುತ್ತವೆ.

ಇನ್ನು ಪುರುಷನು
ಸದ್ಗುಣಗಳನ್ನು ಕಳೆದುಕೊಂಡಿದ್ದರೂ, ಆತ ಕಾಮಪಿಪಾಸುವಾಗಿದ್ದರೂ ಮತ್ತು ಉತ್ತಮ ಗುಣಗಳಿಂದ ಸಂಪೂರ್ಣವಾಗಿ ವಂಚಿತನಾಗಿದ್ದರೂ ಒಳ್ಳೆಯ ಮಹಿಳೆಯು ಯಾವಾಗಲೂ ತನ್ನ ಪತಿಯನ್ನು ದೇವರಂತೆ ಪೂಜಿಸಬೇಕು ಎಂದು ಅಧ್ಯಾಯ 5 ರ 154 ನೇ ಶ್ಲೋಕದಲ್ಲಿ ನಮೂದಾಗಿದೆ.

ಅಲ್ಲದೇ

ಪತ್ನಿ,ಪುತ್ರ ಮತ್ತು ಗುಲಾಮ-ಈ ಎಲ್ಲ ಮೂವರೂ ಆಸ್ತಿಯಿಲ್ಲದವರು ಎಂದು ಸಂಪ್ರದಾಯವು ನಮಗೆ ಹೇಳುತ್ತದೆ. ಅವರು ಏನು ಸಂಪಾದಿಸಿದರೂ ಅದು ಅವರು ಅಧೀನದಲ್ಲಿರುವ ಪುರುಷನ ಆಸ್ತಿಯಾಗುತ್ತದೆ ಎಂದು ಮನುಸ್ಮೃತಿಯ ಅಧ್ಯಾಯ 8ರ 416 ನೇ ಶ್ಲೋಕವು ನಮಗೆ ತಿಳಿಸುತ್ತದೆ.

ಪರಿಸ್ಥಿತಿ ಹೀಗಿದ್ದಾಗಲೂ ಕೂಡಾ ಮಾನ್ಯ ನ್ಯಾಯಮೂರ್ತಿಗಳ ಹೇಳಿಕೆಯನ್ನು ಗಮನಿಸಿದರೆ ಅವರು ಈ ವಿಷಯದಲ್ಲಿ ಪೂರ್ವಾಗ್ರಹ ಹೊಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

  • H.C. Mahadevappa

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು