ಹೊತ್ತಿ ಉರಿಯುವ ಸಂಗತಿಗಳ ಕುರಿತು ಚರ್ಚೆಯಾಗಿದೆ: ಎಸ್.ಜಿ.ಸಿದ್ದರಾಮಯ್ಯ

ಚಿತ್ರದುರ್ಗ: ರಾಜ್ಯ ಬಂಧುತ್ವ ಅಧಿವೇಶನದಲ್ಲಿ ಚರ್ಚೆಯಾಗಿರುವ ವಿಷಯಗಳು ಹೊತ್ತಿ ಉರಿಯುತ್ತಿರುವಂತವು. ನಮ್ಮ ಭವಿಷ್ಯದ ಜನಾಂಗಕ್ಕಾಗಿ ಅಗತ್ಯವಾದ ಚರ್ಚೆಗಳು ಇಲ್ಲಿ ನಡೆದಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭಧಲ್ಲಿ ಮಾತಾಡಿದ ಅವರು, ಭಾಷೆ ಇವತ್ತು ಪೊಳ್ಳಾಗಿದೆ. ಸುಳ್ಳು ಹೇಳುವ ಭಾಷೆ ಶಕ್ತಿಯನ್ನು ಕಳೆದುಕೊಳ್ಳುತ್ತದೆ. ಭಾಷೆ ಭ್ರಷ್ಟಗೊಂಡಿದೆ. ಇಲ್ಲಿ ಹೊಸ ಚೈತನ್ಯ ಕೊಡಬೇಕು ಎಂದರು.

ಸುಳ್ಳನ್ನು ಸತ್ಯವೆಂದು ಭ್ರಮಿಸಲಾಗುತ್ತಿದೆ. ಚರಿತ್ರೆಯನ್ನು ತಿರುಚಲಾಗುತ್ತಿದೆ. ಇದರಿಂದ ಸುಳ್ಳನ್ನೇ ಸತ್ಯವೆಂದು ಭ್ರಮಿಸಿ ಇಂದು ದೇಶ ದ್ವೇಷವಾಗಿ ಬದಲಾಗುತ್ತಿದೆ. ನಮ್ಮ ಮನಸು ಮಲಿನಗೊಂಡಿದೆ. ನಮ್ಮ ಮಾನಸಿಕ ಕೊಳಚೆ ಬಾಹ್ಯ ಕೊಳಚೆಗಿಂತ ಅಪಾಯಕಾರಿ ಎಂದು ವಿವೇಕಾನಂದರು ಹೇಳುತ್ತಾರೆ. ಹೆಣ್ಣುಮಕ್ಕಳನ್ನು ಹೀನಾಯವಾಗಿ ಕಂಡದ್ದರಿಂದ ಕೇರಳವನ್ನು ಹುಚ್ಚರ ರಾಜ್ಯ ಎಂದು ಅವರು ಕರೆದರು ಎಂದರು.

ಇಂದು ವಾತಾವರಣದಲ್ಲಿ ಮಲಿನತೆ ಇದೆ. ಬಂಧುತ್ವ ನಮ್ಮ ಜನರ ಪ್ರಜ್ಞೆ. ಬಂಧುತ್ವದ ನೆಲೆಯಲ್ಲಿ ನಾವು ಬದುಕಬೇಕು. ಆಚಾರಕ್ಕರಸಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿಯಾಗು ಎಂಬ ಗೀತೆಯಂತೆ ಬದುಕಬೇಕು. ಇಂದಿನ ರಾಜಕಾರಣಿಗಳು, ಸನ್ಯಾಸಿಗಳು ದ್ವೇಷವನ್ನು ಹರಡುತ್ತಿದ್ದಾರೆ ಎಂದರು.

ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತೇವೆ ಎಂದು ಸ್ವಾಮೀಜಿಯೊಬ್ಬ ಮಾತಾಡುತ್ತಾನೆ ಎಂದರೆ ನಾವು ಎಲ್ಲಿದ್ದೇವೆ? ಧರಿಸಿಕೊಂಡ ಕಾವಿಗೆ ಬೆಲೆ ಇಲ್ಲ. ಬಾಯಲ್ಲಿ ಏನು ಬರಬೇಕೋ ಅದರ ಬದಲು ಬೇರೆ ಬರುತ್ತಿದೆ. ಇಂತಹ ರೀತಿಯಲ್ಲಿ ಯುವಕರನ್ನು ಪ್ರಚೋದಿಸಲಾಗುತ್ತಿದೆ. ಸ್ಮಶಾನ ಕುರುಕ್ಷೇತ್ರದಲ್ಲಿ ದೆವ್ವಗಳು ನರ್ತಿಸುತ್ತ ಮಾತಾಡುತ್ತಿರುಂತೆ ತೋರುತ್ತದೆ. ಇವರು ಮನುಷ್ಯರಾ ಎಂದರು.

ಪಂಪ ಮನುಷ್ಯ ಜಾತಿಯೆಲ್ಲ ಒಂದೇ ಎಂದ. ಬಸವಣ್ಣ ದಯೆಯಿಲ್ಲದ ಧರ್ಮಯಾವುದಯ್ಯಾ ದಯವೇ ಬೇಕು ಸಕಲ ಪ್ರಾಣಿಗಳಲ್ಲಿ ಎಂದ. ದಯೆಯಿಲ್ಲದ ಧರ್ಮ ಚಾತುರ್ವರ್ಣ ಧರ್ಮ. ಅಸ್ಪೃಶ್ಯತೆ, ಮೇಲು ಕೀಳು ಸೃಷ್ಟಿಸಿದ್ದು ಈ ಧರ್ಮ. ಉತ್ತಮಕುಲದಲ್ಲಿ ಹುಟ್ಟಿದೆನೆಂಬ ಕಷ್ಟದ ಹೊರೆಯ ಹೊರಿಸಿದರಯ್ಯ, ಸಂಗಕ್ಕೆ ಹುಟ್ಟಿದ ಶಿಶು ನಾನು ಎಂದು ಬಸವಣ್ಣ ತಾನು ಎರಡನೇ ಬಾರಿ ಹುಟ್ಟಿದ್ದನ್ನು ಹೇಳುತ್ತಾರೆ. ನೀಚಾತಿನೀಚರು ಎಂದ ಜಾತಿಯ ಮಗ ಎಂದವನು ಬಸವಣ್ಣ. ಮೇಲ್ಜಾತಿಗಳಲ್ಲಿ ಬಸವಪ್ರಜ್ಞೆ ಮೂಡಬೇಕು ಎಂದರು.

ಶ್ರಮ ಮೂಲಕ ತಂದೆ ತಾಯಿಗಳು ತಮ್ಮ ಮಕ್ಕಳು ಅವರ ದಾಳಗಳಾಗದಂತೆ ನೋಡಿಕೊಳ್ಳಬೇಕು. ಮಾನವೀಯತೆ, ಬಂಧುತ್ವದ ಶಿಕ್ಷಣ ಕೊಡಿಸಿ. ದೇಶ ಮಾನವೀಯತೆ, ಬಹುತ್ವವನ್ನು ಸಂರಕ್ಷಿಸಬೇಕಿದೆ. ಇದಕ್ಕೆ ಕುವೆಂಪು ಅವರು ಮನುಜಪಥ ವಿಶ್ವಪಥದ ನಡೆ ಕೊಟ್ಟಿದ್ದಾರೆ. ಅವರು ಸರ್ವಜನಾಂಗದ ಶಾಂತಿಯ ತೋಟ ಎಂದಿದ್ದಾರೆ ಎಂದರು.

ಬಹುತ್ವದ ಅಸ್ಮಿತೆ ಭಾರತ ಅಸ್ತಿತ್ವ. ಇದಕ್ಕೆ ಬೆಂಕಿ ಇಡುವ ಕೆಲಸವನ್ನು ಮಾಡಲಾಗುತ್ತಿದೆ. ಇಂದು ದೇಶದಲ್ಲಿ ದ್ವೇಷವನ್ನು ಬೆಳೆಸಲಾಗುತ್ತಿದೆ. ಶಿಕ್ಷಣದಿಂದ ಜನರನ್ನು ದೂರಮಾಡಲಾಗುತ್ತಿದೆ. ಕೊರೊನಾ ಅವಧಿಯಲ್ಲಿ ಬಡವರ, ದಲಿತರ ಮಕ್ಕಳು ಶಿಕ್ಷಣದಿಂದ ವಂಚಿತರಾದರು ಎಂದರು.

ಶಿಕ್ಷಣದಿಂದ ವಂಚಿತವಾದ ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ತಪ್ಪಿಸಲು ಎರಡೂ ಗುಂಪುಗಳ ಮೂಲಭೂತವಾದಿಗಳು, ಕರ್ಮಠ ಮನಸುಗಳು  ಪ್ರಯತ್ನಿಸುತ್ತಿವೆ. ಬಂಧುತ್ವ ವೇದಿಕೆ ಮನುಷ್ಯತ್ವದ ಬದುಕಿಗಾಗಿ ಹಾರೈಸುತ್ತಿದೆ. ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಇದೇ ನಿಟ್ಟಿನಲ್ಲಿ ವೇದಿಕೆ ಕೆಲಸ ಮಾಡುತ್ತಿದೆ ಎಂದರು.

ಅಜ್ಞಾನ, ಆವೇಶದಿಂದ ಹೊರಬಂದು ಮನುಷ್ಯರಾಗಬೇಕು. ಇಲ್ಲಿ ನೀವು ಕೇಳಿದ ವಿಷಯಗಳನ್ನು ಸಾವಿರ ಮಕ್ಕಳಿಗೆ ತಿಳಿಸಿ ಎಂದು ಅವರು ಕರೆನೀಡಿದರು.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]