October 1, 2023 7:03 am

ಮಾನವ ಬಂಧುತ್ವ ವೇದಿಕೆಯದು ಪ್ರಚಲಿತ ಸನ್ನಿವೇಶಗಳ ಕುರಿತ ಚಿಂತನೆ : ರಘುಮೂರ್ತಿ

ಚಿತ್ರದುರ್ಗ: ಪ್ರಸ್ತುತ ಸನ್ನಿವೇಶಗಳಲ್ಲಿ ರಾಜ್ಯ, ದೇಶ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಚಿಂತನೆ ಮಾಡುವವರು ಮಾನವ ಬಂಧುತ್ವ ವೇದಿಕೆಯವರು ಎಂದು ಶಾಸಕ ರಘುಮೂರ್ತಿ ಹೇಳಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭಧಲ್ಲಿ ಮಾತಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಆಧರಿಸಿ ಸ್ಥಾಪನೆಯಾಗಿರುವ ಈ ವೇದಿಕೆ ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ದೇಶಕ್ಕೆ ವ್ಯಾಪಿಸಲಿ ಎಂದರು.

ಸತೀಶ್ ಜಾರಕಿಹೊಳಿಯವರು ಸರಳ ವ್ಯಕ್ತಿ. ಅವರು ಜನರಿಗೆ ಒಳಿತು ಮಾಡಲು ಈ ವೇದಿಕೆಯನ್ನು ರೂಪಿಸಿದ್ದಾರೆ. ಇಲ್ಲಿ ಕೇಳಿದ ವಿಷಯಗಳನ್ನು ಎಲ್ಲರಿಗೂ ತಿಳಿಸುವ ಕೆಲಸವನ್ನು ಮಾಡಿ ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಅನಂತ್ ನಾಯಕ್, ರಾಜ್ಯ ಬಂಧುತ್ವ ಅಧಿವೇಶನವನ್ನು ಹರಿಹರದಲ್ಲಿ ಮಾಡಬೇಕಿತ್ತು. ಆದರೆ ಸ್ವಾಮೀಜಿಯವರು ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿರುವ ಸಮಯದಲ್ಲಿ ಅಲ್ಲಿ ಕಾರ್ಯಕ್ರಮ ಮಾಡುವುದು ಬೇಡ ಎಂದು ಚಿತ್ರದುರ್ಗ ಸ್ಥಳ ಬದಲಾಯಿಸಿದೆವು. ಇಲ್ಲಿ ಆಂಜನಪ್ಪ, ರಘುಮೂರ್ತಿ ಮೊದಲಾದ ಸ್ನೇಹಿತರು ಸೇರಿದಂತೆ ಎಲ್ಲರೂ ನೆರವಾಗಿದ್ದಾರೆ. ಅವರಿಗೆಲ್ಲ ಧನ್ಯವಾದಗಳು ಎಂದರು.

ಜನರನ್ನು ಮೂಢನಂಬಿಕೆಯಿಂದ ಹೊರತರಲು, ವೈಚಾರಿಕತೆಯನ್ನು ಮೂಡಿಸಲು, ಮಾನವೀಯತೆಯನ್ನು ಬೆಳೆಸಲು ಮಾನವ ಬಂಧುತ್ವ ವೇದಿಕೆಯನ್ನು ಕಟ್ಟಲಾಗಿದೆ. 30 ಜಿಲ್ಲೆಗಳಿಗೆ ವೇದಿಕೆ ವಿಸ್ತೀರ್ಣವಾಗಿದೆ. ಸ್ಮಶಾನದಲ್ಲಿ ಕಾಲ ಕಳೆಯುವ ಕೆಲಸ, ಸಾವಿತ್ರಿ ಬಾ ಫುಲೆ, ಕುವೆಂಪು, ಬಸವಣ್ಣನ ವಿಚಾರಗಳನ್ನು ಹರಡಲಾಗುತ್ತಿದೆ ಎಂದರು.
ರಾಜಕಾರಣ ನಮ್ಮ ಬದುಕನ್ನು ನಿಯಂತ್ರಿಸುತ್ತಿದ್ದರೆ, ನಾವು ರಾಜಕಾರಣವನ್ನು ನಿಯಂತ್ರಿಸಬೇಕು. ರಾಜಕೀಯವೆಂದರೆ ಪಕ್ಷ, ಝಂಡಾ ಮಾತ್ರವಲ್ಲ. ಜನ ಪರವಾದ ಆಲೋಚನೆ ಮುಖ್ಯ ಎಂದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು