October 1, 2023 8:42 am

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಭಾತದಲ್ಲಿ ಅನೇಕ ಜಾತಿಗಳಿವೆ. ಇಲ್ಲಿ ಮೇಲ್ದಾತಿಗಳು ಮೇಲ್ವರ್ಗಗಳು, ಕೆಳ ಜಾತಿಗಳು ಕೆಳವರ್ಗಗಳು. ಶತಮಾನಗಳ ಕಾಲ ಕೆಳಜಾತಿಯ ಜನರಿಗೆ ಶಿಕ್ಷಣ, ಆಸ್ತಿಯಲ್ಲಿ ಹಕ್ಕು, ಆಡಳಿತದಲ್ಲಿ ಭಾಗವಹಿಸುವ ಹಕ್ಕು, ಸ್ವಾತಂತ್ರ್ಯದ ಹಕ್ಕು ಇತ್ಯಾದಿಗಳನ್ನು ನಿರಾಕರಿಸಿ ಶೋಷಿಸಿ ಗುಲಾಮರಂತೆ ನಡೆಸಿಕೊಂಡು ಬರಲಾಯಿತು. ಈ ರೀತಿಯ ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರಬೇಕೆಂಬುದು ನಮ್ಮ ಸ್ವಾತಂತ್ರ್ಯ ಹೋರಾಟದ ಬಯಕೆಯಾಗಿತ್ತು. ದೇಶವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ಎಲ್ಲಾ ಜಾತಿಯ, ಸಾಮರ್ಥ್ಯದ ಜನ ಭಾಗಿಯಾಗಿರಬೇಕು ಎನ್ನುವುದು ಆಶಯವಾಗಿತ್ತು. ಹಾಗಾಗಿ ಮೀಸಲಾತಿಯೆಂಬ ನೀತಿ ನಮ್ಮ ಸ್ವಾತಂತ್ರ್ಯ ಚಳುವಳಿಯ ಗುರಿಯಾಯಿತು.

ಸ್ವಾತಂತ್ರ್ಯ ಹೋರಾಟದ ಗುರಿಗಳ ಸಾಧನೆಗೆ ಒಂದು ಸಂವಿಧಾನದ ಅವಶ್ಯಕತೆ ಅನಿವಾರ್ಯವಾಯಿತು. ನಮ್ಮ ಸಂವಿಧಾನದಲ್ಲಿ ಪ.ಜಾ, ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ರಾಜಕೀಯ, ಶೈಕ್ಷಣಿಕ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ನೀಡಲಾಗಿದೆ.

ಚಾರಿತ್ರಿಕವಾಗಿ ಅವಕಾಶ ವಂಚಿತ ಸಮುದಾಯಗಳಿಗೆ ಮೀಸಲಾತಿಯು ಒಂದು ಮಾನವ ಹಕ್ಕು, ಸಮಾನತೆಯ ಸಾಧನೆ, ಸರ್ಕಾರದ ಆಡಳಿತದಲ್ಲಿ ಒಂದು ಪ್ರಾತಿನಿಧ್ಯ ಮತ್ತು ಎಲ್ಲ ರೀತಿಯ ಪಕ್ಷಪಾತ ಹಾಗೂ ಬಹಿಷ್ಕಾರದ ವಿರುದ್ಧ ಒಂದು ಮಹತ್ತರ ಸಾಧನೆ.

ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಎಲ್ಲರಲ್ಲಿ ಭಾವೈಕ್ಯ ಮೂಡಿಸಲು ದೃಢಸಂಕಲ್ಪ ಮಾಡಲಾಗಿದೆ. ಅಸಮಾನತೆಯಿಂದ ಭಾತೃತ್ವಕ್ಕೆ ಧಕ್ಕೆಯಾಗುತ್ತದೆ. ಭಾತೃತ್ವವಿಲ್ಲದಾಗ ದೇಶದ ಜನರ ಒಗ್ಗಟ್ಟನ್ನು ಸಾಧಿಸಲು ಸಾಧ್ಯವಿಲ್ಲ. ಸಮಾನ ಅವಕಾಶಗಳು ದೊರೆಯುವುದು ಖಚಿತವಾಗಿದ್ದರೆ ಸಂವಿಧಾನದ ಗುರಿ ಭಾತೃತ್ವವನ್ನು ಸಾಧಿಸಲು ಸಾಧ್ಯ.

ಪ್ರತಿಯೊಬ್ಬ ವ್ಯಕ್ತಿ ಆತ್ಮಗೌರವದಿಂದ ಬದುಕುವಂತಹ ಅವಕಾಶವನ್ನು ದೊರಕಿಸಿಕೊಡುವುದು ನಮ್ಮ ಸಂವಿಧಾನದ ಆಶಯ, ಸ್ಥಾನಮಾನ ಹಾಗು ಅವಕಾಶಗಳಲ್ಲಿ ಸಮಾನತೆ ಇಲ್ಲದಿದ್ದರೆ ಆತ್ಮಗೌರವವಿರಲು ಸಾಧ್ಯವಿಲ್ಲ. ಸಮಾಜದ ಒಂದು ಗಣನೀಯ ವರ್ಗದ ಜನರಿಗೆ ಅಭಿವೃದ್ಧಿ ಹೊಂದುವ, ಆಡಳಿತ ನಡೆಸುವ ಹಾಗೂ ಸಮಾಜಕ್ಕೆ ತಮ್ಮ ಉತ್ತಮವಾದ ಕೊಡುಗೆಯನ್ನು ನೀಡುವ ಸಮಾನ ಅವಕಾಶಗಳನ್ನು ಕೊಡದೇ ಇದ್ದಾಗ ಪ್ರಜಾಸತ್ತಾತ್ಮಕ ತಳಹದಿಯ ಅಂಶಗಳೇ ಕಾಣೆಯಾಗಿ ಬಿಡುತ್ತವೆ.

ಜಾತಿ, ಜನಾಂಗ, ಧರ್ಮ ಹಾಗೂ ಲಿಂಗ ಅಸಮಾನತೆಗಳನ್ನು ತೊರೆದು ಎಲ್ಲರೂ ಸಮಾನವಾಗಿ ರಾಜ್ಯದ ಆಡಳಿತದಲ್ಲಿ ಭಾಗಿಯಾದಾಗ ಮತ್ತು ಎಲ್ಲ ರೀತಿಯ ತಾರತಮ್ಯಗಳನ್ನು ನಿವಾರಿಸಿದಾಗ ಸಂವಿಧಾನದ ಮೂಲತತ್ವಗಳಾದ ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಾಮಾಜಿಕ ನ್ಯಾಯವನ್ನು ಸಾಧಿಸಲು ಸಾಧ್ಯ.

ಮೀಸಲಾತಿ ಎಂಬುದು ಬಡತನ ನಿರ್ಮೂಲನ ಕಾರ್ಯಕ್ರಮವೂ ಅಲ್ಲ ಅಥವಾ ಜಾತಿಗಳ ವಿನಾಶದ ಕಾರ್ಯಕ್ರಮವೂ ಅಲ್ಲ. ಪ್ರಾತಿನಿಧ್ಯ ವಂಚಿತರಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ, ಇದೊಂದು ಭಿಕ್ಷೆಯಲ್ಲ ಬದಲಿಗೆ, ಅದೊಂದು ಮಾನವ ಹಕ್ಕು ಮತ್ತು ಸಂವಿಧಾನದ ಹಕ್ಕು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು