April 25, 2024 2:39 am

ಹಿಂದು ಎಂದರೆ ಮೋಕ್ಷಕ್ಕೆ ಹೋಗುವ ದಾರಿ, ಹಿಂದುತ್ವ ಎಂದರೆ ಸಂಸತ್ತಿಗೆ ಹೋಗುವದಾರಿ: ಎಸ್.ಬಾಲನ್

ಚಿತ್ರದುರ್ಗ: ಮನುಷ್ಯನ ಬೆವರು ಒಣಗುವ ಒಳಗೆ ಕೂಲಿ ಕೊಡಿ ಎಂದು ಮುಸ್ಲಿಂ ಧರ್ಮ ಹೇಳುತ್ತದೆ, ಹಿಂದೂ ಧರ್ಮ ಅಸಮಾನತೆಯನ್ನು ಹೇಳುತ್ತದೆ, ಕೆಲಸ ಮಾಡಿ ಕೂಲಿ ಕೇಳಬೇಡಿ ಎನ್ನುತ್ತದೆ ಎಂದು ಹಿರಿಯ ನ್ಯಾಯವಾದಿ ಎಸ್.ಬಾಲನ್ ಹೇಳಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದಲ್ಲಿ ರೈತ, ಕಾರ್ಮಿಕರು ಮತ್ತು ಸರ್ಕಾರಿ ನೌಕರರ ಸವಾಲುಗಳು ವಿಷಯದ ಕುರಿತು ಮಾತನಾಡಿದ ಅವರು, ಕಾರ್ಮಿಕ ಕಾಯ್ದೆಗಳ ಪ್ರಕಾರ ಕೆಲಸ ಮಾಡಿ ನಿವೃತ್ತಿಯಾಗಬೇಕು, ಸೇವಾ ಭದ್ರತೆ, ವೇತನ ಭದ್ರತೆ, ಸಾಮಾಜಿಕ ಭದ್ರತೆಗಳನ್ನು ಒದಗಿಸಿ, ನಿವೃತ್ತಿಯ ನಂತರ ನಿವೃತ್ತಿ ವೇತನ ಕೊಡುತ್ತದೆ ಎಂದರು.

ಕಾರ್ಮಿಕ ಕಾಯ್ದೆಗಳನ್ನು ಯಾರೂ ಬಿಟ್ಟಿಯಾಗಿ ಕೊಟ್ಟಿಲ್ಲ. ಕೆಲಸ ಕಳೆದುಕೊಂಡು, ಸೆರೆಮನೆಗೆ ಹೋಗಿ ಪಡೆದವು. ಇವುಗಳ ಪರವಾಗಿ ಕಮ್ಯುನಿಸ್ಟರು, ಪೆರಿಯಾರ್ ಅವರು, ಅಂಬೇಡ್ಕರ್ ಅವರು ಹೋರಾಡಿದರು. ಕೇಸರಿ ಬಣ್ಣದವರಿಗೂ ಇವಕ್ಕೂ ಸಂಬಂಧವಿಲ್ಲ ಎಂದರು.

ಹಿಂದು ಎಂದರೆ ಮೋಕ್ಷಕ್ಕೆ ಹೋಗುವ ದಾರಿ, ಹಿಂದುತ್ವ ಎಂದರೆ ಸಂಸತ್ತಿಗೆ ಹೋಗುವದಾರಿ. ಆರ್ .ಎಸ್.ಎಸ್ ನವರು ಕಾರ್ಮಿಕರ ಪರವಾಗಿ ಎಂದೂ ಹೋರಾಡಿಲ್ಲ. ಸ್ವಾತಂತ್ರ್ಯ ಬಂದ ನಂತರ ಕನಿಷ್ಠ ವೇತನ ಸೇರಿದಂತೆ ಇತರ ಸವಲತ್ತುಗಳನ್ನು ಕೊಡಲಾಗಿದೆ. ನೆಹರು ಅವರ ಕಾಲದಲ್ಲಿ, ಇಂದಿರಾ ಗಾಂಧಿ ಕಾಲದಲ್ಲಿ ಉದ್ಯೋಗ ಸೃಷ್ಟಿಯಾಯಿತು. ಗುತ್ತಿಗೆ ನೌಕರರು ಇರಬಾರದು ಎಂಬ ಕಾಯ್ದೆಯನ್ನು ಇಂದಿರಾ ಗಾಂಧಿ ಜಾರಿಗೆ ತಂದರು ಎಂದರು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾರ್ಮಿಕರ ಪರವಾದ ಕಾನೂನುಗಳ ವಿರುದ್ಧ ಸಂಘಪರಿವಾರ ಇತ್ತು. ಇಡೀ ದೇಶದ ಕಾರ್ಮಿಕರ ವಿರುದ್ಧವಿದ್ದದ್ದು ಮೊರಾರ್ಜಿ ದೇಸಾಯಿ. 1992ರಲ್ಲಿ ಕಾರ್ಮಿಕರ ಹಕ್ಕುಗಳು ಬದಲಾದವು. ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲಾಯಿತು, ಜೊತೆಗೆ ಕಾರ್ಮಿಕ ಪರವಾದ ಕಾನೂನುಗಳನ್ನು ಧ್ವಂಸ ಮಾಡಿದರು. ಅಟಲ್ ಬಿಹಾರಿ ವಾಜಪೇಯಿ ಎಲ್ಲ ಕಾರ್ಮಿಕರಿಗೆ ಮಣ್ಣು ಹಾಕಿದರು. ಗುತ್ತಿಗೆ ಪದ್ಧತಿಯಲ್ಲಿ ಕಾರ್ಮಿಕರನ್ನು ತೆಗೆದುಕೊಳ್ಳುವ ಕೆಲಸಕ್ಕೆ ವಾಜಪೇಯಿ ಸರ್ಕಾರ ಮಾಡಿತು ಎಂದರು.

ರಾಜ್ಯದಲ್ಲಿ ಬಿಜೆಪಿ ಹಣ ಕರ್ಚು ಮಾಡಿ ಅಧಿಕಾರಕ್ಕೆ ಬಂದಿದೆ. ಬಂದ ನಂತರ ಕಾರ್ಮಿಕ ಕಾಯ್ದೆಗಳನ್ನು ಧ್ವಂಸ ಮಾಡಿದೆ. ಏರ್ ಪೋರ್ಟ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸ್ವಚ್ಛತೆಯ ಕೆಲಸ ಮಾಡುವವರು ದಲಿತರು ಮತ್ತು ಪಂಚಮರು. ಇವರೆಲ್ಲ ಹಿಂದೂಗಳು. ಹಿಂದೂ ನಾವೆಲ್ಲ ಒಂದು ಎಂದು ಹೇಳುವ ಸಂಘ ಪರಿವಾರ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ ಕೊಡಬೇಕು, ಕಾಯಂ ಮಾಡಬೇಕು ಎಂದು ಪ್ರತಿಭಟನೆ ನಡೆಸಿಲ್ಲ ಎಂದರು.

ದೇವಸ್ಥಾನಗಳನ್ನು ನಮಗೆ ಕೊಡಿ, ಟಾಯ್ಲೆಟ್ ಗಳನ್ನು ವಿನಿಮಯ ಮಾಡಿಕೊಳ್ಳಲು ಹಿಂದೂ ನಾವೆಲ್ಲ ಒಂದು ಎನ್ನುವವರು ಒಪ್ಪುವರೆ, ಬೊಮ್ಮಾಯಿ, ಯಡಿಯೂರಪ್ಪ ಒಪ್ಪುವರೆ. 5-7 ಸಾವಿರ ವೇತನದಲ್ಲಿ ಊಟ ಮಾಡಲು ಸಾಧ್ಯವೇ? ಎಂದರು.

ಪಂಚಮರಿಗೆ, ಶೂದ್ರರಿಗೆ ಮಟನ್ ಬೇಕು. ಮುನ್ನೂರು ರೂಪಾಯಿಗೆ ಒಂದು ಕೆಜಿ ಮಟನ್ ಕೊಡಿ. ಕೊಡುವ ಸಂಬಳದಲ್ಲಿ ನೀರು ಕುಡಿಯಲು, ಊಟ ಮಾಡಲು ಸಾಧ್ಯವಿಲ್ಲ. ಹಿಂದೂ ಎನ್ನುವವರು ಏನು ಮಾಡಿದ್ದಾರೆ? ಟಾಯ್ಲೆಟ್ ಸ್ವಚ್ಛಗೊಳಿಸುವವರಿಗೆ ಬೋನಸ್ ಕೊಟ್ಟಿದ್ದಾರಾ ಎಂದರು.

ಶೂದ್ರರು ಎಲ್ಲ ಕೆಲಸ ಮಾಡುತ್ತಾರೆ, ಬರಿಹೊಟ್ಟೆಯಲ್ಲಿ ಕೆಲಸ ಮಾಡುತ್ತಾರೆ. ಸತ್ತವರಿಗೆ ಪರಿಹಾರ ಕೊಟ್ಟಿದ್ದಾರಾ? ಹೆಸರಿನಲ್ಲೇ ಶ್ರೇಣೀಕರಣ ಇದೆ. 6 ಲಕ್ಷ ಹಳ್ಳಿಗಳಲ್ಲಿ 6 ಲಕ್ಷ ಕೇರಿಗಳಿವೆ. ಇವುಗಳನ್ನು ಸೃಷ್ಟಿ ಮಾಡಿದ್ದು, ಮುಸ್ಲಿಮರ, ಕ್ರಿಶ್ಚಿಯನ್ನರ, ಜೈನರ, ಬೌದ್ಧರಾ? ಬೆಂಗಳೂರಿನಲ್ಲಿ ಸೃಷ್ಟಿಯಾಗಿರುವ ಮೋರಿಗಳನ್ನು ಸೃಷ್ಟಿಸಿದವರು ಯಾರು? ಇವುಗಳ ವಿರುದ್ಧ ನೀವು ಹೋರಾಡಿದ್ದೀರಾ ಎಂದರು.

ಸ್ವಾತಂತ್ರ್ಯ ಬಂದ ಮೇಲೆ ಹೇಗೋ ಜನ ಬದುಕಿದ್ದರು. ಈಗ ಏನೂ ಇಲ್ಲದಂತಹ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ಕನಿಷ್ಠ ಸೌಲಭ್ಯಗಳಿಲ್ಲದೆ ದಲಿತರು ಬದುಕುತ್ತಿದ್ದಾರೆ. ಇವರು ಮುಸ್ಲಿಮರ, ಕ್ರಿಶ್ಚಿಯನ್ನರಾ? ಕಾರ್ಮಿಕರನ್ನು ಬೀದಿಗೆ ತಂದದ್ದು ಮೋದಿ ಸರ್ಕಾರ. ಇದನ್ನು ಯಾವ ಮಾಧ್ಯಮಗಳೂ ಹೇಳುವುದಿಲ್ಲ ಎಂದರು.

ದಲಿತರು, ಶೂದ್ರರು ಯಾವುದೇ ಹಕ್ಕು, ಸೌಲಭ್ಯ ಇಲ್ಲದಂತೆ ಖಾಸಗೀಕರಣ ಮಾಡಿ ಧ್ವಂಸ ಮಾಡಲಾಗಿದೆ. ಶೂದ್ರರು, ದಲಿತರು ಕಟ್ಟಿದ ರೈಲ್ವೇಯನ್ನು ಖಾಸಗೀಕರಿಸಿ ಮೀಸಲಾತಿ ಇಲ್ಲದಂತೆ ಮಾಡಲಾಗಿದೆ. ಕಾನೂನುಗಳನ್ನು ತಿದ್ದುಪಡಿ, ರದ್ದುಗೊಳಿಸಿ ಶೂದ್ರರು, ದಲಿತರನ್ನು ಬೀದಿಗೆ ತಳ್ಳುವುದಕ್ಕೆ ಹಿಂದುತ್ವ ಎನ್ನಲಾಗುತ್ತದೆ. ಹಿಂದುತ್ವ ಎಂದರೆ ಅತ್ಯಾಚಾರ, ಭ್ರಷ್ಟಾಚಾರ ಎಂದರು.

ಯುಎಪಿಎ ಕಾಯ್ದೆ ಕಾರ್ಮಿಕರು, ದಲಿತರು, ಶೂದ್ರರು, ಹೋರಾಟಗಾರರ ಮೇಲೆ ದಾಖಲಿಸಲಾಗುತ್ತದೆ. ಯಾರನ್ನಾದರೂ ಈ ಕಾಯ್ದೆಯಡಿ ಬಂಧಿಸಬಹುದು. ಇಂತಹ ಕಾಯ್ದೆಗಳನ್ನು ರೂಪಿಸಲಾಗುತ್ತಿದೆ. 18ನೇ ಶತಮಾನದಲ್ಲಿ ಫ್ರೆಂಚ್ ಕ್ರಾಂತಿಯಾಯಿತು. ನಂತರ ಮಾರ್ಕ್ಸ್ ಇಡೀ ಪ್ರಪಂಚವನ್ನು ಸೃಷ್ಟಿ ಮಾಡಿದವರು ಕಾರ್ಮಿಕರು ಎನ್ನುತ್ತಾರೆ. ಈ ಹಿನ್ನೆಲೆಯಲ್ಲಿ ಲೆನಿನ್ ನೇತೃತ್ವದಲ್ಲಿ ಕ್ರಾಂತಿಯಾಯಿತು. ಕಾರ್ಮಿಕರು ಅಧಿಕಾರಕ್ಕೆ ಬರುತ್ತಾರೆ. ಇದರ ಕಾರಣದಿಂದ ಪ್ರಪಂಚದಲ್ಲಿ ಉದಾರವಾದ ಆರಂಭವಾಗುತ್ತದೆ ಎಂದರು.

ದೇಶವನ್ನು ಬ್ರಾಹ್ಮಣರು, ಬನಿಯಾಗಳಲ್ಲ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಆರ್.ಎಸ್.ಎಸ್.ನವರು ಬ್ರಿಟಿಷರ ಗುಲಾಮರಾಗಿದ್ದರು. ಕೇಸರಿಕರಣ ನಿರ್ಮೂಲನೆಯಾಗಬೇಕು ಎಂದರು.

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ