April 19, 2024 2:51 pm

ಮಾನವ ಬಂಧುತ್ವ ವೇದಿಕೆಯದು ಪ್ರಚಲಿತ ಸನ್ನಿವೇಶಗಳ ಕುರಿತ ಚಿಂತನೆ : ರಘುಮೂರ್ತಿ

ಚಿತ್ರದುರ್ಗ: ಪ್ರಸ್ತುತ ಸನ್ನಿವೇಶಗಳಲ್ಲಿ ರಾಜ್ಯ, ದೇಶ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಚಿಂತನೆ ಮಾಡುವವರು ಮಾನವ ಬಂಧುತ್ವ ವೇದಿಕೆಯವರು ಎಂದು ಶಾಸಕ ರಘುಮೂರ್ತಿ ಹೇಳಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭಧಲ್ಲಿ ಮಾತಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಆಧರಿಸಿ ಸ್ಥಾಪನೆಯಾಗಿರುವ ಈ ವೇದಿಕೆ ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ದೇಶಕ್ಕೆ ವ್ಯಾಪಿಸಲಿ ಎಂದರು.

ಸತೀಶ್ ಜಾರಕಿಹೊಳಿಯವರು ಸರಳ ವ್ಯಕ್ತಿ. ಅವರು ಜನರಿಗೆ ಒಳಿತು ಮಾಡಲು ಈ ವೇದಿಕೆಯನ್ನು ರೂಪಿಸಿದ್ದಾರೆ. ಇಲ್ಲಿ ಕೇಳಿದ ವಿಷಯಗಳನ್ನು ಎಲ್ಲರಿಗೂ ತಿಳಿಸುವ ಕೆಲಸವನ್ನು ಮಾಡಿ ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಅನಂತ್ ನಾಯಕ್, ರಾಜ್ಯ ಬಂಧುತ್ವ ಅಧಿವೇಶನವನ್ನು ಹರಿಹರದಲ್ಲಿ ಮಾಡಬೇಕಿತ್ತು. ಆದರೆ ಸ್ವಾಮೀಜಿಯವರು ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿರುವ ಸಮಯದಲ್ಲಿ ಅಲ್ಲಿ ಕಾರ್ಯಕ್ರಮ ಮಾಡುವುದು ಬೇಡ ಎಂದು ಚಿತ್ರದುರ್ಗ ಸ್ಥಳ ಬದಲಾಯಿಸಿದೆವು. ಇಲ್ಲಿ ಆಂಜನಪ್ಪ, ರಘುಮೂರ್ತಿ ಮೊದಲಾದ ಸ್ನೇಹಿತರು ಸೇರಿದಂತೆ ಎಲ್ಲರೂ ನೆರವಾಗಿದ್ದಾರೆ. ಅವರಿಗೆಲ್ಲ ಧನ್ಯವಾದಗಳು ಎಂದರು.

ಜನರನ್ನು ಮೂಢನಂಬಿಕೆಯಿಂದ ಹೊರತರಲು, ವೈಚಾರಿಕತೆಯನ್ನು ಮೂಡಿಸಲು, ಮಾನವೀಯತೆಯನ್ನು ಬೆಳೆಸಲು ಮಾನವ ಬಂಧುತ್ವ ವೇದಿಕೆಯನ್ನು ಕಟ್ಟಲಾಗಿದೆ. 30 ಜಿಲ್ಲೆಗಳಿಗೆ ವೇದಿಕೆ ವಿಸ್ತೀರ್ಣವಾಗಿದೆ. ಸ್ಮಶಾನದಲ್ಲಿ ಕಾಲ ಕಳೆಯುವ ಕೆಲಸ, ಸಾವಿತ್ರಿ ಬಾ ಫುಲೆ, ಕುವೆಂಪು, ಬಸವಣ್ಣನ ವಿಚಾರಗಳನ್ನು ಹರಡಲಾಗುತ್ತಿದೆ ಎಂದರು.
ರಾಜಕಾರಣ ನಮ್ಮ ಬದುಕನ್ನು ನಿಯಂತ್ರಿಸುತ್ತಿದ್ದರೆ, ನಾವು ರಾಜಕಾರಣವನ್ನು ನಿಯಂತ್ರಿಸಬೇಕು. ರಾಜಕೀಯವೆಂದರೆ ಪಕ್ಷ, ಝಂಡಾ ಮಾತ್ರವಲ್ಲ. ಜನ ಪರವಾದ ಆಲೋಚನೆ ಮುಖ್ಯ ಎಂದರು.

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ