October 1, 2023 8:03 am

ಜನತೆಯ ರಾಜ ಶಾಹೂ ಮಹಾರಾಜ ಜನ್ಮದಿನಾಚರಣೆ

ಬೆಳಗಾವಿ: ಸ್ಟುವರ್ಟ್ ಫ್ರೇಸರ್ ಅವರು ಕೊಲ್ಹಾಪುರದ ಛತ್ರಪತಿ ಶಾಹು ಮಹಾರಾಜ್,  ಬರೋಡಾದ ಸಯ್ಯಾಜಿರಾವ್ ಗಾಯಕ್ವಾಡ್ ಮತ್ತು ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಮಾರ್ಗದರ್ಶನ ಮಾಡಿದ್ದರು ಎಂದು ಚಿಂತಕ ಮಹಾಲಿಂಗಪ್ಪ ಆಲಬಾಳ ಹೇಳಿದರು.

ಮಾನವ ಬಂಧುತ್ವ ವೇದಿಕೆ ವತಿಯಿಂದ ಘಟಪ್ರಭಾದ ಎನ್.ಎಸ್.ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದಲ್ಲಿ ಮೀಸಲಾತಿ‌ ಜನಕ, ಸಾಮಾಜಿಕ ‌ಹರಿಕಾರ ಶಾಹು‌‌ ಮಹಾರಾಜರ 147ನೇ ಜಯಂತಿಯನ್ನು ‌ಆಚರಿಸಲಾಯಿತು.  

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಅಧ್ಯಕ್ಷತೆಯಲ್ಲಿ ನಡೆದ‌ ಕಾರ್ಯಕ್ರಮದಲ್ಲಿ ಶಾಹು‌ ಮಹಾರಾಜರ ಕುರಿತು ವಿಚಾರವಾದಿ ಮಹಾಲಿಂಗಪ್ಪ ಅಲಬಾಳ ಅವರು ಉಪನ್ಯಾಸ ನೀಡಿದರು.  

ಶೂದ್ರ, ಹಿಂದುಳಿದ, ದಲಿತ ಸಮುದಾಯ ಮತ್ತು ಮಹಿಳೆಯರಿಗೆ ಬಿಡುಗಡೆಯ ದಾರಿಯನ್ನು ಮೊಟ್ಟಮೊದಲು ತೋರಿಸಿದವರು ಶಾಹೂ ಮಹಾರಾಜ್. ಶಾಹೂ ಮಹಾರಾಜರು ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ ಪಡೆಯಲು ನೆರವು ನೀಡಿದರು ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ರವೀಂದ್ರ ನಾಯ್ಕರ್, ಶಾಹೂ ಮಹಾರಾಜರು ಕಾನೂನು ರೂಪಿಸಲು ಸಾಧ್ಯವಾಗಿದ್ದು ಏಕೆ? ಅವರು ಕಾನೂನು ರೂಪಿಸಿದ್ದರಿಂದ ಲಾಭ ಆಗಿರುವುದು ಯಾರಿಗೆ ಎಂದು ನಾವು ಸೂಕ್ಷ್ಮವಾಗಿ ಗಮನಹರಿಸಬೇಕು ಎಂದರು.

ಇಂದು ವಿದ್ಯೆ, ಉದ್ಯೋಗ, ಆಸ್ತಿ ಹಕ್ಕನ್ನು ಪಡೆದು ಬೆಳೆದಿರುವ ಲಿಂಗಾಯತ, ಒಕ್ಕಲಿಗ ಸಮುದಾಯದವರು ಶಾಹೂ ಮಹಾರಾಜ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಲಾಭ ಪಡೆದಿದ್ದಾರೆ. ಶಾಹೂ ಮಹಾರಾಜರ ಕೈಯಲ್ಲಿ ಅಧಿಕಾರ ಇದ್ದುದರಿಂದ ಅವರು ಕಾಯ್ದೆಗಳನ್ನು ರೂಪಿಸಲು, ಜಾರಿಗೆ ತರಲು ಸಾಧ್ಯವಾಯಿತು. ಇದನ್ನು ಎಲ್ಲರೂ ಅರಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಕೊರೊನಾಗೆ ಬಲಿಯಾದ ಮಾನವ ಬಂಧುತ್ವ ವೇದಿಕೆ ಸಂಚಾಲಕರಿಗೆ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಜೀವನ ಮಾಂಜ್ರೇಕರ್, ಭರಮಣ್ಣ ತೋಳಿ, ಡಾ.ಪ್ರದೀಪ ಮಾಲ್ಗುಡಿ, ಬಾಲಕೃಷ್ಣ ನಾಯಕ ಮತ್ತು ಉಷಾ ನಾಯ್ಕ ಭಾಗವಹಿಸಿದ್ದರು.

ಮಾನವ ಬಂಧುತ್ವ ವೇದಿಕೆಯ ಬೆಳಗಾವಿ ಜಿಲ್ಲಾ ಸಂಚಾಲಕರು, ಕಾರ್ಯಕರ್ತರು ಭಾಗವಹಿಸಿದರು. ಸುರೇಶ ಶಿಕಾರಿಪುರ ಅವರು ನಿರೂಪಣೆ ಮಾಡಿದರು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು