March 25, 2023 4:59 pm

ಮುಸ್ಲಿಂ ವ್ಯಕ್ತಿಗೂ ಬಿಳಿಗಿರಿರಂಗನಿಗೂ ಇದೆ ನಂಟು!

ಬಿಳಿಗಿರಿ ಬನದಲ್ಲೊಂದು ಭಾವೈಕ್ಯತೆ

ಚಾಮರಾಜನಗರ: ಕನಕ ಭಕ್ತಿ, ಬಸವಣ್ಣನ ಕಾಯಕ ಶಕ್ತಿ ಮೇಳೈಸಿದಂತೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಲಯ ಸಂಪ್ರೋಕ್ಷಣೆ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಭಾಗಿಯಾಗಿದ್ದಾರೆ.

ಅರೇ..‌! ನಿಜವೇ ಎಂಬ ನಿಮ್ಮ ಪ್ರಶ್ನೆಗೆ ಹೌದು ಎಂಬುದೇ ಉತ್ತರ‌. ಹಿರಿಯ ಕೆಎಎಸ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದ, ಉತ್ತಮ ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಮುಜೀಬ್ ಅಹಮ್ಮದ್ ಬಿಳಿಗಿರಿರಂಗನ ಅಪ್ಪಟ ಭಕ್ತರಾಗಿದ್ದಾರೆ, ಆ ರಂಗನಾಥನೂ ಇವರಿಗೆ ದಿಟ ದರ್ಶನವನ್ನು ನೀಡಿದ್ದಾನೆ.

ಬಿಳಿಗಿರಿರಂಗನಾಥನಿಗೂ ಹುಟ್ಟಿನಿಂದ ಮುಸ್ಲಿಂ ಧರ್ಮದವರಾದ ಮುಜೀಬ್ ಅವರ ನಂಟು 80ರ ದಶಕಲ್ಲಿ ಯಳಂದೂರು ತಹಸಿಲ್ದಾರ್ ಆದಾಗಿನಿಂದ ಶುರುವಾಗಿದೆ. 1986ರಲ್ಲಿ ದೇವರ ಮೂರ್ತಿಯೂ ಅಲುಗಾಡುತ್ತಿದೆ, ಸರಿಪಡಿಸಬೇಕೇಂದು ಅರ್ಚಕರು ಮುಜೀಬ್ ಗಮನಕ್ಕೆ ತರುತ್ತಾರೆ. ಆಗ ಮುಜೀಬ್ ಅವರು ಧರ್ಮದರ್ಶಿಗಳ ಸಭೆ ಕರೆದು, ಮುಜರಾಯಿ ಇಲಾಖೆಯೊಂದಿಗೆ ನಿರಂತರ ಪತ್ರ ವ್ಯವಹಾರ ನಡೆಸಿ ಪುನರ್ ಪ್ರತಿಷ್ಟಾಪನೆಗೆ ಮುಂದಾಗುತ್ತಾರೆ. ವೈಖಾನಸ ಆಗಮದ ಪ್ರಕಾಶ ಕಳಾಕರ್ಷನೆ, ಧಾನ್ಯವಾಸ ಬಳಿಕ ಪುನರ್ ಪ್ರತಿಷ್ಠಾಪಿಸಲು ಕಿಂಚಿತ್ತು ಲೋಪವಾಗದಂತೆ ಕಾರ್ಯ ನಿರ್ವಹಿಸುತ್ತಾರೆ.

ತಹಸಿಲ್ದಾರ್ ಆಗಿದ್ದರಿಂದ ಪುನರ್ ಪ್ರತಿಷ್ಠಾಪನೆಯ ಪೂಜೆಗೆ ಮುಜೀಬ್ ಅವರು ಕೂರಬೇಕು, ಯಾಗಗಳನ್ನು ಪೂರೈಸಬೇಕೆಂದು ತಿಳಿದಾಗ ಮುಜೀಬ್ ಅವರಲ್ಲಿ ತಾನು ಕೂರಬಹುದೇ, ಧರ್ಮ ಸಿದ್ಧಾಂತದ ಅಡ್ಡಿ, ಮನಸ್ಸಿನಲ್ಲಿ ಅಷ್ಟು ತಾನು ನಿರ್ಮಲನೇ ಎಂಬ ಅವ್ಯಕ್ತ ತೊಳಲಾಟಕ್ಕೆ ಸಿಲುಕಿದೆ. ಪುನರ್ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಯನ್ನು ಪರಿಶೀಲಿಸಿ ನಿವಾಸಕ್ಕೆ ಬಂದ ವೇಳೆ ಬಿಳಿಗಿರಿರಂಗನಾಥ ಸ್ವಾಮಿಯೇ ದರ್ಶನ ನೀಡಿ “ಕಳೆದ 1000 ವರ್ಷಗಳಿಂದ ನಿನ್ನ ನಿರೀಕ್ಷೆಯಲ್ಲಿ ನಾನಿದ್ದೆ. ನಿನ್ನಲ್ಲಿ ಎಲ್ಲವೂ ಸ್ವಚ್ಚ ಹಾಗೂ ನಿರ್ಮಲ, ಕಾರ್ಯ ನನ್ನದು ಲೌಖಿಕ ನೆಪ ನಿನ್ನದು, ನಿಂತು ನಿರ್ವಹಿಸು”  ಎಂದು ಮಾತುಗಳನ್ನಾಡಿ ಶಕ್ತಿ ಅಂತರ್ಧಾನವಾಗುತ್ತದೆ. ಬೃಹದಾಕಾರದ ಶಕ್ತಿ, ಅಂದಿನ ದಿನ ನೆನೆಸಿಕೊಂಡರೆ ಇಂದಿಗೂ ರೋಮಾಂಚನವಾಗುತ್ತದೆ ಎನ್ನುತ್ತಾರೆ ಮುಜೀಬ್.

ಬಳಿಕ, ಸಾಂಗವಾಗಿ ಪುನರ್ ಪ್ರತಿಷ್ಟಾಪನೆ ಕಾರ್ಯ ಮುಗಿಯಲಿದ್ದು ಪೂಜೆಯಲ್ಲಿ ಭಾಗಿಯಾಗುತ್ತಾರೆ, ಇವರ ಹೆಸರಿನಲ್ಲೇ ಮೊದಲ ಪೂಜೆಯೂ ಆಗುತ್ತದೆ‌, ಧರ್ಮ ಜಾತಿ ಮೀರಿದ ಘಟನೆಯೊಂದು ಘಟಿಸಿ ಮುಸ್ಲಿಂ ವ್ಯಕ್ಯಿಯೊಬ್ಬರು ಬಿಳಿಗಿರಿರಂಗನ ಭಕ್ತರಾಗುತ್ತಾರೆ.

ಸಂಪ್ರೋಕ್ಷಣೆಯಲ್ಲೂ ಭಾಗಿ: ಈಗ ದೇವಾಲಯ ಜೀರ್ಣೋದ್ಧಾರಗೊಂಡು ಸಂಪ್ರೋಕ್ಷಣೆ ಕಾರ್ಯದ ಕೊನೆ ದಿನದ ಪೂಜೆಯಲ್ಲಿ ಭಾಗಿಯಾಗಿ ಭಕ್ತಿ ಮೆರೆದಿದ್ದಾರೆ ಮುಜೀಬ್.

ಹೃದಯದಲ್ಲಿ ಗೂಡು ಕಟ್ಟದಿದ್ದರೇ ಎಲ್ಲಾ ಧರ್ಮಗಳ ದೇವರು ಭಗವಂತನೇ, ಹೃದಯ ವೈಶಾಲ್ಯತೆ ಒಂದಿರಬೇಕಷ್ಟೇ, ಬಿಳಿಗಿರಿರಂಗನಾಥನ ಶಕ್ತಿ, ಯಳಂದೂರು ಜನರ ಪ್ರೀತಿ ನನ್ನಲ್ಲಿ ಅಚ್ಚೊತ್ತಿದೆ ಎಂದು ಅವರು ಭಾವುಕರಾಗುತ್ತಾರೆ. ಅಲ್ಪ ಮಾನವರಿಗಷ್ಟೇ ಜಾತಿ- ಧರ್ಮ ದೇವರಿಗೂ ಅಲ್ಲ ಹೃದಯವಂತರಿಗಲ್ಲ ಎಂಬುದಕ್ಕೆ ಬಿಳಿಗಿರಿ ಬನ ಸಾಕ್ಷಿಯಾಗಿದೆ.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ