ಮುಸ್ಲಿಂ ವ್ಯಕ್ತಿಗೂ ಬಿಳಿಗಿರಿರಂಗನಿಗೂ ಇದೆ ನಂಟು!

ಬಿಳಿಗಿರಿ ಬನದಲ್ಲೊಂದು ಭಾವೈಕ್ಯತೆ

ಚಾಮರಾಜನಗರ: ಕನಕ ಭಕ್ತಿ, ಬಸವಣ್ಣನ ಕಾಯಕ ಶಕ್ತಿ ಮೇಳೈಸಿದಂತೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಲಯ ಸಂಪ್ರೋಕ್ಷಣೆ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಭಾಗಿಯಾಗಿದ್ದಾರೆ.

ಅರೇ..‌! ನಿಜವೇ ಎಂಬ ನಿಮ್ಮ ಪ್ರಶ್ನೆಗೆ ಹೌದು ಎಂಬುದೇ ಉತ್ತರ‌. ಹಿರಿಯ ಕೆಎಎಸ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದ, ಉತ್ತಮ ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಮುಜೀಬ್ ಅಹಮ್ಮದ್ ಬಿಳಿಗಿರಿರಂಗನ ಅಪ್ಪಟ ಭಕ್ತರಾಗಿದ್ದಾರೆ, ಆ ರಂಗನಾಥನೂ ಇವರಿಗೆ ದಿಟ ದರ್ಶನವನ್ನು ನೀಡಿದ್ದಾನೆ.

ಬಿಳಿಗಿರಿರಂಗನಾಥನಿಗೂ ಹುಟ್ಟಿನಿಂದ ಮುಸ್ಲಿಂ ಧರ್ಮದವರಾದ ಮುಜೀಬ್ ಅವರ ನಂಟು 80ರ ದಶಕಲ್ಲಿ ಯಳಂದೂರು ತಹಸಿಲ್ದಾರ್ ಆದಾಗಿನಿಂದ ಶುರುವಾಗಿದೆ. 1986ರಲ್ಲಿ ದೇವರ ಮೂರ್ತಿಯೂ ಅಲುಗಾಡುತ್ತಿದೆ, ಸರಿಪಡಿಸಬೇಕೇಂದು ಅರ್ಚಕರು ಮುಜೀಬ್ ಗಮನಕ್ಕೆ ತರುತ್ತಾರೆ. ಆಗ ಮುಜೀಬ್ ಅವರು ಧರ್ಮದರ್ಶಿಗಳ ಸಭೆ ಕರೆದು, ಮುಜರಾಯಿ ಇಲಾಖೆಯೊಂದಿಗೆ ನಿರಂತರ ಪತ್ರ ವ್ಯವಹಾರ ನಡೆಸಿ ಪುನರ್ ಪ್ರತಿಷ್ಟಾಪನೆಗೆ ಮುಂದಾಗುತ್ತಾರೆ. ವೈಖಾನಸ ಆಗಮದ ಪ್ರಕಾಶ ಕಳಾಕರ್ಷನೆ, ಧಾನ್ಯವಾಸ ಬಳಿಕ ಪುನರ್ ಪ್ರತಿಷ್ಠಾಪಿಸಲು ಕಿಂಚಿತ್ತು ಲೋಪವಾಗದಂತೆ ಕಾರ್ಯ ನಿರ್ವಹಿಸುತ್ತಾರೆ.

ತಹಸಿಲ್ದಾರ್ ಆಗಿದ್ದರಿಂದ ಪುನರ್ ಪ್ರತಿಷ್ಠಾಪನೆಯ ಪೂಜೆಗೆ ಮುಜೀಬ್ ಅವರು ಕೂರಬೇಕು, ಯಾಗಗಳನ್ನು ಪೂರೈಸಬೇಕೆಂದು ತಿಳಿದಾಗ ಮುಜೀಬ್ ಅವರಲ್ಲಿ ತಾನು ಕೂರಬಹುದೇ, ಧರ್ಮ ಸಿದ್ಧಾಂತದ ಅಡ್ಡಿ, ಮನಸ್ಸಿನಲ್ಲಿ ಅಷ್ಟು ತಾನು ನಿರ್ಮಲನೇ ಎಂಬ ಅವ್ಯಕ್ತ ತೊಳಲಾಟಕ್ಕೆ ಸಿಲುಕಿದೆ. ಪುನರ್ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಯನ್ನು ಪರಿಶೀಲಿಸಿ ನಿವಾಸಕ್ಕೆ ಬಂದ ವೇಳೆ ಬಿಳಿಗಿರಿರಂಗನಾಥ ಸ್ವಾಮಿಯೇ ದರ್ಶನ ನೀಡಿ “ಕಳೆದ 1000 ವರ್ಷಗಳಿಂದ ನಿನ್ನ ನಿರೀಕ್ಷೆಯಲ್ಲಿ ನಾನಿದ್ದೆ. ನಿನ್ನಲ್ಲಿ ಎಲ್ಲವೂ ಸ್ವಚ್ಚ ಹಾಗೂ ನಿರ್ಮಲ, ಕಾರ್ಯ ನನ್ನದು ಲೌಖಿಕ ನೆಪ ನಿನ್ನದು, ನಿಂತು ನಿರ್ವಹಿಸು”  ಎಂದು ಮಾತುಗಳನ್ನಾಡಿ ಶಕ್ತಿ ಅಂತರ್ಧಾನವಾಗುತ್ತದೆ. ಬೃಹದಾಕಾರದ ಶಕ್ತಿ, ಅಂದಿನ ದಿನ ನೆನೆಸಿಕೊಂಡರೆ ಇಂದಿಗೂ ರೋಮಾಂಚನವಾಗುತ್ತದೆ ಎನ್ನುತ್ತಾರೆ ಮುಜೀಬ್.

ಬಳಿಕ, ಸಾಂಗವಾಗಿ ಪುನರ್ ಪ್ರತಿಷ್ಟಾಪನೆ ಕಾರ್ಯ ಮುಗಿಯಲಿದ್ದು ಪೂಜೆಯಲ್ಲಿ ಭಾಗಿಯಾಗುತ್ತಾರೆ, ಇವರ ಹೆಸರಿನಲ್ಲೇ ಮೊದಲ ಪೂಜೆಯೂ ಆಗುತ್ತದೆ‌, ಧರ್ಮ ಜಾತಿ ಮೀರಿದ ಘಟನೆಯೊಂದು ಘಟಿಸಿ ಮುಸ್ಲಿಂ ವ್ಯಕ್ಯಿಯೊಬ್ಬರು ಬಿಳಿಗಿರಿರಂಗನ ಭಕ್ತರಾಗುತ್ತಾರೆ.

ಸಂಪ್ರೋಕ್ಷಣೆಯಲ್ಲೂ ಭಾಗಿ: ಈಗ ದೇವಾಲಯ ಜೀರ್ಣೋದ್ಧಾರಗೊಂಡು ಸಂಪ್ರೋಕ್ಷಣೆ ಕಾರ್ಯದ ಕೊನೆ ದಿನದ ಪೂಜೆಯಲ್ಲಿ ಭಾಗಿಯಾಗಿ ಭಕ್ತಿ ಮೆರೆದಿದ್ದಾರೆ ಮುಜೀಬ್.

ಹೃದಯದಲ್ಲಿ ಗೂಡು ಕಟ್ಟದಿದ್ದರೇ ಎಲ್ಲಾ ಧರ್ಮಗಳ ದೇವರು ಭಗವಂತನೇ, ಹೃದಯ ವೈಶಾಲ್ಯತೆ ಒಂದಿರಬೇಕಷ್ಟೇ, ಬಿಳಿಗಿರಿರಂಗನಾಥನ ಶಕ್ತಿ, ಯಳಂದೂರು ಜನರ ಪ್ರೀತಿ ನನ್ನಲ್ಲಿ ಅಚ್ಚೊತ್ತಿದೆ ಎಂದು ಅವರು ಭಾವುಕರಾಗುತ್ತಾರೆ. ಅಲ್ಪ ಮಾನವರಿಗಷ್ಟೇ ಜಾತಿ- ಧರ್ಮ ದೇವರಿಗೂ ಅಲ್ಲ ಹೃದಯವಂತರಿಗಲ್ಲ ಎಂಬುದಕ್ಕೆ ಬಿಳಿಗಿರಿ ಬನ ಸಾಕ್ಷಿಯಾಗಿದೆ.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]