October 1, 2023 8:21 am

ರಾಜರತ್ನ ಅವರದು 30 ವರ್ಷಗಳಲ್ಲಿ ನನ್ನನ್ನು ಪ್ರಭಾವಿಸಿದ ಭಾಷಣ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಳೆದ 30 ವರ್ಷಗಳಲ್ಲಿ ರಾಜರತ್ನ ಅಂಬೇಡ್ಕರ್ ಅವರದು ನನ್ನನ್ನು ಪ್ರಭಾವಿಸಿದ ಭಾಷಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.  

ಚಿಕ್ಕೋಡಿಯ ಇಂದಿರಾ ನಗರದಲ್ಲಿ ನಡೆದ ಬುದ್ಧನೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತಾಡಿದ ಅವರು, ಇಷ್ಟು ದಿನಗಳ ಕಾಲ ದೇವರನ್ನು ಹೊರತುಪಡಿಸಿ ಮಾತಾಡುವ ನಮಗೆ ಜೊತೆಗಾರರು ಇರಲಿಲ್ಲವೆನಿಸುತ್ತಿತ್ತು. ನಿಜಗುಣಾನಂದ ಶ್ರೀಗಳು ಮತ್ತು ನಾನು ಈ ಕುರಿತು ಮಾತಾಡುತ್ತಿದ್ದೆವು. ರಾಜರತ್ನ ಅವರ ಮಾತುಗಳನ್ನು ಕೇಳಿದ ನಂತರ ಇದೀಗ ನಮ್ಮ ಸಂಖ್ಯೆ ಹೆಚ್ಚಾಗಿದೆ ಎಂಬ ಭಾವ ಮೂಡಿದೆ ಎಂದರು.  

ಬುದ್ಧ, ಬಸವ, ಅಂಬೇಡ್ಕರ್ ಅವರ ದಾರಿಯಲ್ಲಿ ಮಾನವ ಬಂಧುತ್ವ ವೇದಿಕೆಯನ್ನು ಜನರ ಬಳಿ ಕೊಂಡೊಯ್ದಿದ್ದೇವೆ. ಇದರ ಮೂಲಕ ನಾವು ಮೂಢನಂಬಿಕೆ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನಮ್ಮ ಈ ಕೆಲಸಕ್ಕೆ ನೀವೆಲ್ಲರೂ ಕೈಜೋಡಿಸಬೇಕು ಎಂದು ನೆರೆದಿದ್ದ ಸುಮಾರು 2,000 ಜನರಲ್ಲಿ ಅವರು ಮನವಿಮಾಡಿಕೊಂಡರು.  

ಸಮಾರಂಭದ ಕ್ಷಣಗಳು

ಸಾಮಾಜಿಕ ಬದಲಾವಣೆ ಆಗುವವರೆಗೆ ಹೋರಾಟವನ್ನು ಮುಂದುವರೆಸುತ್ತೇವೆ. ತಳಸಮುದಾಯದಲ್ಲಿ ಸಾಮಾಜಿಕ ಜಾಗೃತಿಯನ್ನು ಮೂಡಿಸಿ ಉನ್ನತ ಶಿಕ್ಷಣ ನೀಡುವ ಮೂಲಕ ಆರ್ಥಿಕವಾಗಿ ಸಬಲೀಕರಣಗೊಳಿಸಿದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಚಟುವಟಿಕೆಗಳನ್ನು ರೂಪಿಸಿ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದರು.  

ಜನರು ದುಡಿಮೆಯ ಹಣವನ್ನು ಮೂಢನಂಬಿಕೆಗಳಿಗೆ ಖರ್ಚುಮಾಡದೆ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಕುಟುಂಬದ ಏಳಿಗೆಗೆ ಸದ್ಬಳಕೆ ಮಾಡಿಕೊಳ್ಳಲು ಜಾಗೃತರಾಗುವಂತೆ ಮನವಿ ಮಾಡಿದರು.  

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತಾಡಿದ ಡಾ.ಬಿ.ಆರ್.ಅಂಬೇಡ್ಕರ್ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್, ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರ ಹೊಂದಲು ಮಹತ್ವದ ಕಾರಣವಿತ್ತು. ಅವರು ಜೈನ, ಸಿಖ್, ಮುಸ್ಲಿಂ, ಕ್ರಿಶ್ಚಿಯನ್ ಮೊದಲಾದ ಧರ್ಮಗಳನ್ನು ಬಿಟ್ಟು ಬೌದ್ಧ ಧರ್ಮಕ್ಕೆ ಮತಾಂತರ ಹೊಂದಿದರು. ಏಕೆಂದರೆ, ಬೌದ್ಧ ಧರ್ಮದಲ್ಲಿ ಜಾತಿ ಇಲ್ಲ. ಇಲ್ಲಿ ಎಲ್ಲರನ್ನೂ ಸಮಾನತೆಯಿಂದ ಕಾಣಲಾಗುತ್ತದೆ. ಇಂತಹ ಸಮಾನತೆ ಬೇರೆ ಧರ್ಮಗಳಲ್ಲಿ ಇಲ್ಲ ಎಂದರು.  

ಸಮಾರಂಭದಲ್ಲಿ ನೆರೆದ ಅಪಾರ ಜನಸ್ತೋಮ

ನಾವೆಲ್ಲ ಮೂಲತಃ ನಾಗ ಕುಲಕ್ಕೆ ಸೇರಿದವರು. ಒಂದು ಕಾಲಕ್ಕೆ ಈ ದೇಶವನ್ನು ಆಳಿದವರು. ಆದರೆ, ನಾವು ಭಿಕ್ಷುಕರ ರೀತಿ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇದೆ. ಇದಕ್ಕೆ ಕಾರಣ ಮೀಸಲಾತಿ. ಈಗಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲ ಸರ್ಕಾರಿ ಸಂಸ್ಥೆಗಳನ್ನೂ ಖಾಸಗೀಕರಿಸುತ್ತಿದೆ. ಮುಂದೆ ನಿಮಗೆ ಮೀಸಲಾತಿ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು.   ಘನತೆಯಿಂದ ಬದುಕಲು ನೀವೆಲ್ಲ ಮತಾಂತರ ಹೊಂದಿ. ಮತಾಂತರ ಹೊಂದಿದರೆ ನಿಮಗೆ ಯಾವುದೇ ರೀತಿಯ ನಷ್ಟವಾಗುವುದಿಲ್ಲ. ಇದಕ್ಕೆ ಅಂಬೇಡ್ಕರ್ ಅವರ ಸಂವಿಧಾನ ಮಾನ್ಯತೆ ನೀಡಿದೆ. ಮತಾಂತರದಿಂದ ನಿಮಗೆ ನಷ್ಟವಾಗುವುದಿಲ್ಲ. ಬದಲಾಗಿ ಜಾಗತಿಕ ಮಟ್ಟಕ್ಕೆ ನಿಮಗೆ ಏರುವ ಅವಕಾಶವಿದೆ. ಏಕೆಂದರೆ, ದಲಿತರ ವಿವಿಧ ಜಾತಿಗಳು ದೇಶದಲ್ಲಿವೆ. ಬೌದ್ಧ ಎಂದು ನೀವು ಧರ್ಮದ ಕಾಲಂನಲ್ಲಿ ನಮೂದಿಸಿದರೆ ಜಾತಿ ನಮೂದಿಸುವುದು ಅಗತ್ಯವಿಲ್ಲ. ದೇಶದಲ್ಲಿ ಧರ್ಮ ಬೌದ್ಧ, ಜಾತಿ ಮಹರ್ ಎಂದು ನಮೂದಿಸಲಾಗುತ್ತದೆ. ಹೊರದೇಶದಲ್ಲಿ ಬೌದ್ಧ ಎಂದು ಮಾತ್ರ ನಮೂದಿಸಲಾಗುತ್ತದೆ ಎಂದರು.  

ಜೊತೆಗೆ, ನಾಗಪುರದಲ್ಲಿ 60 ಎಕರೆ ವಿಸ್ತೀರ್ಣದಲ್ಲಿ ಬೌದ್ಧ ವಿಶ್ವವಿದ್ಯಾಲಯ ಕಟ್ಟಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಗಳನ್ನು ತೆರೆಯಲಾಗುವುದು ಎಂದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು