March 29, 2023 10:18 pm

ಯುವಕರ ಬದುಕು ಕಟ್ಟುವುದೇ ನಮ್ಮ ಗುರಿ: ರಾಹುಲ ಜಾರಕಿಹೊಳಿ

ಘಟಪ್ರಭಾ: ನಮ್ಮ ಯುವಕರು ದೇಶವನ್ನು ರಕ್ಷಣೆ ಮಾಡುವ ಸೇನೆ ಮತ್ತು ಸಮಾಜದಲ್ಲಿ ಜನರನ್ನು ರಕ್ಷಣೆ ಮಾಡುವ ಪೊಲೀಸ್ ಇಲಾಖೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರಿಗಳನ್ನು ಹಿಡಿದು ದೇಶ ಮತ್ತು ಸಮಾಜ ಸೇವೆ ಮಾಡುವ ಮುಲಕ ತಮ್ಮ ಬದುಕನ್ನು ಕಟ್ಟಿಕೊಂಡು ತಮ್ಮ ಕುಟುಂಬಗಳನ್ನು ಉತ್ತಮ ರೀತಿಯಲ್ಲಿ ನೋಡಿಕೊಂಡರೆ ಸತೀಶ ಜಾರಕಿಹೊಳಿ ಫೌಂಡೇಶನ್ನ ಮೂಲಕ ಮಾಡುತ್ತಿರುವ ಸಮಾಜ ಕಟ್ಟುವ ಕಾರ್ಯದ ಉದ್ದೇಶ ಈಡೇರುತ್ತದೆ, ಯುವಜನರನ್ನು ಉತ್ತಮ ಮಾರ್ಗದಲ್ಲಿ ಸಾಗುವಂತೆ ಮಾಡುವ ನಮ್ಮ ಕೆಲಸಕ್ಕೆ ಮತ್ತಷ್ಟು ಹುಮ್ಮಸ್ಸು ಬಂದಂತಾಗುತ್ತದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೆಳಿದರು.

        ಘಟಪ್ರಭದ ಸೇವಾದಳದಲ್ಲಿ ಆರಂಭವಾದ ಆಸಕ್ತ ಯುವಕರಿಗೆ ಹತ್ತು ದಿನಗಳ ಕಾಲ ನಡೆಯುವ ಎರಡನೇ ಬ್ಯಾಚಿನ ಉಚಿತ ಸೇನಾ ಮತ್ತು ಪೊಲೀಸ್ ಕಾನ್ಟೇಬಲ್ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೇನೆ ಸೇರಿ ದೇಶಕ್ಕಾಗಿ ಸೇವೆ ಸಲ್ಲಿಸುವುದು ಹಾಗೂ ಪೋಲಿಸ್ ಇಲಾಖೆಗೆ ಸೇರುವುದು ನಮ್ಮ ಯುವಕರಿಗೆ ಹೆಮ್ಮೆಯ ವಿಷಯವಾಗಿದೆ ಅದಕ್ಕಾಗಿ ಅವರು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಅವರ ಗುರಿ ಸಾಧನೆಗೆ ಸತಿಶ ಜಾರಕಿಹೊಳಿ ಫೌಂಡೇಶನ್ ಬೆನ್ನೆಲುಬಾಗಿ ಕೆಲಸ ಮಾಡಲಿದೆ ಇದರ ಸದುಪಯೋಗವನ್ನು ಎಲ್ಲ ಯುವಕರು ಪಡೆದುಕೊಳ್ಳುವಂತಾಗಬೇಕು, ಇಲ್ಲಿ ತರಬೇತಿ ಪಡೆದ ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ಸು ಸಿಗುವಂತಾಗಲಿ ಎಂದು ಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ,  ಕೆ.ಎ.ಎಸ್/ಐ.ಎ.ಎಸ್ ತರಬೇತಿ ನೀಡುವುದಕ್ಕಿಂತ ಸೇನೆ ಮತ್ತು ಪೊಲೀಸ್ ತರಬೇತಿ ನೀಡುವದಕ್ಕೆ ಮಹತ್ವ ನೀಡಿರುವದಕ್ಕೆ ಕಾರಣ ಇದು ಸಾಕಷ್ಟು ಬಡ ಯುವಕರಿಗೆ ಅನುಕೂಲವಾಗುತ್ತದೆ. ಇದು ಸನ್ಮಾನ್ಯ ಸತೀಶ ಜಾರಕಿಹೊಳಿಯವರ ಬಹಳ ದಿನಗಳ ಕನಸಾಗಿತ್ತು. ಈಗ ಅದು ನನಸಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಳಗಾವಿಯ ಟಾರ್ಗೆಟ್ ಕೋಚಿಂಗ್ ಸೆಂಟರ್ನ ಪ್ರಕಾಶ ಮೇಟಿ,   ದೈಹಿಕ ತರಬೇತುದಾರ ಸುಭಾಸ ನಾಯ್ಕ, ಶಿಕ್ಷಕರಾದ ಸಂತೋಷ ಮೆಳವಂಕಿ, ಹನಮಂತ ನಂದಿ, ಸಮಾಜ ಸೇವಕ ಶಿವು ಪಾಟೀಲ, ಉಷಾ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ಹತ್ತು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ವಿವಿಧ ಭಾಗಗಳಿಂದ ಬಂದ 70 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ