December 3, 2023 5:27 am

ಕಾಲಕಾಲಕ್ಕೆ ಚುನಾವಣೆ ನಡೆಸುವುದು ಭಾರತೀಯ ಸಂವಿಧಾನದ ಮೂಲತತ್ವ: ನ್ಯಾ.ನಾಗಮೋಹನ್ ದಾಸ್

ಬೆಂಗಳೂರು: ಕಾಲಕಾಲಕ್ಕೆ ಚುನಾವಣೆ ನಡೆಸುವುದು ಭಾರತೀಯ ಸಂವಿಧಾನದ ಮೂಲತತ್ವ ಎಂದು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಹೇಳಿದರು.

ಮಾನವ ಬಂಧುತ್ವ ವೇದಿಕೆ ವತಿಯಿಂದ ಬೆಂಗಳೂರಿನ ಶಾಸಕರ ಭವನದಲ್ಲಿ ಆಯೋಜಿಸಲಾಗಿದ್ದ, ಒಬಿಸಿ ಮೀಸಲಾತಿ ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು: ಸವಾಲುಗಳು – ಸಾಧ್ಯತೆಗಳು ವಿಷಯದ ಕುರಿತು ಮಾತಾಡಿದ ಅವರು,  ಕಾಲಕಾಲಕ್ಕೆ ಚುನಾವಣೆ ನಡೆಸುವುದು ಭಾರತೀಯ ಸಂವಿಧಾನದ ಮೂಲತತ್ವ ಆಗಿರುವುದರಿಂದ ಇಂದಿನ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅವಧಿ ಮುಗಿದಿರುವ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ಚುನಾವಣೆ ನಡೆಸಬೇಕು. ಅದರಲ್ಲಿ ಭಿನ್ನಾಭಿಪ್ರಾಯಗಳೇ ಇಲ್ಲ ಎಂದರು.

ಮೀಸಲಾತಿ ನಿಗದಿಯಾಗಿಲ್ಲ, ಬರ ಬಂದಿದೆ, ನೆರೆ ಬಂದಿದೆ ಎಂಬ ಕಾರಣಕ್ಕೆ  ಚುನಾವಣೆಗಳನ್ನು ಮುಂದೂಡಬಾರದು. ಕಾಲಕಾಲಕ್ಕೆ ಚುನಾವಣೆಗಳನ್ನು ಕಡ್ಡಾಯವಾಗಿ ನಡೆಸುವುದು ಸಾಂವಿಧಾನಿಕ ಜವಾಬ್ದಾರಿ. ಆ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನಿರ್ವಹಿಸಲೇಬೇಕು. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಚುನಾವಣೆಗಳನ್ನು ನಡೆಸಬೇಕು ಎಂದರು.

ಚುನಾವಣೆ ನಡೆಸಲು ಸರ್ವೋಚ್ಛ ನ್ಯಾಯಾಲಯಗಳ ಮೂರು ತೀರ್ಪುಗಳು ಅಡ್ಡಬರುತ್ತಿವೆಯಲ್ಲ ಎಂಬ ಮಾತಿದೆ. ಈ ಮೂರು ತೀರ್ಪುಗಳಿಗೆ ನಾವು ಉತ್ತರವನ್ನು ಕಂಡುಕೊಳ್ಳಬೇಕು. ವಾರದ ಹಿಂದೆ ಮಧ್ಯಪ್ರದೇಶ ಸರ್ಕಾರ ರಚಿಸಿರುವ 1 ವರದಿಯನ್ನು ಕೊಟ್ಟಿದೆ. ಆ ವರದಿಯ ಆಧಾರದ ಮೇಲೆ ರಾಜಕೀಯವಾಗಿ ಹಿಂದುಳಿದವರು ಯಾರು ಎಂಬುದರ ಆಧಾರದ ಮೇಲೆ ಮೀಸಲಾತಿಯ ಪ್ರಮಾಣವನ್ನು ತೀರ್ಮಾನಿಸಲಾಗಿದೆ. ಇದನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದರು.

ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶವನ್ನು ತಿದ್ದುಪಡಿ ಮಾಡಿ ಮಧ್ಯಪ್ರದೇಶದಲ್ಲಿ ಇದರ ಆಧಾರದಲ್ಲಿ ಚುನಾವಣೆಯನ್ನು ನಡೆಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಆದ್ದರಿಂದ ಈಗ ನಮಗೆ ಒಂದು ದಾರಿ ಮುಕ್ತವಾಗಿದೆ. ನಮ್ಮ ರಾಜ್ಯ ಸರ್ಕಾರ ಕೂಡ ಒಂದು ಆಯೋಗ ರಚಿಸಿ, ಮಾಹಿತಿ ಪಡೆದು, ಕೂಡಲೇ ಮೀಸಲಾತಿಯನ್ನು ನಿರ್ಧರಿಸಿ, ಅದನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವುದರಿಂದ ತಕ್ಷಣ ಚುನಾವಣೆಗಳನ್ನು ನಡೆಸಲು ಅವಕಾಶವಿದೆ. ಈ ಪ್ರಯತ್ನವನ್ನು ಮಾಡಬೇಕು ಎಂದರು.

ಕರ್ನಾಟದಲ್ಲಿ ಹಿಂದುಳಿದ ವರ್ಗಗಳ ಆಯೋಗ ಕಾಂತರಾಜ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಎಲ್ಲ ಜಾತಿಗಳ ಸಮೀಕ್ಷೆ ನಡೆದಿದೆ. ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆದಿದೆ. ಆ ವರದಿ ಸಿದ್ಧವಾಗಿದೆ. ಕಾರಣಾಂತರಗಳಿಂದ ನಮ್ಮ ಸರ್ಕಾರಗಳು ಅದನ್ನು ಸ್ವೀಕರಿಸುತ್ತಿಲ್ಲ. ತಕ್ಷಣ ಈ ಸಮೀಕ್ಷಾ ವರದಿಯನ್ನು ಪಡೆಯಬೇಕು. ಅದನ್ನು ಚರ್ಚೆಗೆ ಇಡಬೇಕು. ಅದರಲ್ಲಿ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ಇದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಬೇಕು. ಸಾಧ್ಯವಿದೆ ಎಂದರೆ ಅದರ ಆಧಾರದಲ್ಲಿ ರಾಜ್ಯದಲ್ಲಿ ರಾಜಕೀಯವಾಗಿ ಹಿಂದುಳಿದಿರುವ ಜಾತಿಗಳು ಯಾವುವು, ಯಾವ ಜಾತಿಗಳನ್ನು ಎಲ್ಲಿ ಸೇರಿಸಬೇಕು ಎಂದು ವರ್ಗೀಕರಿಸಬಹುದು. ಅದರ ಆಧಾರದಲ್ಲಿ ಯಾವ ಪ್ರವರ್ಗಕ್ಕೆ ಎಷ್ಟು ಮೀಸಲಾತಿಯನ್ನು ಕೊಡಬಹುದು ಎಂದು ನಿರ್ಧರಿಸಬಹುದು. ಈ ಕೆಲಸ ತುರ್ತಾಗಿ ನಡೆಯಬೇಕು ಎಂದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು