April 25, 2024 7:04 am

ಭಾರತೀಯ ಸಂಸ್ಕೃತಿ ಎಂದರೆ ಏನು?

ಬಿ.ಜೆ.ಪಿ.ಯ ಕರ್ನಾಟಕ ಉಸ್ತುವಾರಿಯಾಗಿರುವ ಅರುಣ್ ಸಿಂಗ್ ಅವರು ಬೆಳಗಾವಿಯ ಉಪ ಚುನಾವಣೆ ಪ್ರಚಾರದಲ್ಲಿ ‘ಸತೀಶ್ ಜಾರಕಿಹೊಳಿಯವರು ಭಾರತೀಯ ಸಂಸ್ಕೃತಿಯನ್ನು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಚುನಾವಣಾ ಸಮಯದಲ್ಲಿ ಟೀಕೆ, ವಿರೋಧಗಳೆಲ್ಲ ಸಹಜ. ಆದರೆ ಅರುಣ್ ಸಿಂಗ್ ಅವರು ಈ ಮಟ್ಟದ ಹತಾಶೆಯ ಹೇಳಿಕೆ ನೀಡಿದ್ದು, ಅವರ ಅಸಹಾಯಕತೆಯನ್ನು ತೋರಿಸುತ್ತದೆ.

ವಾಸ್ತವದಲ್ಲಿ ಅರುಣ ಸಿಂಗ್ ಅವರಿಗೆ ನಮ್ಮ ಚಟುವಟಿಕೆಗಳ ಹಾಗೂ ಕರ್ನಾಟಕದ ಇತಿಹಾಸದ ಅರಿವು ಇದ್ದಂತಿಲ್ಲ. ಬಸವಣ್ಣನವರ ಲಿಂಗಾಯತ ತತ್ವದ ತಿಳುವಳಿಕೆ ಕೂಡ ಇದ್ದಂತಿಲ್ಲ. ಸರ್ವ ಜನರ ಹಿತಕ್ಕಾಗಿ ಲಿಂಗಾಯತ ತತ್ವ ಚಿಂತನೆಗಳನ್ನು ಬಿತ್ತಿದ ಬಸವಣ್ಣ ನಮ್ಮ ನಾಡಿನ ಸಕಲ ಜನರ ಸದಾಕಾಲದ ಆದರ್ಶ.

ನಮ್ಮ ಪ್ರತಿ ಕಾರ್ಯಕ್ರಮಗಳಲ್ಲೂ ಈ ತತ್ವಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ವೇದಿಕೆಗಳನ್ನು ಗಮನಿಸಿದ್ದವರಿಗೆ ವೇದಿಕೆಯ ಮೇಲಿದ್ದ ವ್ಯಕ್ತಿಗಳು ಯಾರು, ಅವರು ಮಾತನಾಡಿದ ವಿಷಯಗಳೇನು ಎಂಬುದು ಎಲ್ಲರಿಗೂ ಗೊತ್ತಿರುತ್ತದೆ. ಅವರು ಮಾತನಾಡಿದ್ದೆಲ್ಲವೂ ಬಸವಣ್ಣನವರ ಲಿಂಗಾಯತ ತತ್ವಗಳ ಆದರ್ಶದ ಕುರಿತು. ವೇದಿಕೆಯಲ್ಲಿ ಹೆಚ್ಚು ಕಾಣಿಸಿಕೊಂಡದ್ದು ಕೂಡ ಲಿಂಗಾಯತ ಮಠಾಧೀಶರು ಮತ್ತು ಚಿಂತಕರು.

ಬಸವ ಮಾರ್ಗದಲ್ಲಿ ಸಾಗುವುದು ಹೇಗೆ ಭಾರತೀಯ ಸಂಸ್ಕೃತಿಯ ವಿರೋಧವಾಗುತ್ತದೆ ಎಂದು ಸಂಸ್ಕೃತಿಯನ್ನು ಗುತ್ತಿಗೆ ಪಡೆದಂತೆ ಭ್ರಮೆಯಲ್ಲಿರುವ ಅರುಣ್ ಸಿಂಗ್ ಅವರೇ ಹೇಳಬೇಕು. ಲಿಂಗಾಯತ ತತ್ವಗಳ ಕುರಿತು ಮಾತನಾಡುವುದು ನಿಮ್ಮ ಸಂಸ್ಕೃತಿಗೆ ವಿರೋಧ ಎಂದಾದರೇ ನಿಮ್ಮದು ಯಾವ ಸಂಸ್ಕೃತಿ? ಕರ್ನಾಟಕ ನೆಲದ ವಿಶ್ವ ಮಾನ್ಯ ಚಿಂತನೆಗಳಾದ ಬಸವಣ್ಣನ ವಿಚಾರಗಳೇ ನಮಗೆ ಮಾರ್ಗದರ್ಶಿ. ನಮ್ಮದು ಅಚಲ ಬಸವ ಮಾರ್ಗ.

ಕರ್ನಾಟಕ ನೆಲದಲ್ಲಿ ನಿಂತು ಮಾತನಾಡುವ ಮುನ್ನ ಹನ್ನೆರಡನೇ ಶತಮಾನದಲ್ಲಿ ಈ ನಾಡಿನಲ್ಲಿ ಮೂಡಿಬಂದ ವಚನ ಚಳುವಳಿಯ ಬಗ್ಗೆ ತಿಳಿದುಕೊಂಡು, ನೀವು ಯಾರಿಗೆ ಅವಮಾನ ಮಾಡುತ್ತಿದ್ದೀರಿ ಎಂದು ಅರಿತು ಮಾತನಾಡುವುದು ಒಳ್ಳೆಯದು. ಅರುಣ್ ಸಿಂಗ್ ಅವರು ಭಾರತೀಯ ಸಂಸ್ಕೃತಿ ಎಂದರೆ  ನಾಗಪುರದ ತಮ್ಮ ಕೇಂದ್ರ ಕಛೇರಿಯಿಂದ  ನಿರ್ದೇಶಿತ ಸಂಸ್ಕೃತಿ ಮಾತ್ರ ಎಂದು ಭ್ರಮಿಸಿದಂತಿದೆ‌.

  • ಮಹಾಲಿಂಗಪ್ಪ ಆಲಬಾಳ

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ