ಮೈಸೂರು: ಮಾನವ ಬಂಧುತ್ವ ವೇದಿಕೆ – ಕರ್ನಾಟಕ ಮತ್ತು ವಿದ್ಯಾರ್ಥಿ ಬಂಧುತ್ವ ವೇದಿಕೆ ವತಿಯಿಂದ ದಿನಾಂಕ 20/11/2021ರಂದು ಮೈಸೂರಿನ ಮುಡಾ ಕಚೇರಿ ಹತ್ತಿರ ಇರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ನಲ್ಲಿ ಬೆಳಿಗ್ಗೆ 10:30ಕ್ಕೆ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶವನ್ನು ಆಯೋಜಿಸಲಾಗಿದೆ.
“ಹೊಸ ಶಿಕ್ಷಣ ನೀತಿ ಮತ್ತು ಪಠ್ಯ ತಿರುಚುವಿಕೆಯ ರಾಜಕಾರಣ” ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ, ಮಾಜಿ ಸಂಸದ ಆರ್.ಧ್ರುವನಾರಾಯಣ, ಬಿ ಎಸ್ ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಎಂ. ಮತ್ತು ಮಾನವ ಬಂಧುತ್ವ ವೇದಿಕೆ ಮೈಸೂರು ವಿಭಾಗೀಯ ಸಂಚಾಲಕಿ ಡಾ.ಲೀಲಾ ಸಂಪಿಗೆ ಭಾಗವಹಿಸಲಿದ್ದಾರೆ.