October 1, 2023 6:55 am

ಚುನಾವಣೆಗಳಲ್ಲಿ ಮಾಧ್ಯಮದ ಪಾತ್ರ

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಚುನಾವಣೆಗಳು ಇಲ್ಲದೆ ಪ್ರಜಾ ಪ್ರಭುತ್ವವಿಲ್ಲ. ಮಾಧ್ಯಮಗಳು ಇಲ್ಲದೆ ಚುನಾವಣೆಗಳು ಇಲ್ಲ. ಆದ್ದರಿಂದ ಪ್ರಜಾಪ್ರಭುತ್ವ, ಚುನಾವಣೆಗಳು ಮತ್ತು ಮಾಧ್ಯಮ ಒಂದಕ್ಕೊಂದು ನಿಕಟ ಸಂಬಂಧ ಹೊಂದಿವೆ.

ಮತದಾರರ ತೀರ್ಮಾನಗಳು ಅಥವಾ ಆಯ್ಕೆಗಳು ಅವರಿಗೆ ಲಭ್ಯವಿರುವ ಮಾಹಿತಿಯ ಮೇಲೆ ಅವಲಂಬಿಸಿವೆ. ಪ್ರಜಾಪ್ರಭುತ್ವದಲ್ಲಿ ಜನರು ತಮ್ಮ ಮುಕ್ತವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕಾದರೆ ಮಾಹಿತಿ ಬಹಳ ಮುಖ್ಯವಾಗುತ್ತದೆ.

ಇಂದು ಮತದಾರರು ಮಾಹಿತಿಯನ್ನು ಪಡೆಯುತ್ತಿರುವುದು ಮುಖ್ಯವಾಗಿ ಮೂರು ಮೂಲಗಳಿಂದ. ಅವುಗಳೆಂದರೆ :

1. ದಿನಪತ್ರಿಕೆಗಳು

2. ಟಿ.ವಿ. ಚಾನಲ್‌ಗಳು

3. ಸಾಮಾಜಿಕ ಜಾಲತಾಣ

ಪ್ರತಿದಿವಸ ಸುಮಾರು 8500 ದಿನಪತ್ರಿಕೆಗಳು 100 ಭಾಷೆಗಳಲ್ಲಿ ಪ್ರಕಟವಾಗುತ್ತಿವೆ. ನೂರಾರು ಚಾನಲ್ ಗಳಿಂದ ಮತದಾರರು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇವುಗಳ ಜೊತೆಗೆ ಕಳೆದ 10 ವರ್ಷಗಳಲ್ಲಿ ಸೋಷಿಯಲ್ ಮೀಡಿಯವು ಸಹ ದೊಡ್ಡ ಪ್ರಭಾವ ಬೀರಿದೆ. ಸುದ್ದಿ ಮಾಧ್ಯಮ ಮತ್ತು ಚಿತ್ರ ಮಾಧ್ಯಮಗಳು ಜನಾಭಿಪ್ರಾಯವನ್ನು ರೂಪಿಸಬಲ್ಲ ಶಕ್ತಿಯನ್ನು ಪಡೆದುಕೊಂಡಿವೆ.

ಚುನಾವಣೆಗಳ ಸಮಯದಲ್ಲಿ ಮಾಧ್ಯಮಗಳ ಪ್ರಮುಖ ಕರ್ತವ್ಯವೆಂದರೆ:

  1. ಮತದಾರರಿಗೆ ಶಿಕ್ಷಣವನ್ನು ನೀಡಬೇಕು.
  2. ಸರ್ಕಾರದ ಕಾರ್ಯ ಸಾಧನೆ, ವೈಫಲ್ಯ ಇತ್ಯಾದಿಗಳ ಬಗ್ಗೆ ವರದಿಯನ್ನು ನೀಡಬೇಕು.
  3. ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಆರೋಗ್ಯಕರ ಚರ್ಚೆಗೆ ಮಾಧ್ಯಮಗಳು ವೇದಿಕೆಯಾಗಬೇಕು.
  4. ಒಟ್ಟಾರೆ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಕಣ್ಣಾವಲಿಟ್ಟು ಕೆಲಸ ಮಾಡಬೇಕು.

ಚುನಾವಣೆಗಳಲ್ಲಿ ಜನಸಾಮಾನ್ಯರ ಸಮಸ್ಯೆಗಳಾದ ಬಡತನ, ಶಿಕ್ಷಣ, ಆರೋಗ್ಯ ಉದ್ಯೋಗ, ಕೃಷಿ ಬಿಕ್ಕಟ್ಟು, ಕೈಗಾರಿಕಾ ಬಿಕ್ಕಟ್ಟು ಇತ್ಯಾದಿ ವಿಷಯಗಳು ಚರ್ಚೆಗೆ ಬರುತ್ತಿಲ್ಲ. ಬದಲಿಗೆ ಬದುಕಿಗೆ ಅಗತ್ಯವಿಲ್ಲದ ವಿಷಯಗಳಾದ ಮಂದಿರ-ಮಸೀದಿ, ಮತಾಂತರ, ಸಮಾನ ಸಿವಿಲ್ ಕೋಡ್, ಅನುಚ್ಛೇದ 370, ಪೌರತ್ವ ಕಾಯಿದೆ ಇತ್ಯಾದಿಗಳು ಆದ್ಯತೆ ಪಡೆಯುತ್ತಿವೆ. ದೇಶ ಎದುರಿಸುತ್ತಿರುವ ಸಮಸ್ಯೆಗಳ ಮತ್ತು ಸವಾಲುಗಳ ಬಗ್ಗೆ ಮಾಧ್ಯಮಗಳು ಚರ್ಚೆ ನಡೆಸುವ ವೇದಿಕೆಯಾಗಬೇಕು. ವಿವಿಧ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ಈ ದೇಶದ ಸಮಸ್ಯೆಗಳನ್ನು ಯಾವ ರೀತಿ ಪರಿಹರಿಸುತ್ತಾರೆ ಮತ್ತು ಸವಾಲುಗಳನ್ನು ಯಾವ ರೀತಿ ಹಿಮ್ಮೆಟ್ಟಿಸುತ್ತಾರೆ ಎಂಬುದಾಗಿ ತಿಳಿಯಪಡಿಸುವ ವೇದಿಕೆಯಾಗಬೇಕು.

ಆದರೆ ದೇಶದಲ್ಲಿ ಇಂದು ಮಾಧ್ಯಮಗಳು ಸೇವಾ ಕ್ಷೇತ್ರದಿಂದ ದೂರ ಸರಿದು ವ್ಯಾಪಾರೀಕರಣವಾಗುತ್ತಿದೆ. ಹಣ ಗಳಿಕೆಯೇ ಮುಖ್ಯ ಗುರಿಯಾಗಿದೆ. ಹೆಚ್ಚು ಹಣ ಗಳಿಸಲು ಹೆಚ್ಚು ಪ್ರಸರಣ ಸಂಖ್ಯೆಯು ಅಗತ್ಯ ಅನಿವಾರ್ಯವಾಯಿತು. ಇದಕ್ಕಾಗಿ ಕೀಳು ಮಟ್ಟದ ಅಭಿರುಚಿಗಳಾದ ಕ್ರೈಂ, ಸೆಕ್ಸ್ ಮತ್ತು ರೋಚಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ತುಂಬಲಾಗುತ್ತಿದೆ. ಅನೇಕ ಸಂದರ್ಭಗಳಲ್ಲಿ ಬಣ್ಣ ಬಳಿದುಕೊಂಡ, ತಿರುಚಲ್ಪಟ್ಟಿರುವ ಹಾಗೂ ಸತ್ವ ಕಳೆದುಕೊಂಡ ಸುದ್ದಿಯನ್ನು ಜನಸಾಮಾನ್ಯರಿಗೆ ನೀಡಲಾಗುತ್ತಿದೆ. ಪತ್ರಿಕೋದ್ಯಮ ಒಂದು ಸವಾಲಾಗಿ ನಮ್ಮ ಮುಂದಿದೆ. ಮಾಧ್ಯಮ ಇಂತಹ ಪರಿಸ್ಥಿತಿಯಿಂದ ಹೊರಬಂದರೆ ಮಾತ್ರ ಮುಕ್ತವಾದಂತಹ ಚುನಾವಣೆಗಳು ನಡೆಯಲು ಸಾಧ್ಯ. ಮುಕ್ತವಾದ ಮತ್ತು ಪಾರದರ್ಶಕವಾದ ಚುನಾವಣೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಸಾಧ್ಯ.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು