March 25, 2023 3:48 pm

ಮಾನವ ಬಂಧುತ್ವ ವೇದಿಕೆಯದು ಪ್ರಚಲಿತ ಸನ್ನಿವೇಶಗಳ ಕುರಿತ ಚಿಂತನೆ : ರಘುಮೂರ್ತಿ

ಚಿತ್ರದುರ್ಗ: ಪ್ರಸ್ತುತ ಸನ್ನಿವೇಶಗಳಲ್ಲಿ ರಾಜ್ಯ, ದೇಶ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಚಿಂತನೆ ಮಾಡುವವರು ಮಾನವ ಬಂಧುತ್ವ ವೇದಿಕೆಯವರು ಎಂದು ಶಾಸಕ ರಘುಮೂರ್ತಿ ಹೇಳಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭಧಲ್ಲಿ ಮಾತಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಆಧರಿಸಿ ಸ್ಥಾಪನೆಯಾಗಿರುವ ಈ ವೇದಿಕೆ ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ದೇಶಕ್ಕೆ ವ್ಯಾಪಿಸಲಿ ಎಂದರು.

ಸತೀಶ್ ಜಾರಕಿಹೊಳಿಯವರು ಸರಳ ವ್ಯಕ್ತಿ. ಅವರು ಜನರಿಗೆ ಒಳಿತು ಮಾಡಲು ಈ ವೇದಿಕೆಯನ್ನು ರೂಪಿಸಿದ್ದಾರೆ. ಇಲ್ಲಿ ಕೇಳಿದ ವಿಷಯಗಳನ್ನು ಎಲ್ಲರಿಗೂ ತಿಳಿಸುವ ಕೆಲಸವನ್ನು ಮಾಡಿ ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಅನಂತ್ ನಾಯಕ್, ರಾಜ್ಯ ಬಂಧುತ್ವ ಅಧಿವೇಶನವನ್ನು ಹರಿಹರದಲ್ಲಿ ಮಾಡಬೇಕಿತ್ತು. ಆದರೆ ಸ್ವಾಮೀಜಿಯವರು ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿರುವ ಸಮಯದಲ್ಲಿ ಅಲ್ಲಿ ಕಾರ್ಯಕ್ರಮ ಮಾಡುವುದು ಬೇಡ ಎಂದು ಚಿತ್ರದುರ್ಗ ಸ್ಥಳ ಬದಲಾಯಿಸಿದೆವು. ಇಲ್ಲಿ ಆಂಜನಪ್ಪ, ರಘುಮೂರ್ತಿ ಮೊದಲಾದ ಸ್ನೇಹಿತರು ಸೇರಿದಂತೆ ಎಲ್ಲರೂ ನೆರವಾಗಿದ್ದಾರೆ. ಅವರಿಗೆಲ್ಲ ಧನ್ಯವಾದಗಳು ಎಂದರು.

ಜನರನ್ನು ಮೂಢನಂಬಿಕೆಯಿಂದ ಹೊರತರಲು, ವೈಚಾರಿಕತೆಯನ್ನು ಮೂಡಿಸಲು, ಮಾನವೀಯತೆಯನ್ನು ಬೆಳೆಸಲು ಮಾನವ ಬಂಧುತ್ವ ವೇದಿಕೆಯನ್ನು ಕಟ್ಟಲಾಗಿದೆ. 30 ಜಿಲ್ಲೆಗಳಿಗೆ ವೇದಿಕೆ ವಿಸ್ತೀರ್ಣವಾಗಿದೆ. ಸ್ಮಶಾನದಲ್ಲಿ ಕಾಲ ಕಳೆಯುವ ಕೆಲಸ, ಸಾವಿತ್ರಿ ಬಾ ಫುಲೆ, ಕುವೆಂಪು, ಬಸವಣ್ಣನ ವಿಚಾರಗಳನ್ನು ಹರಡಲಾಗುತ್ತಿದೆ ಎಂದರು.
ರಾಜಕಾರಣ ನಮ್ಮ ಬದುಕನ್ನು ನಿಯಂತ್ರಿಸುತ್ತಿದ್ದರೆ, ನಾವು ರಾಜಕಾರಣವನ್ನು ನಿಯಂತ್ರಿಸಬೇಕು. ರಾಜಕೀಯವೆಂದರೆ ಪಕ್ಷ, ಝಂಡಾ ಮಾತ್ರವಲ್ಲ. ಜನ ಪರವಾದ ಆಲೋಚನೆ ಮುಖ್ಯ ಎಂದರು.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ